AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ

ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲನ ಬರ್ಬರ ಕೊಲೆ; ಮುಂದುವರಿದ ತನಿಖೆ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Apr 01, 2023 | 8:48 PM

Share

ಮುಖ್ಯಾಂಶಗಳು

  • ವಕೀಲ ವಿರೇಂದ್ರ ಕುಮಾರ್ ಕಾರಿಗೆ ಹತ್ತುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ
  • ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಗುಂಡು ಹಾರಾಟ
  • ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ ಎಂದ ಪೊಲೀಸ್

ದೆಹಲಿಯ (Delhi) ದ್ವಾರಕಾ-1 (Dwarka) ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ವಕೀಲರೊಬ್ಬರನ್ನು ಗುಂಡಿಕ್ಕಿ ಕೊಂದ (Murder) ಘಟನೆ ಶನಿವಾರ ನಡೆಸಿದೆ. ಗುಂಡಿಗೆ ಬಲಿಯಾದ ವ್ಯಕ್ತಿಯನ್ನು ದ್ವಾರಕಾದ ಸೆಕ್ಟರ್ 12 ನಿವಾಸಿ, ವಕೀಲ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರಿನೊಳಗೆ ಹತ್ತುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ತನಿಖೆ ನಡೆಯುತ್ತಿದ್ದು, ಸಮೀಪದ ಸಿಸಿಟಿವಿ ದೃಶ್ಯ ಸ್ಕ್ಯಾನ್ ಮಾಡುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ವೈಯಕ್ತಿಕ ದ್ವೇಷವೇ ಅಪರಾಧಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ಶಂಕಿಸಿದ್ದಾರೆ.

ಪೊಲೀಸರು ಹೇಳಿದ್ದೇನು?

ದಾಳಿಕೋರರು ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ದುಷ್ಕರ್ಮಿಗಳು ವಕೀಲ ವೀರೇಂದ್ರ ಕುಮಾರ್ ನರ್ವಾಲ್ ಅವರ ಎರ್ಟಿಗಾ ಕಾರಿನಲ್ಲಿದ್ದಾಗ ಗುಂಡು ಹಾರಿಸಿದ್ದಾರೆ. ಇದಾದ ಕೂಡಲೇ ಶೂಟರ್ ಪರಾರಿಯಾಗಿದ್ದು, ಹುಡುಕಾಟ ಆರಂಭಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Chikkaballapur: ಫೋಟೋ ಶೂಟ್​​ ಮಾಡಲು ಹೋಗಿ 3 ವಿದ್ಯಾರ್ಥಿಗಳು ನೀರು ಪಾಲು: ಚಿಕ್ಕಬಳ್ಳಾಪುರದಲ್ಲಿ ಹೃದಯ ವಿದ್ರಾವಕ ಘಟನೆ

ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ, ವಕೀಲ ವೀರೇಂದ್ರ ಕುಮಾರ್ ಅವರ ಮೇಲೆ ಈ ಹಿಂದೆಯೂ ಹಲ್ಲೆ ನಡೆದಿತ್ತು, ವೈಯಕ್ತಿಕ ದ್ವೇಷದ ಕಾರಣ ಅವರನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ಕೊಲೆಗೆ ಯಾವುದೇ ಕಾರಣ ನೀಡಿಲ್ಲ ಆದರೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಅದೇ ವೇಳೆ ವೀರೇಂದ್ರ ಕುಟುಂಬದವರಿಂದ ಏನನ್ನೂ ಹೇಳಿಲ್ಲ. ಹಗಲು ಹೊತ್ತಿನಲ್ಲಿ ಕೊಲೆಯಾದ ಘಟನೆ ಇದೇ ಮೊದಲಲ್ಲ. ಇತ್ತೀಚೆಗೆ ಎಎಸ್‌ಐ ಶಂಭು ದಯಾಳ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:28 pm, Sat, 1 April 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ