AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಠಾಣೆಗೆ ಕರೆತರುತ್ತಿದ್ದಾಗ ಆರೋಪಿಯಿಂದ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್ ನಿಂದ ಇರಿತ

ಆರೋಪಿ ರೌಡಿ ಆಸಾಮಿಯನ್ನು ಠಾಣೆಗೆ ಕರೆತರಲು ಹೋಗಿದ್ದಾಗ ಆರೋಪಿ ಮಹಿಳಾ ಹೆಡ್​ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್​​ನಿಂದ ಇರಿದಿದ್ದಾನೆ.

ಠಾಣೆಗೆ ಕರೆತರುತ್ತಿದ್ದಾಗ ಆರೋಪಿಯಿಂದ ಮಹಿಳಾ ಹೆಡ್ ಕಾನ್ಸ್​ಟೇಬಲ್​ಗೆ ಡ್ರ್ಯಾಗರ್ ನಿಂದ ಇರಿತ
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Aug 17, 2022 | 8:25 AM

Share

ಬೆಂಗಳೂರು: ಆರೋಪಿ (Accused) ರೌಡಿ ಆಸಾಮಿಯನ್ನು ಠಾಣೆಗೆ ಕರೆತರಲು ಹೋಗಿದ್ದಾಗ ಆರೋಪಿ ಮಹಿಳಾ ಹೆಡ್​ ಕಾನ್ಸ್​ಟೇಬಲ್​ಗೆ (Police Head Constable) ಡ್ರ್ಯಾಗರ್​​ನಿಂದ ಇರಿದಿದ್ದಾನೆ.  ವಿನುತಾ(45) ಇರಿತಕ್ಕೆ ಒಳಗಾದ ಮಹಿಳಾ ಪೊಲೀಸ್ ಹೆಡ್​ಕಾನ್ಸ್​ಟೇಬಲ್. ಆರೋಪಿ ರೌಡಿ ಆಸಾಮಿ ಶೇಕ್ ಶರೀಫ್ ಶರೀಫ್ (25) ನಿಂದ ಕೃತ್ಯ ನಡೆದಿದೆ. ಆರೋಪಿ ಮೇಲೆ ಕೊಲೆ ಹಾಗೂ ಕೊಲೆಯತ್ನ ಪ್ರಕರಣಗಳು ಎಚ್ ಎ ಎಲ್ ಠಾಣೆಯಲ್ಲಿ ದಾಖಲಾಗಿದ್ದವು.

ಆರೋಪಿ ಇತ್ತೀಚೆಗರ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರಬಂದಿದ್ದನು. ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಅಲ್ಲದೇ ಮತ್ತೆ ಕೊಲೆ ಮಾಡಲು ಸಂಚು ರೂಪಿಸಿರೋದಾಗಿ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಹಿನ್ನಲೆ ಆತನನ್ನು ಠಾಣೆಗೆ ಕರೆತರಲು ಆಗಸ್ಟ್ 5 ರಂದು ಮಹಿಳಾ ಹೆಡ್​ ಕಾನ್ಸ್​ಟೇಬಲ್ ವಿನುತಾ ಮತ್ತು ತಂಡ ಹೋಗಿತ್ತು.

ಪೊಲೀಸರಿಗೆ ಆರೋಪಿ ಜ್ಯೋತಿನಗರದಿಂದ ರೆಡ್ಡಿ ಪಾಳ್ಯಕ್ಕೆ ತೆರಳ್ತಿರುವ ಬಗ್ಗೆ  ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ರಾತ್ರಿ 9.30 ಕ್ಕೆ ಆತನನ್ನು ಕರೆದುಕೊಂಡು ಹೋಗಲು ತಂಡ ಮುಂದಾಗಿದೆ. ಈ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಡ್ರ್ಯಾಗರ್ ನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೆ ಸ್ಥಳೀಯರ ಸಹಾಯದಿಂದ ಆತನ್ನನ್ನು ಹಿಡಿದು ಪೊಲೀಸರು ಠಾಣೆಗೆ ಕರೆತಂದಿದ್ದಾರೆ.

ಗಾಯಾಳು ಮಹಿಳಾ ಹೆಡ್​ ಕಾನ್ಸ್​ಟೇಬಲ್​ ಜೀವಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಘಟನೆ ಸಂಬಂದ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ವರು ಅಂತಾರಾಜ್ಯ ಕಳ್ಳರನ್ನ ಬಂಧಿಸಿ ಹುಬ್ಬಳ್ಳಿ ಪೊಲೀಸ್​

ಹುಬ್ಬಳ್ಳಿ: ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ನಾಲ್ವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡು ಮೂಲದ ವೇಲೊರು ಗ್ರಾಮದ ರಕ್ಷಿತ, ಪಾವಗಡ ನಿವಾಸಿ ನಿತಿನ್, ಹೊಸಪೇಟೆ ನಿವಾಸಿಗಳಾದ ಮಂಜು ಅಲಿಯಾಸ್​ ಡಾಲಿ ಹಾಗೂ ಅರುಣ ಬಂಧಿತ ಆರೋಪಿಗಳು.  10ಕ್ಕೂ ಹೆಚ್ಚು ಅಂಗಡಿಗಳ ಶೆಟರ್ಸ್​ ಮುರಿದು ನಗದು ದೋಚಿದ್ದರು. ಈ ಚಾಲಾಕಿ ಕಳ್ಳರು ಹುಬ್ಬಳ್ಳಿ ಅಲ್ಲದೇ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಠಾಣೆಗೆ ಬೇಕಾದವರು‌.

Published On - 8:19 am, Wed, 17 August 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ