AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣ; ಜೋಕರ್ ಫೆನಿಕ್ಸ್ ಸೇರಿ ಮೂವರ ಬಂಧನ

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣ; ಜೋಕರ್ ಫೆನಿಕ್ಸ್ ಸೇರಿ ಮೂವರ ಬಂಧನ
ಜೋಕರ್ ಫೆನಿಕ್ಸ್
ಶಿವಪ್ರಸಾದ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 12, 2023 | 7:27 AM

Share

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು. ನಿನ್ನೆ(ಜು.11) ಸಂಜೆ ಪಂಪಾ ಬಡಾವಣೆಯಲ್ಲಿರುವ ಏರೋನಿಕ್ಸ್ ಇಂಟರ್ನೆಟ್ ಕಂಪನಿಗೆ ಆಗಮಿಸಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿ ಪರಾರಿಯಾಗಿದ್ದರು. ಇದೀಗ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಘಟನೆ ವಿವರ

ಇನ್ನು ಆರೋಪಿ ಜೋಕರ್ ಫೆನಿಕ್ಸ್ ಏರೋನಿಕ್ಸ್ ಇಂಟರ್ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಫಿಲೆಕ್ಸ್​ನನ್ನು ಕೆಲಸದಿಂದ ತೆಗೆದು ಹಾಕಿದ್ದ. ಜೊತೆಗೆ ಕೆಲಸದ ವೇಳೆ ಫಿಲೆಕ್ಸ್​ನನ್ನು ನಿಂದಿಸುತ್ತಿದ್ದ ಆರೋಪ ಮಾಡಿದ್ದ ಇತ, ಇದೇ ದ್ವೇಷದ ಹಿನ್ನೆಲೆ ಫಣೀಂದ್ರನನ್ನು ಕೊಲೆ ಮಾಡಿದ್ದಾನೆ. ಇನ್ನು ಈ ವೇಳೆ ಎಂಡಿಯನ್ನ ರಕ್ಷಿಸಲು ಬಂದ ವಿನುಕುಮಾರ್ ಮೇಲೂ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಇದೀಗ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್​ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ:Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್

ಕೊಲೆ ಮಾಡಿ ಎಸ್ಕೇಪ್​ ಆಗಿದ್ದವರು ಕುಣಿಗಲ್​ನಲ್ಲಿ ಲಾಕ್​

ಇನ್ನು ನಿನ್ನೆ ಕೊಲೆ ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಮೃತಹಳ್ಳಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ 5 ತಂಡ ರಚಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಹಿಂದೆ ಬಿದ್ದಿದ್ದರು. ಆದರೆ, ಆರೋಪಿಗಳು ಕೊಲೆ ಮಾಡಿ ತುಮಕೂರಿನ ಕುಣಿಗಲ್​ನಲ್ಲಿ ತಲೆಮರೆಸಿಕೊಂಡಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಹೋಗಿ ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ಮೂವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಆರೋಪಿಗಳಾದ ವಿನಯ್ ಹಾಗೂ ಶಿವು ಎನ್ನುವವರಿಗೆ ಹತ್ಯೆ ಮಾಡುವ ಯಾವುದೇ ಉದ್ದೇಶ ಇರಲಿಲ್ಲ, ಫಿಲೆಕ್ಸ್ ಮಾತನ್ನ ಕೇಳಿ ಹತ್ಯೆಗೆ ಕೈ ಜೋಡಿಸಿದ್ದಾರೆ. ಇದೀಗ ಪೊಲೀಸರು ಟೆಕ್ನಿಕಲ್ ಅನಾಲಿಸಿಸ್ ಅಧರಿಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಜೊತೆಗೆ ಕೊಲೆ ನಿಖರ ಕಾರಣ ಕುರಿತು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ