AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on:Apr 01, 2023 | 8:48 PM

Share

ದೆಹಲಿಯ (Delhi) ದ್ವಾರಕಾ-1 (Dwarka) ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದ (Murder) ಘಟನೆ ಶನಿವಾರ ನಡೆಸಿದೆ. ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ದ್ವಾರಕಾದ ಸೆಕ್ಟರ್ 12 ನಿವಾಸಿ, ವಕೀಲ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹತ್ತುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯ ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ವೈಯಕ್ತಿಕ ದ್ವೇಷವೇ ಅಪರಾಧಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕಿಸಿದ್ದಾರೆ.

ಪೊಲೀಸರು ಹೇಳಿದ್ದೇನು?

ದಾಳಿಕೋರರು ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ದುಷ್ಕರ್ಮಿಗಳು ವಕೀಲ ವೀರೇಂದ್ರ ಕುಮಾರ್ ನರ್ವಾಲ್ ಅವರ ಎರ್ಟಿಗಾ ಕಾರಿನಲ್ಲಿದ್ದಾಗ ಗುಂಡು ಹಾರಿಸಿದ್ದಾರೆ. ಇದಾದ ಕೂಡಲೇ ಶೂಟರ್ ಪರಾರಿಯಾಗಿದ್ದು, ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Chikkaballapur: ಫೋಟೋ ಶೂಟ್​​ ಮಾಡಲು ಹೋಗಿ 3 ವಿದ್ಯಾರ್ಥಿಗಳು ನೀರು ಪಾಲು: ಚಿಕ್ಕಬಳ್ಳಾಪುರದಲ್ಲಿ ಹೃದಯ ವಿದ್ರಾವಕ ಘಟನೆ

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ವಕೀಲ ವೀರೇಂದ್ರ ಕುಮಾರ್ ಅವರ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು, ವೈಯಕ್ತಿಕ ದ್ವೇಷದ ಕಾರಣ ಅವರನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ಕೊಲೆಗೆ ಯಾವುದೇ ಕಾರಣ ನೀಡಿಲ್ಲ ಆದರೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಅದೇ ವೇಳೆ ವೀರೇಂದ್ರ ಕುಟುಂಬದವರಿಂದ ಏನನ್ನೂ ಹೇಳಿಲ್ಲ. ಹಗಲು ಹೊತ್ತಿನಲ್ಲಿ ಕೊಲೆಯಾದ ಘಟನೆ ಇದೇ ಮೊದಲಲ್ಲ. ಇತ್ತೀಚೆಗೆ ಎಎಸ್‌ಐ ಶಂಭು ದಯಾಳ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Sat, 1 April 23

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!