AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!

ಆನೆ ಮೃತಪಟ್ಟಾಗ ಮಾಹಿತಿ ಮುಚ್ಚಿಟ್ಟು ಆನೆಯನ್ನ ಆರೋಪಿ ಹೂತಿದ್ದ. ವೀರಾಪುರ ಗ್ರಾಮದ ಚಂದ್ರೇಗೌಡ,ನಾಗರಾಜ್, ತಿಲಕ್​ರಿಂದ ಕೃತ್ಯವ್ಯಸಗಲಾಗಿದೆ. ಆರು ತಿಂಗಳ ಹಿಂದೆ ಆನೆ ಕರೆಂಟ್ ಶಾಕ್​ನಿಂದ ಕಾಡಾನೆ ಸಾವನ್ನಪ್ಪಿದೆ.

ಕಾಡಾನೆ ಕೊಂದು ದಂತ ಮಾರುವ ವೇಳೆ ಸಿಕ್ಕಿಬಿದ್ದ ಆರೋಪಿಗಳು: ಆನೆ ಕಳೇಬರ ಹೊರತೆಗೆದು ಮರಣೋತ್ತರ ಪರೀಕ್ಷೆ!
ಆನೆ ಮೃತದೇಹ.
TV9 Web
| Edited By: |

Updated on: Mar 20, 2022 | 12:43 PM

Share

ಹಾಸನ: ಕಾಡಾನೆ ಕೊಂದು ದಂತ ತೆಗೆದು ಮಾರಾಟ ಮಾಡೋ ವೇಳೆ ಆರೋಪಿಗಳು ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆನೆ ಹೂತಿದ್ದ ಸ್ಥಳದಲ್ಲಿ ಆನೆ ಮೃತದೇಹ ತೆಗೆದು ಮರಣೋತ್ತರ (Postmortem) ಪರೀಕ್ಷೆ ಮಾಡಲಾಗಿದೆ. ಅರಣ್ಯ ತನಿಖಾ ದಳದ ಡಿಸಿಎಫ್ ರವೀಂದ್ರ ನೇತೃತ್ವದಲ್ಲಿ ಸ್ಥಳ ಮಹಜರ್ ಮಾಡಲಾಗಿದ್ದು, ನೆನ್ನೆ ಆನೆ ದಂತ ಮಾರಾಟಮಾಡಲು ಮುಂದಾಗಿದ್ದ ವೇಳೆ ಮೂರು ಆರೋಪಿಗಳ ಬಂಧನ ಮಾಡಲಾಗಿದೆ. ಬೆಂಗಳೂರಿನ ಚನ್ನಮ್ಮನ ಕೆರೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳ ಬಂಧನ ಮಾಡಲಾಗಿದೆ. ಹಾಸನ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಬೆಳೆ ರಕ್ಷಣೆಗಾಗಿ ಅಕ್ರಮ ವಿದ್ಯುತ್ ಹರಿಸಿದ್ದ ವೇಳೆ ಕಾಡಾನೆ ಬಲಿಯಾಗಿದೆ. ಆನೆ ಮೃತ ಪಟ್ಟಾಗ ಮಾಹಿತಿ ಮುಚ್ಚಿಟ್ಟು ಆನೆಯನ್ನ ಆರೋಪಿ ಹೂತಿದ್ದ. ವೀರಾಪುರ ಗ್ರಾಮದ ಚಂದ್ರೇಗೌಡ,ನಾಗರಾಜ್, ತಿಲಕ್​ರಿಂದ ಕೃತ್ಯವ್ಯಸಗಲಾಗಿದೆ. ಆರು ತಿಂಗಳ ಹಿಂದೆ ಆನೆ ಕರೆಂಟ್ ಶಾಕ್​ನಿಂದ ಕಾಡಾನೆ ಸಾವನ್ನಪ್ಪಿದೆ. ಆನೆ ಮೃತದೇಹ ಕೊಳೆತ ಬಳಿಕ ಮತ್ತೆ ಹೂತಿದ್ದಾರೆ. ಬಳಿಕ ಕಾಡಾನೆಯಿಂದ ದಂತ ಕಿತ್ತು ಮಾರಾಟಕ್ಕೆ ಯತ್ನಿಸಿದ್ದಾರೆ. ಕೋಟ್ಯಾಂತರ ರೂ. ಮೌಲ್ಯಕ್ಕೆ ದಂತ ಮಾರಾಟ ಮಾಡಲು ಆರೋಪಿಗಳು ಸಜ್ಜಾಗಿದ್ದು, ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನೀಡಿದ ಮಾಹಿತಿ ಆಧರಿಸಿ ಆನೆ ಕಳೇಬರ ಹೊರತೆಗೆದು ಪರೀಕ್ಷೆ ಮಾಡಲಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ 50 ಸಾವಿರದಿಂದ 1 ಲಕ್ಷಕ್ಕೆ ಸಿಗುತ್ತೆ ಹೈಟೆ ಕ್ವಾಲಿಟಿ ಇಲ್ಲೀಗಲ್ ಗನ್:

ಬೆಂಗಳೂರು: ಸಿಟಿನಲ್ಲಿ ಪಿಸ್ತೂಲ್ ಸ್ಮಗ್ಲರ್ ಬಂಧನ ಮಾಡಲಾಗಿದೆ. ಮಹಾರಾಷ್ಟ್ರದಿಂದ ಕಡಿಮೆ ಬೆಲೆಗೆ ಖರೀದಿಸಿ ನಗರದ ರೌಡಿಗಳಿಗೆ, ಕ್ರಿಮಿನಲ್​ಗಳಿಗೆ ಮಾರಾಟ ಮಾಡಲಾಗುತ್ತಿತ್ತು. ಶಕೀಲ್ ಅಹ್ಮದ್ ಬಂಧಿತ ಆರೋಪಿ. 21 ವರ್ಷಕ್ಕೆ ಗನ್ ಡೀಲಿಂಗ್​​ಗೆ ಇಳಿದಿದ್ದ ಆರೋಪಿ, ಹಲವು ಬಾರಿ ಜೈಲು ಸೇರಿದ್ರು  ಕೃತ್ಯ ಬಿಟ್ಟಿರಲಿಲ್ಲ. 2019ರಲ್ಲಿ ಸಿಸಿಬಿ ಅಧಿಕಾರಿಗಳು ಶಕೀಲ್ ಅಹ್ಮದ್​ನನ್ನ ಬಂಧಿಸಿದ್ದರು. 2016 ರಲ್ಲಿ ಸಂಪಿಗೆಹಳ್ಳಿ ಪೊಲೀಸರು ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯನ್ನ ಬಂಧಿಸಿಲಾಗಿತ್ತು. ಬಳಿಕ ಮತ್ತೆ ಗನ್ ಡೀಲ್​ಗೆ ಆರೋಪಿ ಇಳಿದಿದ್ದ. ಆರೋಪಿಯಿಂದ 2 ಪಿಸ್ತೂಲ್ 4 ಜೀವಂತ ಗುಂಡು ವಶ ಪಡಿಸಿಕೊಳ್ಳಲಾಗಿದೆ. 50 ರಿಂದ 1 ಲಕ್ಷಕ್ಕೆ ಪಿಸ್ತೂಲ್ ಮಾರಾಟ ಮಾಡ್ತಿದ್ದ. ಮಹಾರಾಷ್ಟ್ರದ ಅಮರಾವತಿಯಿಂದ ಕಡಿಮೆ ಬೆಲೆಗೆ ಪಿಸ್ತೂಲ್ ಖರೀದಿಸುತ್ತಿದ್ದು, ವೆಪನ್ ಡೀಲಿಂಗ್​ನಲ್ಲಿ ಸಕ್ರೀಯವಾಗಿರುವ ಉದ್ದೇಶದಿಂದ ಸ್ಮಗ್ಲಿಂಗ್ ಮಾಡುತ್ತಿದ್ದ. ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಬ್ರೋಕರ್ ಆಗಿರುವ ಶಕೀಲ್ ಅಹ್ಮದ್, ರಿಯಲ್ ಎಸ್ಟೇಟ್ ನಡೆಸಲು, ಬೆದರಿಕೆ ಹಾಕಲು ಪಿಸ್ತೂಲ್ ಉಪಯೋಗಿಸುತ್ತಿದ್ದ. ಉತ್ತಮ ಗುಣಮಟ್ಟದ ವೆಪನ್​ಗಳನ್ನ ಮಾರಾಟ ಮಾಡ್ತಿದ್ದ. ಈಗ ಮತ್ತೆ ಬಾಣಸ್ವಾಡಿ ಪೊಲೀಸರಿಗೆ ಆರೋಪಿ ಸಿಕ್ಕಿಬಿದಿದ್ದಾನೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಯತಪ್ಪಿ ಬಾವಿಗೆ ಬಿದ್ದ ಹೋರಿ ರಕ್ಷಣೆ:

ಚಿಕ್ಕೋಡಿ: ಆಯತಪ್ಪಿ ಬಾವಿಗೆ ಬಿದ್ದ ಹೋರಿಯನ್ನು ಅಗ್ನಿಶಾಮಕದಳ ರಕ್ಷಿಸಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕಿರಣಗಿ ಗ್ರಾಮ ಹೊರವಲಯದಲ್ಲಿ 40 ಅಡಿ ಆಳದ ಬಾವಿಗೆ ಹೋರಿ ಬಿದ್ದಿದೆ. ಕಿರಣಗಿ ಗ್ರಾಮದ ರೈತ ಬಸಪ್ಪ ಎಂಬುವವರ ಹೋರಿ ಆಯತಪ್ಪಿ ಬಾವಿಗೆ ಬಿದ್ದಿತ್ತು. ತಕ್ಷಣ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಕ್ಷಣ  ಅಥಣಿ ಅಗ್ನಿಶಾಮಕ ಠಾಣೆ ಅಧಿಕಾರಿ ರಾಜು ತಳವಾರ ಕಾರ್ಯಪ್ರವೃತ್ತರಾಗಿದ್ದಾರೆ. ಗ್ರಾಮಸ್ಥರ ಸಹಾಯದಿಂದ ಸತತ ಮೂರು ಗಂಟೆ ಕಾಲ ಕಾರ್ಯಾಚರಣೆ ಮೂಲಕ ಬಾವಿಗೆ ಬಿದ್ದಿದ್ದ ಹೋರಿಯನ್ನ ಹೊರ ತೆಗೆಯಲಾಗಿದೆ. ಬಾವಿಯಲ್ಲಿ ನೀರು ಇದ್ದಿದ್ದರಿಂದ ಹೋರಿಗೆ ಯಾವುದೇ ರೀತಿ ಅಪಾಯ ಆಗಿಲ್ಲ.

ಇದನ್ನೂ ಓದಿ:

ಹಿಜಾಬ್ ವಿಚಾರಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆ ಇಲ್ಲ; ಮೈಸೂರಿನಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!