AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣ; ಜೋಕರ್ ಫೆನಿಕ್ಸ್ ಸೇರಿ ಮೂವರ ಬಂಧನ

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣ; ಜೋಕರ್ ಫೆನಿಕ್ಸ್ ಸೇರಿ ಮೂವರ ಬಂಧನ
ಜೋಕರ್ ಫೆನಿಕ್ಸ್
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 7:27 AM

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು. ನಿನ್ನೆ(ಜು.11) ಸಂಜೆ ಪಂಪಾ ಬಡಾವಣೆಯಲ್ಲಿರುವ ಏರೋನಿಕ್ಸ್ ಇಂಟರ್ನೆಟ್ ಕಂಪನಿಗೆ ಆಗಮಿಸಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿ ಪರಾರಿಯಾಗಿದ್ದರು. ಇದೀಗ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಘಟನೆ ವಿವರ

ಇನ್ನು ಆರೋಪಿ ಜೋಕರ್ ಫೆನಿಕ್ಸ್ ಏರೋನಿಕ್ಸ್ ಇಂಟರ್ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಫಿಲೆಕ್ಸ್​ನನ್ನು ಕೆಲಸದಿಂದ ತೆಗೆದು ಹಾಕಿದ್ದ. ಜೊತೆಗೆ ಕೆಲಸದ ವೇಳೆ ಫಿಲೆಕ್ಸ್​ನನ್ನು ನಿಂದಿಸುತ್ತಿದ್ದ ಆರೋಪ ಮಾಡಿದ್ದ ಇತ, ಇದೇ ದ್ವೇಷದ ಹಿನ್ನೆಲೆ ಫಣೀಂದ್ರನನ್ನು ಕೊಲೆ ಮಾಡಿದ್ದಾನೆ. ಇನ್ನು ಈ ವೇಳೆ ಎಂಡಿಯನ್ನ ರಕ್ಷಿಸಲು ಬಂದ ವಿನುಕುಮಾರ್ ಮೇಲೂ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಇದೀಗ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್​ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ:Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್

ಕೊಲೆ ಮಾಡಿ ಎಸ್ಕೇಪ್​ ಆಗಿದ್ದವರು ಕುಣಿಗಲ್​ನಲ್ಲಿ ಲಾಕ್​

ಇನ್ನು ನಿನ್ನೆ ಕೊಲೆ ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಮೃತಹಳ್ಳಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ 5 ತಂಡ ರಚಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಹಿಂದೆ ಬಿದ್ದಿದ್ದರು. ಆದರೆ, ಆರೋಪಿಗಳು ಕೊಲೆ ಮಾಡಿ ತುಮಕೂರಿನ ಕುಣಿಗಲ್​ನಲ್ಲಿ ತಲೆಮರೆಸಿಕೊಂಡಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಹೋಗಿ ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ಮೂವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಆರೋಪಿಗಳಾದ ವಿನಯ್ ಹಾಗೂ ಶಿವು ಎನ್ನುವವರಿಗೆ ಹತ್ಯೆ ಮಾಡುವ ಯಾವುದೇ ಉದ್ದೇಶ ಇರಲಿಲ್ಲ, ಫಿಲೆಕ್ಸ್ ಮಾತನ್ನ ಕೇಳಿ ಹತ್ಯೆಗೆ ಕೈ ಜೋಡಿಸಿದ್ದಾರೆ. ಇದೀಗ ಪೊಲೀಸರು ಟೆಕ್ನಿಕಲ್ ಅನಾಲಿಸಿಸ್ ಅಧರಿಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಜೊತೆಗೆ ಕೊಲೆ ನಿಖರ ಕಾರಣ ಕುರಿತು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ