AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಬೇರೆ ಬೇರೆ ಯುವತಿಯರಿಗೂ ಪ್ರೀತಿಸಲು ಪೀಡಿಸುತ್ತಿದ್ದ ಆರೋಪಿ ನಾಗೇಶ್

ಎರಡು ವರ್ಷದ ಹಿಂದೆ ಮತ್ತೋರ್ವ ಯುವತಿಗೂ ಹೀಗೆ ಕಾಟ ಕೊಟ್ಟಿದ್ದನಂತೆ. ಕೊಡಿಯಾಲಂನಲ್ಲಿರುವ ತಮ್ಮ ಮನೆ ಪಕ್ಕದಲ್ಲಿದ್ದ ಯುವತಿಯನ್ನು ಪೀಡಿಸುತ್ತಿದ್ದನಂತೆ. ಆತನ ಕಾಟ ತಾಳಲಾರದೇ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಳು.

ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಬೇರೆ ಬೇರೆ ಯುವತಿಯರಿಗೂ ಪ್ರೀತಿಸಲು ಪೀಡಿಸುತ್ತಿದ್ದ ಆರೋಪಿ ನಾಗೇಶ್
ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.
TV9 Web
| Edited By: |

Updated on: May 11, 2022 | 9:59 AM

Share

ಬೆಂಗಳೂರು: ಸುಂಕದಕಟ್ಟೆಯಲ್ಲಿ (Sunkadakatte) ಯುವತಿ ಮೇಲೆ ಆ್ಯಸಿಡ್ (Acid) ದಾಳಿ ನಡೆಸಿದ ಕೇಸ್ಗೆ ಸಂಬಂಧಿಸಿ ಪೊಲೀಸ್ ತನಿಖೆಯಲ್ಲಿ ಆರೋಪಿ ನಾಗೇಶ್ ಬಗೆಗಿನ ಭಯಾನಕ ಸತ್ಯ ಬಯಲಾಗಿದೆ. ಈ ಹಿಂದೆ ಕೂಡ ನಾಗೇಶ್ ಬೇರೆ ಬೇರೆ ಯುವತಿಯರನ್ನ ಪ್ರೀತಿಸುವಂತೆ ಕಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಗೇಶ್ ಮೂಲತಃ ಕೃಷ್ಣಗಿರಿ ಜಿಲ್ಲೆಯ ಕೊಡಿಯಾಲಂ ನಿವಾಸಿ. 7 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಯುವತಿ ದೊಡ್ಡಮ್ಮ ಮನೆಯಲ್ಲಿ ಬಾಡಿಗೆಗೆ ಇದ್ದ. ಪ್ರೀತಿ ಮಾಡು ಅಂತಾ ಯುವತಿಯ ಹಿಂದೆ ಬಿದ್ದಿದ್ದ. ಮನೆ ಖಾಲಿ ಮಾಡಿಸಿದ ಬಳಿಕ ತಮ್ಮ ಸ್ವಂತ ಊರು ಕೊಡಿಯಾಲಂಗೆ ಹೋಗಿದ್ದ.

ಎರಡು ವರ್ಷದ ಹಿಂದೆ ಮತ್ತೋರ್ವ ಯುವತಿಗೂ ಹೀಗೆ ಕಾಟ ಕೊಟ್ಟಿದ್ದನಂತೆ. ಕೊಡಿಯಾಲಂನಲ್ಲಿರುವ ತಮ್ಮ ಮನೆ ಪಕ್ಕದಲ್ಲಿದ್ದ ಯುವತಿಯನ್ನು ಪೀಡಿಸುತ್ತಿದ್ದನಂತೆ. ಆತನ ಕಾಟ ತಾಳಲಾರದೇ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಳು. ಯುವತಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದು ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದರು. ನಂತರ ಆ ಯುವತಿಯನ್ನ ಬೇರೆ ಹುಡುಗನಿಗೆ ಮದುವೆ ಮಾಡಿಕೊಡಲಾಗಿತ್ತು. ನಂತರ ಮತ್ತೆ ಕೊಡಿಯಾಲಂ ಬಿಟ್ಟು ಬೆಂಗಳೂರಿಗೆ ಬಂದಿದ್ದ.

ಮತ್ತೆ ಬೆಂಗಳೂರಿಗೆ ಬಂದು ಅದೇ ಯುವತಿಗೆ ಪ್ರೀತಿಸುವಂತೆ ಪೀಡಿಸಿದ್ದ. ಪ್ರೀತಿ ತಿರಸ್ಕರಿಸಿದಕ್ಕೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ. ನಾಗೇಶ್ ಮತ್ತಷ್ಟು ಹುಡುಗಿಯರಿಗೆ ಕಾಟ ಕೊಟ್ಟಿದ್ದಾನೆ ಎನ್ನುವ ಮಾಹಿತಿ ಕೂಡ ಸಿಕ್ಕಿದ್ದು, ಆತನ ಪತ್ತೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ರಾಜ್ಯ, ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ದೈವ ಭಕ್ತ ಆರೋಪಿ ನಾಗೇಶ್: ಆರೋಪಿ ನಾಗೇಶ್ ಅತೀವ ದೈವ ಭಕ್ತನಾಗಿದ್ದಾನೆ. ಧರ್ಮಸ್ಥಳ ಮತ್ತು ತಿರುಪತಿಗೆ ನಿರಂತರವಾಗಿ ಹೋಗಿ ಬರುತ್ತಿದ್ದ. ಅಲ್ಲೇ ಅಡಗಿ ಕುಳಿತಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ತಿರುಪತಿ ಸುತ್ತಮುತ್ತಲಿದ್ದ 4 ಸಾವಿರ ಲಾಡ್ಜ್ಗಳ ಶೋಧ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ ಒಂದೇ ಒಂದು ಲಾಡ್ಜ್ ಕೂಡ ಬಿಡದೆ ಹುಡುಕಾಟ ನಡೆಸಿದ್ದಾರೆ. ಕೊಯ್ಯಮುತ್ತೂರಿನ ಈಶಾ ಫೌಂಡೇಶನ್ನಲ್ಲಿಯೂ ತಡಕಾಡಿದ್ದಾರೆ. ಸದ್ಯ ಪೊಲೀಸರ ತಂಡ ಡೆಹ್ರಡೂನ್ಗೆ ಹೋಗಿದೆ.

ನಾಗೇಶ್ ಹೋಲುವ ವ್ಯಕ್ತಿ ಕಂಡು ಡೆಹ್ರಾಡೂನ್ ಬಿಎಸ್ಎಫ್ ಯೋಧ ಪೊಲೀಸರಿಗೆ ಕರೆ ಮಾಡಿದ್ದಾರೆ. ಹೀಗಾಗಿ ಪೊಲೀಸರು ಡೆಹ್ರಡೂನ್ಗೆ ತೆರಳಿದ್ದಾರೆ. ನಾಗೇಶ್ ಮೊಬೈಲ್, ಎಟಿಎಂ ಯಾವುದನ್ನು ಬಳಸುತ್ತಿಲ್ಲ. ಸ್ನೇಹಿತರು ಕುಟುಂಬಸ್ಥರು ಯಾರ ಸಂಪರ್ಕ ಕೂಡ ಮಾಡುತ್ತಿಲ್ಲ. ಆತನ ಬಗೆಗಿನ ಒಂದೇ ಒಂದು ಮಾಹಿತಿ ಕೂಡ ಪೊಲೀಸರಿಗೆ ಇಲ್ಲ.

ಇದನ್ನೂ ಓದಿ

Kedaranath Dham: ಹವಾಮಾನ ವೈಪರೀತ್ಯದ ನಡುವೆಯೂ ಕೇದಾರನಾಥಕ್ಕೆ ಭೇಟಿ ನೀಡಿದ 80,000ಕ್ಕೂ ಹೆಚ್ಚು ಭಕ್ತರು; ವಿಡಿಯೋ ಇಲ್ಲಿದೆ

USD Vs Rupee Value: ಅಮೆರಿಕದ ಡಾಲರ್ ವಿರುದ್ಧ ರೂಪಾಯಿ ನೆಲ ಕಚ್ಚಲು ಇಲ್ಲಿವೆ ಕಾರಣಗಳು

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?