AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲಲ್ಲಿ ರೌಡಿ ಶೀಟರ್​ ಹುಟ್ಟುಹಬ್ಬ ಆಚರಣೆ: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಕಾರಾಗೃಹದ ಟವರ್ 1ರ 6ನೇ ಬ್ಯಾರಕ್ ನ 7ನೇ ಕೊಠಡಿಯಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ಮೆಲ್ನೋಟಕ್ಕೆ ಜೈಲು ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ, ಕಾರಾಗೃಹ ಎಡಿಜಿಪಿ ಬಿ.ದಯಾನಂದ್​ ಈ ಬಗ್ಗೆ ಆದೇಶಿಸಿದ್ದಾರೆ.

ಜೈಲಲ್ಲಿ ರೌಡಿ ಶೀಟರ್​ ಹುಟ್ಟುಹಬ್ಬ ಆಚರಣೆ: ಇಬ್ಬರು ಅಧಿಕಾರಿಗಳ ತಲೆದಂಡ
ಅಧಿಕಾರಿಗಳ ಮೇಲೆ ಶಿಸ್ತು ಕ್ರಮ
ಶಿವಪ್ರಸಾದ್​ ಬಿ.
| Edited By: |

Updated on: Oct 08, 2025 | 5:38 PM

Share

ಬೆಂಗಳೂರು, ಅಕ್ಟೋಬರ್​ 08: ಪರಪ್ಪನ ಅಗ್ರಹಾರದಲ್ಲಿ (Parappana Agrahara) ರೌಡಿಶೀಟರ್​​ ಬರ್ತಡೇ ಸೆಲೆಬ್ರೇಷನ್ ಪ್ರಕರಣ ಸಂಬಂಧ ಇಬ್ಬರು ಜೈಲು ಅಧಿಕಾರಿಗಳ ಅಮಾನತು ಮಾಡಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್​ ಆದೇಶಿಸಿದ್ದಾರೆ. ಜೈಲಿನಲ್ಲಿರುವ ಕೊಲೆ ಆರೋಪಿ ತನ್ನ ಸಹಚರರ ಜೊತೆ ಸೆ.9ರಂದು ಬರ್ತ್​ ಡೇ ಆಚರಿಸಿಕೊಂಡಿದ್ದ ಫೋಟೋ, ವಿಡಿಯೋಗಳು ವೈರಲ್​ ಆಗಿದ್ದವು. ಆ ಬೆನ್ನಲ್ಲೇ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಆರೋಪವೂ ಕೇಳಿಬಂದಿತ್ತು. ಘಟನೆ ಸಂಬಂಧ ಅಂತಿಮವಾಗಿ ಈಗ ಅಧಿಕಾರಿಗಳ ತಲೆದಂಡವಾಗಿದೆ.

ಪರಪ್ಪನ ಅಗ್ರಹಾರ ಕಾರಾಗೃಹದ ಟವರ್ 1ರ 6ನೇ ಬ್ಯಾರಕ್ ನ 7ನೇ ಕೊಠಡಿಯಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಗಿತ್ತು. ಜೈಲಿನ ಬೇಕರಿಯಿಂದ ಕೇಕ್​ ತರಿಸಿಕೊಳ್ಳಲಾಗಿತ್ತು ಎನ್ನಲಾಗಿದ್ದು, ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹಣ ಪಡೆದು ಕೈದಿಗಳಿಗೆ ಸಹಕರಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ಧವು. ಹೀಗಾಗಿ ಘಟನೆ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ADGP ದಯಾನಂದ್ ಇಲಾಖಾ ವರದಿ ಕೇಳಿದ್ದರು. ಮೆಲ್ನೋಟಕ್ಕೆ ಜೈಲು ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದ ಹಿನ್ನಲೆ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ: NCR ದಾಖಲು

ADGP ಬಿ.ದಯಾನಂದ ಕ್ಲಾಸ್

ಪರಪ್ಪನ ಅಗ್ರಹಾರ ಜೈಲಿಗೆ ಜಾಮರ್ ಹಾಕಿರೋ ಸರ್ವೀಸ್ ಪ್ರೊವೈಡರ್​ಗಳಿಗೆ ಎಡಿಜಿಪಿ ಬಿ.ದಯಾನಂದ ಕ್ಲಾಸ್ ತೆಗೆದುಕೊಂಡ ಪ್ರಸಂಗವೂ ನಡೆದಿದೆ. ಜೈಲಿನ ಒಳಗೆ ಯಾವುದೇ ಮೊಬೈಲ್​ ಅಥವಾ ಎಲೆಕ್ಟ್ರಾನಿಕ್​ ವಸ್ತುಗಳು ವರ್ಕ್​ ಆಗಬಾರದು ಎಂದು ಜಾಮರ್​ ಹಾಕಿಸಲಾಗಿದೆ. ಹೀಗಿದ್ದರೂ ಜೈಲಿನ ಒಳ ಭಾಗದಲ್ಲಿ ಇವು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಜಾಮರ್​ಗಳಿಂದ ಜೈಲಿನ ಹೊರಗೆ ಇರುವ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ನಮ್ಮ ಮೊಬೈಲ್​ ಗೆ ಸರಿಯಾಗಿ ಸಿಗ್ನಲ್​ ಸಿಗುತ್ತಿಲ್ಲ ಎಂದು ಅವರು ಪ್ರತಿಭಟನೆ ಮಾಡುತ್ತಿದ್ದಾರೆ. ಟೆಂಡರ್ ಪಡೆದುಕೊಕೊಳ್ಳುವ ಸಂದರ್ಭ ನಮ್ಮ ಸರ್ವೀಸ್ ಸೂಪರ್ , 5G ಅಂತೆಲ್ಲಾ ಹೇಳಿ ಗುತ್ತಿಗೆ ಪಡೆದುಕೊಳ್ಳುತ್ತೀರಿ. ಹೀಗಿದ್ದರೂ ಅವು ಯಾಕೆ ಸರಿಯಾಗಿ ಕೆಲಸ ಮಾಡಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಬುಕ್ ಮಾಡಿ, ಕಾಂಟ್ರ್ಯಾಕ್ಟ್​ನ್ನೂ ಬ್ಲಾಕ್​ಲಿಸ್ಟ್ ಮಾಡಬೇಕಾಗುತ್ತದೆ ಎಂದು ದಯಾನಂದ್​ ಎಚ್ಚರಿಸಿದ್ದಾರೆ. ಈಗಾಗಲೇ ಒಮ್ಮೆ ಸರ್ವೀಸ್​​ ಪ್ರೊವೈಡರ್​ಗಳ ಜೊತೆ ಸಭೆ ನಡೆಸಿರುವ ಎಡಿಜಿಪಿ, ಈ ಬಗ್ಗೆ ಅಕ್ಟೋಬರ್ 10ರಂದು ಮತ್ತೆ ಸಭೆ ಕರೆದಿದ್ದಾರೆ.

ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ಜೈಲಿನಲ್ಲಿ ರಾಜಾರೋಷವಾಗಿ ಫೋನ್​​​​ನಲ್ಲಿ ಮಾತನಾಡಿರುವ ಪ್ರಜ್ವಲ್
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ