AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ವಕೀಲನ ಬರ್ಬರ ಹತ್ಯೆ

ದುಷ್ಕರ್ಮಿಗಳು ಇಬ್ಬರು ಕಲಬುರಗಿಯಲ್ಲಿ ಹಾಡುಹಗಲೇ ವಕೀಲರೊಬ್ಬರನ್ನು ಅರ್ಧ ಕಿಲೋಮೀಟರ್​ ಅಟ್ಟಾಡಿಸಿಕೊಂಡು ಹೋಗಿ ಭೀಕರವಾಗಿ ಕೊಚ್ಚಿ ಕೊಂದಿದ್ದಾರೆ. ಇನ್ನೇನು ಗನ್​ ತೆಗೆಯಬೇಕು ಎನ್ನುವಷ್ಟರಲ್ಲೇ ವಕೀಲನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಕಲಬುರಗಿ: ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ವಕೀಲನ ಬರ್ಬರ ಹತ್ಯೆ
ಕೊಲೆಯಾದ ವಕೀಲ ಈರಣ್ಣ ಗೌಡ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Dec 07, 2023 | 2:08 PM

Share

ಕಲಬುರಗಿ, (ಡಿಸೆಂಬರ್ 07): ದುಷ್ಕರ್ಮಿಗಳು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ವಕೀಲನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕಲಬುರಗಿ ನಗರದ ಸಾಯಿ ಮಂದಿರ ಬಳಿಯಿರುವ ಅಪಾರ್ಟ್ಮೆಂಟ್ ಬಳಿ ಹಾಡುಗಲೇ ವಕೀಲ ಈರಣ್ಣಗೌಡನನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈರಣ್ಣಗೌಡ ಬೈಕ್​ನಲ್ಲಿ ಕೋರ್ಟ್​ಗೆ ಹೋಗುವ ವೇಳೆ ಇಬ್ಬುರ ದುಷ್ಕರ್ಮಿಗಳು ಅಡ್ಡಿಗಟ್ಟಿದ್ದಾರೆ. ಬಳಿಕ ಈರಣ್ಣ ಅವರು ಬೈಕ್ ಬಿಟ್ಟು ವಾಪಸ್ ತಮ್ಮ ಅಪಾಟ್೯ ಮೆಂಟ್ ಕಡೆ ಓಡಿದ್ದಾರೆ. ಅಲ್ಲದೇ ಇನ್ನೇನು ಜೇಬಿನಲ್ಲಿದ್ದ ಗನ್ ತೆಗೆಯುವಷ್ಟರಲ್ಲೇ ಹಂತಕರು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಾಸ್ಕ್ ಧರಿಸಿದ್ದ ಇಬ್ಬರು ಕೈಯಲ್ಲಿ ಮಾರಕಾಸ್ತ್ರ ಹಿಡಿದು ಬರೋಬ್ಬರಿ ಅರ್ಧ ಕಿಲೋಮೀಟರ್ ಅಟ್ಟಾಡಿಸಿಕೊಂಡು ಹೋಗಿ ಕೊನೆಗೆ ಈರಣ್ಣನ ಅರ್ಪಾಟ್ ಮೆಂಟ್​ನಲೇ ಹತ್ಯೆ ಮಾಡಿದ್ದಾರೆ. ಇನ್ನು ಈರಣ್ಣ ಲೈಸೆನ್ಸ್ ಗನ್​ ಹೊಂದಿದ್ದು, ಅದನ್ನು ತೆಗೆಯಬೇಕು ಎನ್ನುವಷ್ಟರಲ್ಲೇ ಕೊಚ್ಚಿ ಕೊಂದಿದ್ದಾರೆ. ಇನ್ನು ಈರಣ್ಣ ಗನ್ ತೆಗೆಯುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದ್ರೆ, ಜೀವ ರಕ್ಷಣೆಗಾಗಿ ಗನ್ ಪಡೆದುಕೊಂಡಿದ್ದರೂ ಸಹ​ ಉಪಯೋಗವಿಲ್ಲದಂತಾಗಿದೆ.

ಹಾಡುಹಗಲೇ ವಕೀಲನ ಭೀಕರ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್ ಚೇತನ್ ದೌಡಾಯಿಸಿ ಪರಿಶೀಲನೆ ನಡೆಸಿದರು.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಆರ್ ಚೇತನ್ , ವಕೀಲರು ಕೋಟ್೯ ಗೆ ಹೋಗುವಾಗ ಹಂತಕರು ಅಟ್ಯಾಕ್ ಮಾಡಿದ್ದಾರೆ. ಸದ್ಯ ಹಂತಕರ ಬಂಧನಕ್ಕೆ ಎರಡೂ ಟೀಂ ರಚನೆ ಮಾಡಿದ್ದು, ಸ್ಥಳದಲ್ಲಿ ಸಿಕ್ಕ ಕೆಲ ಮಾಹಿತಿ ಮೇರೆಗೆ ನಮ್ಮ ತಂಡ ಹಂತಕರ ಜಾಡು ಹಿಡಿದು ಹೋಗಿದೆ. ಎಲ್ಲಾ ಅಯಾಮಗಳಲ್ಲು ತನಿಖೆ ನಡೆಸುತ್ತಿದ್ದೇವೆ. ಮೃತ ವಕೀಲರ ಮನೆಯವರು ಏನು ದೂರು ನೀಡುತ್ತಾರೋ ಅದರ ಆಧಾರದ ಮೇಲೆಯೂ ತನಿಖೆ ಮಾಡುತ್ತೇವೆ. ಎಷ್ಟು ಜನ ಇದ್ದರು ಎನ್ನುವ ಮಾಹಿತಿ ನಿಖರವಾಗಿ ಗೊತ್ತಾಗಿಲ್ಲ ಎಂದು ತಿಳಿಸಿದರು.

ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Thu, 7 December 23

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More