AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿಕೆ ಒಡ್ಡಿ ದಂಪತಿಗಳ ಬಳಿಯಿಂದ 150 ಲಕ್ಷ ರೂ. ವಿತ್ ​ಡ್ರಾ ಮಾಡಿಸಿಕೊಂಡ ಆರೋಪಿ

ಪೊಲೀಸ್ ಸೋಗಿನಲ್ಲಿ ಮನೆಗೆ ನುಗ್ಗಿ ಉತ್ತರ ಭಾರತ ಮೂಲದ ದಂಪತಿಗೆ ಬೆದರಿಕೆ ಒಡ್ಡಿ 150 ಲಕ್ಷ ರೂ. ಹಣ ವಸೂಲಿ ಮಾಡಿರುವ ಘಟನೆ ಬೆಂಗಳೂರಿನ ಹೆಚ್​ಎಸ್​ಆರ್ ಲೇಔಟ್​​ನ 3ನೇ ಸೆಕ್ಷಟ್ ಫ್ಲಾಟ್​​ನಲ್ಲಿ ನಡೆದಿದೆ.

ಬೆದರಿಕೆ ಒಡ್ಡಿ ದಂಪತಿಗಳ ಬಳಿಯಿಂದ 150 ಲಕ್ಷ ರೂ. ವಿತ್ ​ಡ್ರಾ ಮಾಡಿಸಿಕೊಂಡ ಆರೋಪಿ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Dec 25, 2023 | 10:10 AM

Share

ಬೆಂಗಳೂರು, ಡಿಸೆಂಬರ್​ 25: ಪೊಲೀಸರೆಂದು (Police) ದಂಪತಿಯಿಂದ ಹಣ ವಸೂಲಿ ಮಾಡಿರುವ ಘಟನೆ ನಗರದ ಹೆಚ್​ಎಸ್​ಆರ್ ಲೇಔಟ್​​ನ (HSR Layout) 3ನೇ ಸೆಕ್ಷಟ್ ಫ್ಲಾಟ್​​ನಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ದಂಪತಿಗಳು ವಾಸವಾಗಿದ್ದ ಫ್ಲಾಟ್​​ಗೆ ಡಿಸೆಂಬರ್ 17 ರಂದು ರಾತ್ರಿ 9:30ರ ಸುಮಾರಿಗೆ ಪೊಲೀಸರ ಸೋಗಿನಲ್ಲಿ ಆರೋಪಿ ಬಂದಿದ್ದಾನೆ. ನಂತರ ಮನೆಯಲ್ಲಿ ಗಾಂಜಾ ಇಡುತ್ತೇವೆ ಎಂದು ದಂಪತಿಗೆ ಬೆದರಿಕೆ ಹಾಕಿದ್ದಾನೆ. ಮನೆಯಲ್ಲಿನ ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಡಿಮ್ಯಾಂಡ್ ಮಾಡಿದ್ದಾನೆ.

ಬಳಿಕ ಮನೆ ಮಾಲಿಕ ಸಂಜೀವ್ ಭೋರಾ ಅವರನ್ನು ಕರೆದೊಯ್ದು ಎಟಿಎಂಗಳಿಂದ ಹಣ ಡ್ರಾ ಮಾಡಿಸಿದ್ದಾನೆ. ನಂತರ ಮನೆಗೆ ಬಂದು ಎಟಿಎಮ್ ಕಾರ್ಡ್ ಜೊತೆಗೆ ಸಂಜೀವ್ ಭೋರಾ ಅವರ ಪತ್ನಿಯನ್ನು ಕೂಡ ಕರೆದೊಯ್ದು ಸರ್ಜಾಪುರ ರಸ್ತೆ ಬಳಿ ಹಣ ಡ್ರಾ ಮಾಡಿಸಿದ್ದಾನೆ. ಬಳಿಕ ಮಹಿಳೆಯನ್ನು ಆಕೆಯ ಮನೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿ ಒಟ್ಟು 150 ಲಕ್ಷ ರೂ. ಅನ್ನು ಎರಡು ಮೂರು ಎಟಿಎಮ್​ಗಳಿಂದ ಡ್ರಾ ಮಾಡಿಸಿಕೊಂಡಿದ್ದಾನೆ. ಆರೋಪಿ ಬೆಳಗಿನ ಜಾವ 3 ಗಂಟೆವರೆಗೆ ದಂಪತಿ ಮನೆಯಲ್ಲಿ ಸುತ್ತಾಡಿದ್ದಾನೆ.

ಇದನ್ನೂ ಓದಿ: ಗಾಂಜಾ ಪ್ರಕರಣ ಬೇಧಿಸಲು ಹೋದ ಕರ್ನಾಟಕ ಪೊಲೀಸ್​​​ ಒಡಿಶಾದಲ್ಲಿ ಅರೆಸ್ಟ್!

ಘಟನೆ ಎರಡು ಮೂರು ದಿನಗಳ ನಂತರ ನಕಲಿ ಪೊಲೀಸ್ ‌ಎಂದು ಗೊತ್ತಾಗಿದೆ. ಕೂಡಲೆ ಮನೆ ಮಾಲೀಕ ಸಂಜೀವ್ ಭೋರಾ ಡಿಸೆಂಬರ್​ 20 ರಂದು ಹೆಚ್.ಎಸ್.ಆರ್ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಏರಿಯಾದ ಸಿಸಿ ಕ್ಯಾಮೆರಾಗಳನ್ನು ಆಧರಿಸಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Mon, 25 December 23

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?