AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘನಘೋರ ತಪ್ಪನ್ನು ಒಪ್ಪಿಕೊಂಡ ಆ್ಯಸಿಡ್ ನಾಗೇಶ, ಆಸ್ಪತ್ರೆಯಲ್ಲಿ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ ಭಯಾನಕ ಕಥನ

Acid nagesh: ಆ್ಯಸಿಡ್ ಹಾಕಿ ಪ್ರತಿಕ್ಷಣ ಸತ್ತು ಬದುಕ್ತಿದ್ದೇನೆ. ನಾನು ಯುವತಿ‌ ಕಾಲೇಜಿನಲ್ಲಿದ್ದಾಗ್ಲೇ ಲವ್ ಮಾಡಿದ್ದೆ. ಕಾಲೇಜಿನಲ್ಲೂ ಕೂಡ ಯುವತಿಯನ್ನ ಫಾಲೋ‌ ಮಾಡ್ತಿದ್ದೆ. ಯಾರಾದ್ರು ನನ್ನ ಹುಡುಗಿ ಮೇಲೆ ಕಣ್ಣಾಕಿದ್ರೆ ವಾರ್ನಿಂಗ್ ಕೊಡ್ತಿದ್ದೆ. ಒನ್ ಸೈಡ್ ಲವ್ವು ಅಂತ ಗೊತ್ತಾಗ್ತಿದ್ದಂತೆ ಹುಚ್ಚನಾಗಿಬಿಟ್ಟಿದ್ದೆ.

ಘನಘೋರ ತಪ್ಪನ್ನು ಒಪ್ಪಿಕೊಂಡ  ಆ್ಯಸಿಡ್ ನಾಗೇಶ, ಆಸ್ಪತ್ರೆಯಲ್ಲಿ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ ಭಯಾನಕ ಕಥನ
ಆರೋಪಿ ಆ್ಯಸಿಡ್ ನಾಗೇಶ್
TV9 Web
| Edited By: |

Updated on:Jun 04, 2022 | 3:58 PM

Share

ಬೆಂಗಳೂರು: ಗುಂಡೇಟು ರುಚಿ ನೋಡುವವರೆಗೂ ತಾನು ಮಾಡಿದ್ದೇ ಸರಿ ಎಂದು, ಘನಘೋರ ಅಪರಾಧವೆಸಗಿದ್ದರೂ (Acid attack) ಭಂಡತನ ಪ್ರದರ್ಶಿಸಿದ್ದ ಆ್ಯಸಿಡ್ ನಾಗ ಅಂದರೆ ಕಾಮಾಕ್ಷಿಪಾಳ್ಯದಲ್ಲಿ ಯುವತಿಯ ಮೇಲೆ ಆ್ಯಸಿಡ್ ಅಟ್ಯಾಕ್ ಮಾಡಿದ್ದ ಪಾತಕಿ ಆ್ಯಸಿಡ್ ನಾಗೇಶ್  (Acid Nagesh) ಇದೀಗ ಆಸ್ಪತ್ರೆಯ ಬೆಡ್​ ಮೇಲೆ ಮತ್ತಷ್ಟು ಮೆತ್ತಗಾಗಿದ್ದಾನೆ. ಗುಂಡೇಟು ತಿಂದು ಮಲಗಿರುವ ಆರೋಪಿ ಆ್ಯಸಿಡ್ ನಾಗೇಶ್ ಕಾಮಾಕ್ಷಿಪಾಳ್ಯ ಪೊಲೀಸರ (Kamakshipalya Police) ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ಪೊಲೀಸ್ ಕಸ್ಟಡಿಯಲ್ಲಿ ನಾಗೇಶ ಏನ್ ಹೇಳ್ದಾ ಗೊತ್ತಾ..?

ನಾನು ದೊಡ್ಡ ತಪ್ಪೇ ಮಾಡ್ದೆ, ಆ್ಯಸಿಡ್ ಹಾಕಬಾರದಿತ್ತು. ಕನಸು-ಮನಸಲ್ಲೂ ಯೋಚ್ನೆ ಮಾಡದ್ದನ್ನ ಮಾಡಿಬಿಟ್ಟೆ. ಸಾರಿ ಸರ್, ಸಾರಿ. ನಾನೇ ಪಾಪಿ, ನಾನೇ ಪಾಪಿ ಎಂದು ಹಲಬುತ್ತಾ, ಕಣ್ಣೀರು ಹಾಕ್ತಿದ್ದಾನೆ ಆ್ಯಸಿಡ್ ನಾಗ. ಕಾಮಾಕ್ಷಿಪಾಳ್ಯ ಪೊಲೀಸ್ರ ಮುಂದೆ ತಲೆತಲೆ ಚಚ್ಚಿಕೊಳ್ತಾ ಕಣ್ಣೀರಿಡ್ತಿರೋ ನಾಗ ಇನ್ನೂ ಏನೆಲ್ಲಾ ಹೇಳಿದ್ದಾನೆಂದರೆ ಆ್ಯಸಿಡ್ ಹಾಕೋ ಮನಸ್ಸು ನನಗಿರಲಿಲ್ಲ. ನಾನು ಪ್ರೀತಿಸಿದ ಹುಡುಗಿ ಬೇರೆ ಯಾರಿಗೂ ಸಿಗಬಾರದು ಅಂತಾ ಹೀಗ್ ಮಾಡ್ದೆ ಎಂದಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಕೆಯನ್ನ ಮದ್ವೆಯಾಗೋ ಅರ್ಹತೇನೂ‌ ನನಗಿಲ್ಲ

ಆದ್ರೆ, ಇದೀಗ ಆ್ಯಸಿಡ್ ಹಾಕಿ ಪ್ರತಿಕ್ಷಣ ಸತ್ತು ಬದುಕ್ತಿದ್ದೇನೆ. ನಾನು ಯುವತಿ‌ ಕಾಲೇಜಿನಲ್ಲಿದ್ದಾಗ್ಲೇ ಲವ್ ಮಾಡಿದ್ದೆ. ಕಾಲೇಜಿನಲ್ಲೂ ಕೂಡ ಯುವತಿಯನ್ನ ಫಾಲೋ‌ ಮಾಡ್ತಿದ್ದೆ. ಯಾರಾದ್ರು ನನ್ನ ಹುಡುಗಿ ಮೇಲೆ ಕಣ್ಣಾಕಿದ್ರೆ ವಾರ್ನಿಂಗ್ ಕೊಡ್ತಿದ್ದೆ. ಒನ್ ಸೈಡ್ ಲವ್ವು ಅಂತ ಗೊತ್ತಾಗ್ತಿದ್ದಂತೆ ಹುಚ್ಚನಾಗಿಬಿಟ್ಟಿದ್ದೆ. ಅವ್ಳಿಲ್ದೆ ಒಂದ್ ಸೆಕೆಂಡ್ ಕೂಡ ಇರೋಕ್ ಆಗ್ತಿರ್ಲಿಲ್ಲ‌. ನನ್ನನ್ನ ಆಕೆ ಇಷ್ಟ ಪಟ್ಟಿಲ್ಲ ಎಂದು ಗುತ್ತಾದ ಕೂಡಲೇ ಕುಡಿತವೇ ಜೀವನವಾಯ್ತು.

ನಾನು ತಪ್ಪು ಮಾಡ್ದೇ ಸರ್, ದೇವ್ರು ಅದಕ್ಕೆ ನಿಮ್ಮ ಕೈಯಿಂದ ಶಿಕ್ಷೆ ಕೊಡಿಸ್ಬಿಟ್ಟ. ಗುಂಡಾರ್ಸಿ ಒಳ್ಳೆ‌ ಕೆಲ್ಸಾನೇ ಮಾಡಿದ್ರಿ ಸರ್. ಈ ಕಾಲುಮುರಿದಿರೋ ಶಿಕ್ಷೆ ಕಡಿಮೆಯೇ? ನನಗೆ ಗಲ್ಲೇ ಅಂತಿಮ. ನನ್ನ ಕಾಲಿಗೆ ಗುಂಡಾರ್ಸೋ‌ ಬದ್ಲು ನನ್ನೆದೆಗೆ ಗುಂಡಾರ್ಸಿದ್ರೆ ಒಳ್ಳೆದಿರ್ತಿತ್ತು ಸರ್. ಪ್ಲೀಸ್ ಏನಾದ್ರು ಮಾಡಿ ಸರಿಯಾದ ಶಿಕ್ಷೆ ಸಿಗೋ‌ ಹಾಗ್ ಮಾಡಿ ಸರ್. ಮುಂದಿನ ದಿನದಲ್ಲಿ ಸಮಾಜದಲ್ಲಿ ಒಳ್ಳೆ ವ್ಯಕ್ತಿಯಾಗಿರ್ತೀನಿ ಸರ್. ಆಕೆಯನ್ನ ಮದ್ವೆಯಾಗೋ ಅರ್ಹತೇನೂ‌ ನನಗಿಲ್ಲ… ಹೀಗೆ ಇಷ್ಟೆಲ್ಲಾ ವಿಚಾರವನ್ನ ಆ್ಯಸಿಡ್ ನಾಗ ಪೊಲೀಸ್ ವಿಚಾರಣೆ ವೇಳೆ ತಪ್ಪೊಪ್ಪಿಗೆ ರೂಪದಲ್ಲಿ ಹೇಳಿಕೊಂಡಿದ್ದಾನೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:49 pm, Sat, 4 June 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!