AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಬೇರೆ ಬೇರೆ ಯುವತಿಯರಿಗೂ ಪ್ರೀತಿಸಲು ಪೀಡಿಸುತ್ತಿದ್ದ ಆರೋಪಿ ನಾಗೇಶ್

ಎರಡು ವರ್ಷದ ಹಿಂದೆ ಮತ್ತೋರ್ವ ಯುವತಿಗೂ ಹೀಗೆ ಕಾಟ ಕೊಟ್ಟಿದ್ದನಂತೆ. ಕೊಡಿಯಾಲಂನಲ್ಲಿರುವ ತಮ್ಮ ಮನೆ ಪಕ್ಕದಲ್ಲಿದ್ದ ಯುವತಿಯನ್ನು ಪೀಡಿಸುತ್ತಿದ್ದನಂತೆ. ಆತನ ಕಾಟ ತಾಳಲಾರದೇ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಳು.

ಸುಂಕದಕಟ್ಟೆಯಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ; ಬೇರೆ ಬೇರೆ ಯುವತಿಯರಿಗೂ ಪ್ರೀತಿಸಲು ಪೀಡಿಸುತ್ತಿದ್ದ ಆರೋಪಿ ನಾಗೇಶ್
ಆರೋಪಿ ನಾಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.
TV9 Web
| Edited By: sandhya thejappa|

Updated on: May 11, 2022 | 9:59 AM

Share

ಬೆಂಗಳೂರು: ಸುಂಕದಕಟ್ಟೆಯಲ್ಲಿ (Sunkadakatte) ಯುವತಿ ಮೇಲೆ ಆ್ಯಸಿಡ್ (Acid) ದಾಳಿ ನಡೆಸಿದ ಕೇಸ್ಗೆ ಸಂಬಂಧಿಸಿ ಪೊಲೀಸ್ ತನಿಖೆಯಲ್ಲಿ ಆರೋಪಿ ನಾಗೇಶ್ ಬಗೆಗಿನ ಭಯಾನಕ ಸತ್ಯ ಬಯಲಾಗಿದೆ. ಈ ಹಿಂದೆ ಕೂಡ ನಾಗೇಶ್ ಬೇರೆ ಬೇರೆ ಯುವತಿಯರನ್ನ ಪ್ರೀತಿಸುವಂತೆ ಕಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಗೇಶ್ ಮೂಲತಃ ಕೃಷ್ಣಗಿರಿ ಜಿಲ್ಲೆಯ ಕೊಡಿಯಾಲಂ ನಿವಾಸಿ. 7 ವರ್ಷದ ಹಿಂದೆ ಬೆಂಗಳೂರಿಗೆ ಬಂದು ಯುವತಿ ದೊಡ್ಡಮ್ಮ ಮನೆಯಲ್ಲಿ ಬಾಡಿಗೆಗೆ ಇದ್ದ. ಪ್ರೀತಿ ಮಾಡು ಅಂತಾ ಯುವತಿಯ ಹಿಂದೆ ಬಿದ್ದಿದ್ದ. ಮನೆ ಖಾಲಿ ಮಾಡಿಸಿದ ಬಳಿಕ ತಮ್ಮ ಸ್ವಂತ ಊರು ಕೊಡಿಯಾಲಂಗೆ ಹೋಗಿದ್ದ.

ಎರಡು ವರ್ಷದ ಹಿಂದೆ ಮತ್ತೋರ್ವ ಯುವತಿಗೂ ಹೀಗೆ ಕಾಟ ಕೊಟ್ಟಿದ್ದನಂತೆ. ಕೊಡಿಯಾಲಂನಲ್ಲಿರುವ ತಮ್ಮ ಮನೆ ಪಕ್ಕದಲ್ಲಿದ್ದ ಯುವತಿಯನ್ನು ಪೀಡಿಸುತ್ತಿದ್ದನಂತೆ. ಆತನ ಕಾಟ ತಾಳಲಾರದೇ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಳು. ಯುವತಿ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಂದು ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದರು. ನಂತರ ಆ ಯುವತಿಯನ್ನ ಬೇರೆ ಹುಡುಗನಿಗೆ ಮದುವೆ ಮಾಡಿಕೊಡಲಾಗಿತ್ತು. ನಂತರ ಮತ್ತೆ ಕೊಡಿಯಾಲಂ ಬಿಟ್ಟು ಬೆಂಗಳೂರಿಗೆ ಬಂದಿದ್ದ.

ಮತ್ತೆ ಬೆಂಗಳೂರಿಗೆ ಬಂದು ಅದೇ ಯುವತಿಗೆ ಪ್ರೀತಿಸುವಂತೆ ಪೀಡಿಸಿದ್ದ. ಪ್ರೀತಿ ತಿರಸ್ಕರಿಸಿದಕ್ಕೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ. ನಾಗೇಶ್ ಮತ್ತಷ್ಟು ಹುಡುಗಿಯರಿಗೆ ಕಾಟ ಕೊಟ್ಟಿದ್ದಾನೆ ಎನ್ನುವ ಮಾಹಿತಿ ಕೂಡ ಸಿಕ್ಕಿದ್ದು, ಆತನ ಪತ್ತೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ರಾಜ್ಯ, ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ದೈವ ಭಕ್ತ ಆರೋಪಿ ನಾಗೇಶ್: ಆರೋಪಿ ನಾಗೇಶ್ ಅತೀವ ದೈವ ಭಕ್ತನಾಗಿದ್ದಾನೆ. ಧರ್ಮಸ್ಥಳ ಮತ್ತು ತಿರುಪತಿಗೆ ನಿರಂತರವಾಗಿ ಹೋಗಿ ಬರುತ್ತಿದ್ದ. ಅಲ್ಲೇ ಅಡಗಿ ಕುಳಿತಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ತಿರುಪತಿ ಸುತ್ತಮುತ್ತಲಿದ್ದ 4 ಸಾವಿರ ಲಾಡ್ಜ್ಗಳ ಶೋಧ ನಡೆಸಿದ್ದಾರೆ. ಧರ್ಮಸ್ಥಳದಲ್ಲಿ ಒಂದೇ ಒಂದು ಲಾಡ್ಜ್ ಕೂಡ ಬಿಡದೆ ಹುಡುಕಾಟ ನಡೆಸಿದ್ದಾರೆ. ಕೊಯ್ಯಮುತ್ತೂರಿನ ಈಶಾ ಫೌಂಡೇಶನ್ನಲ್ಲಿಯೂ ತಡಕಾಡಿದ್ದಾರೆ. ಸದ್ಯ ಪೊಲೀಸರ ತಂಡ ಡೆಹ್ರಡೂನ್ಗೆ ಹೋಗಿದೆ.

ನಾಗೇಶ್ ಹೋಲುವ ವ್ಯಕ್ತಿ ಕಂಡು ಡೆಹ್ರಾಡೂನ್ ಬಿಎಸ್ಎಫ್ ಯೋಧ ಪೊಲೀಸರಿಗೆ ಕರೆ ಮಾಡಿದ್ದಾರೆ. ಹೀಗಾಗಿ ಪೊಲೀಸರು ಡೆಹ್ರಡೂನ್ಗೆ ತೆರಳಿದ್ದಾರೆ. ನಾಗೇಶ್ ಮೊಬೈಲ್, ಎಟಿಎಂ ಯಾವುದನ್ನು ಬಳಸುತ್ತಿಲ್ಲ. ಸ್ನೇಹಿತರು ಕುಟುಂಬಸ್ಥರು ಯಾರ ಸಂಪರ್ಕ ಕೂಡ ಮಾಡುತ್ತಿಲ್ಲ. ಆತನ ಬಗೆಗಿನ ಒಂದೇ ಒಂದು ಮಾಹಿತಿ ಕೂಡ ಪೊಲೀಸರಿಗೆ ಇಲ್ಲ.

ಇದನ್ನೂ ಓದಿ

Kedaranath Dham: ಹವಾಮಾನ ವೈಪರೀತ್ಯದ ನಡುವೆಯೂ ಕೇದಾರನಾಥಕ್ಕೆ ಭೇಟಿ ನೀಡಿದ 80,000ಕ್ಕೂ ಹೆಚ್ಚು ಭಕ್ತರು; ವಿಡಿಯೋ ಇಲ್ಲಿದೆ

USD Vs Rupee Value: ಅಮೆರಿಕದ ಡಾಲರ್ ವಿರುದ್ಧ ರೂಪಾಯಿ ನೆಲ ಕಚ್ಚಲು ಇಲ್ಲಿವೆ ಕಾರಣಗಳು

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು