AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಆರೋಪ, ಪತ್ನಿ ನೇಣಿಗೆ ಶರಣು! ಪ್ರೀತಿಸಿ ವಿವಾಹವಾಗಿದ್ದ ಜೋಡಿಯ ಬಾಳಲ್ಲಿ ಆಗಿದ್ದೇನು?

ಕಾಲೇಜಿಗೆ ಹೋಗೋದು ಬಿಟ್ಟು ತನ್ನ ಪ್ರಿಯಕರನೊಂದಿಗೆ ಸುತ್ತಾಡುತ್ತಿದ್ದ ಆಕೆ, ಕೊನೆಗೆ ಮನೆಯವರ ವಿರೋಧದ ನಡುವೆ ತನ್ನ ಪ್ರಿಯಕರನೊಂದಿಗೆ ಮದುವೆ ಮಾಡಿಕೊಂಡಿದ್ದಳು. ಇನ್ನೂ ಮದುವೆಯಾಗಿ ಈಗ ತಾನೆ 8 ತಿಂಗಳು ಆಗಿದೆ. ಆಗಲೇ ಗಂಡನ ಮನೆಯಲ್ಲಿ ನವವಿವಾಹಿತೆ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ. 

ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಆರೋಪ, ಪತ್ನಿ ನೇಣಿಗೆ ಶರಣು! ಪ್ರೀತಿಸಿ ವಿವಾಹವಾಗಿದ್ದ ಜೋಡಿಯ ಬಾಳಲ್ಲಿ ಆಗಿದ್ದೇನು?
ಮೃತ ಯುವತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Dec 06, 2023 | 7:56 PM

Share

ಚಿಕ್ಕಬಳ್ಳಾಪುರ, ಡಿ.06: ಜಿಲ್ಲೆಯ ಚಿಂತಾಮಣಿ(Chintamani) ನಗರದ ವೆಂಕಟಗಿರಿಕೋಟೆಯ ನಿವಾಸಿಯಾದ ಮುಸ್ಕಾನ್ ತಾಜ್ ಎಂಬುವವರು ತಂದೆ-ತಾಯಿಯನ್ನು ದಿಕ್ಕರಿಸಿ ಪ್ರೇಮ ವಿವಾಹ(Love marriage)ವಾಗಿದ್ದರು. ಫರ್ವೀನ್ ತಾಜ್ ಹಾಗೂ ಜಾಬೀರ್ ದಂಪತಿಗಳ ಎರಡನೇ ಮಗಳಾದ ಮುಸ್ಕಾನ್ ತಾಜ್, ವೆಂಕಟಗಿರಿಕೋಟೆ ಬಡಾವಣೆಯ ನಿವಾಸಿ ಆಜಾಮ್ ಎಂಬ ಯುವಕನ್ನು ಪ್ರೀತಿಸಿ, ಕೊನೆಗೆ ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹವಾಗಿದ್ದರು. ಆದ್ರೆ, ಇನ್ನೂ ಮದುವೆಯಾಗಿ ಈಗ ತಾನೆ 8 ತಿಂಗಳ ಆಗಿತ್ತು. ಆಗಲೇ ಗಂಡನ ಮನೆಯಲ್ಲಿ ಮುಸ್ಕಾನ್ ತಾಜ್ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಇನ್ನು ಯುವಕ ಆಜಾಮ್, ಪ್ರೋಗ್ರಾಮ್​ಗಳಲ್ಲಿ ತಮಟೆ ಬಾರಿಸಿ ಜೀವನ ಮಾಡುತ್ತಿದ್ದ. ಇಬ್ಬರು ಹಠಕ್ಕೆ ಬಿದ್ದು ಪ್ರೀತಿ-ಪ್ರೇಮ ಎಂದು ಸುತ್ತಾಡಿದ ಕಾರಣ ತಮ್ಮ ಮಗಳು ಸುಖವಾಗಿರಲೆಂದು ಭಾವಿಸಿದ ಯುವತಿಯ ಪೋಷಕರು, ಮಗಳಿಗೆ ಎಲ್ಲಾ ರೀತಿಯ ಮನೆ ಬಳಕೆ ವಸ್ತುಗಳನ್ನು ನೀಡಿ ಚಿಂತಾಮಣಿಯ ಮಸೀದಿಯೊಂದರಲ್ಲಿ ಸರಳವಾಗಿ ವಿವಾಹ ಮಾಡಿದ್ದರು. ಮದುವೆಯಾದ ಹೊಸತರಲ್ಲಿ ಊಟಿ , ಕೊಡೈಕೆನಾಲ್, ಹೊಗೇನಕಲ್ ಎಂದು ಸುತ್ತಾಡಿದ್ದ ಜೋಡಿ. ಜಾಲಿಯಾಗಿ ಜೀವನ ನಡೆಸಿದ್ದರು.

ಇದನ್ನೂ ಓದಿ:ಜಿಗೇನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕೊಂದು ಪತಿಯೂ ನೇಣಿಗೆ ಶರಣು; 5 ಮಕ್ಕಳು ಅನಾಥ

ಪ್ರೀತಿಸಿ ವಿವಾಹವಾಗಿದ್ದ ಜೋಡಿಯ ಬಾಳಲ್ಲಿ ಆಗಿದ್ದೇನು?

ಹೀಗೆ ಅನ್ಯೂನ್ಯವಾಗಿದ್ದ ಜೋಡಿಗಳ ಮಧ್ಯೆ ಇತ್ತೀಚೆಗೆ ಐನೂರು ರೂಪಾಯಿ ಹಣಕ್ಕಾಗಿ ಮನಸ್ತಾಪ ಉಂಟಾಗಿತ್ತು. ಅದೇ ವಿಚಾರ ದೊಡ್ಡದಾಗಿ ಬೆಳೆದು ಕುಟುಂಬ ಕಲಹಕ್ಕೂ ಕಾರಣವಾಗಿತ್ತಂತೆ. ಇದೇ ವಿಚಾರದಿಂದ ನೊಂದು ತಮ್ಮ ಮಗಳು ಮೃತಪಟ್ಟಿದ್ದು, ಅದಕ್ಕೆ ಆಕೆಯ ಗಂಡನೆ ಕಾರಣ ಎಂದು ಮೃತಳ ಪೋಷಕರು ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಓದುವ ವಯಸ್ಸಿನಲ್ಲಿ ಪ್ರೀತಿಸಿ ವಿವಾಹವಾಗಿದ್ದ ಮುಸ್ಕಾನ್ ತಾಜ್, ಕ್ಷುಲ್ಲಕ ಕಾರಣಕ್ಕೆ ಗಂಡನ ಜೊತೆ ಮನಸ್ಥಾಪ ಮಾಡಿಕೊಂಡು ಸಾವಿನ ಮನೆ ಸೇರಿದ್ದು ಮಾತ್ರ ವಿಪರ್ಯಾಸವೆ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ