AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ರೌಡಿ ಶೀಟರ್​ ಹುಟ್ಟುಹಬ್ಬ ಆಚರಣೆ: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಕಾರಾಗೃಹದ ಟವರ್ 1ರ 6ನೇ ಬ್ಯಾರಕ್ ನ 7ನೇ ಕೊಠಡಿಯಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಮೆಲ್ನೋಟಕ್ಕೆ ಜೈಲು ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ, ಕಾರಾಗೃಹ ಎಡಿಜಿಪಿ ಬಿ.ದಯಾನಂದ್​ ಈ ಬಗ್ಗೆ ಆದೇಶಿಸಿದ್ದಾರೆ.

ಜೈಲಲ್ಲಿ ರೌಡಿ ಶೀಟರ್​ ಹುಟ್ಟುಹಬ್ಬ ಆಚರಣೆ: ಇಬ್ಬರು ಅಧಿಕಾರಿಗಳ ತಲೆದಂಡ
ಅಧಿಕಾರಿಗಳ ಮೇಲೆ ಶಿಸ್ತು ಕ್ರಮ
Shivaprasad B
| Edited By: |

Updated on: Oct 08, 2025 | 5:38 PM

Share

ಬೆಂಗಳೂರು, ಅಕ್ಟೋಬರ್​ 08: ಪರಪ್ಪನ ಅಗ್ರಹಾರದಲ್ಲಿ (Parappana Agrahara) ರೌಡಿಶೀಟರ್​​ ಬರ್ತಡೇ ಸೆಲೆಬ್ರೇಷನ್ ಪ್ರಕರಣ ಸಂಬಂಧ ಇಬ್ಬರು ಜೈಲು ಅಧಿಕಾರಿಗಳ ಅಮಾನತು ಮಾಡಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್​ ಆದೇಶಿಸಿದ್ದಾರೆ. ಜೈಲಿನಲ್ಲಿರುವ ಕೊಲೆ ಆರೋಪಿ ತನ್ನ ಸಹಚರರ ಜೊತೆ ಸೆ.9ರಂದು ಬರ್ತ್​ ಡೇ ಆಚರಿಸಿಕೊಂಡಿದ್ದ ಫೋಟೋ, ವಿಡಿಯೋಗಳು ವೈರಲ್​ ಆಗಿದ್ದವು. ಆ ಬೆನ್ನಲ್ಲೇ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಆರೋಪವೂ ಕೇಳಿಬಂದಿತ್ತು. ಘಟನೆ ಸಂಬಂಧ ಅಂತಿಮವಾಗಿ ಈಗ ಅಧಿಕಾರಿಗಳ ತಲೆದಂಡವಾಗಿದೆ.

ಪರಪ್ಪನ ಅಗ್ರಹಾರ ಕಾರಾಗೃಹದ ಟವರ್ 1ರ 6ನೇ ಬ್ಯಾರಕ್ ನ 7ನೇ ಕೊಠಡಿಯಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗಿತ್ತು. ಜೈಲಿನ ಬೇಕರಿಯಿಂದ ಕೇಕ್​ ತರಿಸಿಕೊಳ್ಳಲಾಗಿತ್ತು ಎನ್ನಲಾಗಿದ್ದು, ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹಣ ಪಡೆದು ಕೈದಿಗಳಿಗೆ ಸಹಕರಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ಧವು. ಹೀಗಾಗಿ ಘಟನೆ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ADGP ದಯಾನಂದ್ ಇಲಾಖಾ ವರದಿ ಕೇಳಿದ್ದರು. ಮೆಲ್ನೋಟಕ್ಕೆ ಜೈಲು ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ: NCR ದಾಖಲು

ADGP ಬಿ.ದಯಾನಂದ ಕ್ಲಾಸ್

ಪರಪ್ಪನ ಅಗ್ರಹಾರ ಜೈಲಿಗೆ ಜಾಮರ್ ಹಾಕಿರೋ ಸರ್ವೀಸ್ ಪ್ರೊವೈಡರ್​ಗಳಿಗೆ ಎಡಿಜಿಪಿ ಬಿ.ದಯಾನಂದ ಕ್ಲಾಸ್ ತೆಗೆದುಕೊಂಡ ಪ್ರಸಂಗವೂ ನಡೆದಿದೆ. ಜೈಲಿನ ಒಳಗೆ ಯಾವುದೇ ಮೊಬೈಲ್​ ಅಥವಾ ಎಲೆಕ್ಟ್ರಾನಿಕ್​ ವಸ್ತುಗಳು ವರ್ಕ್​ ಆಗಬಾರದು ಎಂದು ಜಾಮರ್​ ಹಾಕಿಸಲಾಗಿದೆ. ಹೀಗಿದ್ದರೂ ಜೈಲಿನ ಒಳ ಭಾಗದಲ್ಲಿ ಇವು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಜಾಮರ್​ಗಳಿಂದ ಜೈಲಿನ ಹೊರಗೆ ಇರುವ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ನಮ್ಮ ಮೊಬೈಲ್​ ಗೆ ಸರಿಯಾಗಿ ಸಿಗ್ನಲ್​ ಸಿಗುತ್ತಿಲ್ಲ ಎಂದು ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಟೆಂಡರ್ ಪಡೆದುಕೊಕೊಳ್ಳುವ ಸಂದರ್ಭ ನಮ್ಮ ಸರ್ವೀಸ್ ಸೂಪರ್ , 5G ಅಂತೆಲ್ಲಾ ಹೇಳಿ ಗುತ್ತಿಗೆ ಪಡೆದುಕೊಳ್ಳುತ್ತೀರಿ. ಹೀಗಿದ್ದರೂ ಅವು ಯಾಕೆ ಸರಿಯಾಗಿ ಕೆಲಸ ಮಾಡಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಬುಕ್ ಮಾಡಿ, ಕಾಂಟ್ರ್ಯಾಕ್ಟ್​ನ್ನೂ ಬ್ಲಾಕ್​ಲಿಸ್ಟ್ ಮಾಡಬೇಕಾಗುತ್ತದೆ ಎಂದು ದಯಾನಂದ್​ ಎಚ್ಚರಿಸಿದ್ದಾರೆ. ಈಗಾಗಲೇ ಒಮ್ಮೆ ಸರ್ವೀಸ್​​ ಪ್ರೊವೈಡರ್​ಗಳ ಜೊತೆ ಸಭೆ ನಡೆಸಿರುವ ಎಡಿಜಿಪಿ, ಈ ಬಗ್ಗೆ ಅಕ್ಟೋಬರ್ 10ರಂದು ಮತ್ತೆ ಸಭೆ ಕರೆದಿದ್ದಾರೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್