AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್​ ಟ್ಯಾಂಕರ್​ಗೆ ಬಸ್​​​ ಡಿಕ್ಕಿ: 21 ಜನ ದುರ್ಮರಣ, 38 ಜನರಿಗೆ ಗಾಯ

ಅಫ್ಘಾನಿಸ್ತಾನ ದಲ್ಲಿ ಪೆಟ್ರೋಲ್ ಟ್ಯಾಂಕರ್​, ಬಸ್​​ ಮತ್ತು ಬೈಕ್ ಮಧ್ಯೆ​ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬಸ್​​ನಲ್ಲಿದ್ದ 21 ಜನ ದುರ್ಮರಣ ಹೊಂದಿದ್ದಾರೆ. 38 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ 38 ಗಾಯಾಳುಗಳನ್ನು ತಕ್ಷಣವೇ ಗ್ರಿಷ್ಕ್ ಜಿಲ್ಲೆಯ ಹೆಲ್ಮಂಡ್, ಲಷ್ಕರ್ಗಾ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಪೆಟ್ರೋಲ್​ ಟ್ಯಾಂಕರ್​ಗೆ ಬಸ್​​​ ಡಿಕ್ಕಿ: 21 ಜನ ದುರ್ಮರಣ, 38 ಜನರಿಗೆ ಗಾಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Mar 17, 2024 | 7:14 PM

Share

ಕಾಬೂಲ್​​, ಮಾರ್ಚ್​​ 17: ಅಫ್ಘಾನಿಸ್ತಾನ (Afghanistan) ದಲ್ಲಿ ಪೆಟ್ರೋಲ್ ಟ್ಯಾಂಕರ್​, ಬಸ್​​ ಮತ್ತು ಬೈಕ್ ಮಧ್ಯೆ​ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಬಸ್​​ನಲ್ಲಿದ್ದ 21 ಜನ ದುರ್ಮರಣ ಹೊಂದಿದ್ದಾರೆ. 38 ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಬೈಕ್​​​ಗೆ ಡಿಕ್ಕಿಯಾದ ನಂತರ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಹಾರ್‌ನಿಂದ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದ ಪೆಟ್ರೋಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ. ಹೆಲ್ಮಂಡ್‌ನ ಗ್ರಿಷ್ಕ್ ಜಿಲ್ಲೆಯ ರಾಜಧಾನಿ ಕಾಬೂಲ್ ಮತ್ತು ಉತ್ತರದ ಹೆರಾತ್ ನಗರದ ನಡುವಿನ ಮುಖ್ಯ ಹೆದ್ದಾರಿಯಲ್ಲಿ ಭಾನುವಾರ ಅಪಘಾತ ಸಂಭವಿಸಿದೆ.

‘ಇಂದು ಮುಂಜಾನೆ, ನಮಗೆ ಇದುವರೆಗೆ ಬಂದ ಮಾಹಿತಿಯ ಪ್ರಕಾರ, ಬಸ್, ಟ್ಯಾಂಕರ್ ಮತ್ತು ಮೋಟಾರ್ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 21 ಜನರು ಸಾವನ್ನಪ್ಪಿದ್ದಾರೆ ಎಂದು ಗವರ್ನರ್ ವಕ್ತಾರ ಮೊಹಮ್ಮದ್ ಖಾಸಿಮ್ ರಿಯಾಜ್’ ತಿಳಿಸಿದ್ದಾರೆ.

ಎಎನ್​ಐ ಟ್ವೀಟ್​ 

ಸದ್ಯ ಘಟನೆಯಲ್ಲಿ ಗಾಯಗೊಂಡ 38 ಗಾಯಾಳುಗಳನ್ನು ತಕ್ಷಣವೇ ಗ್ರಿಷ್ಕ್ ಜಿಲ್ಲೆಯ ಹೆಲ್ಮಂಡ್, ಲಷ್ಕರ್ಗಾ ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ. ಇನ್ನು ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೆಲ್ಮಂಡ್‌ನಲ್ಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಗೋವಾದಲ್ಲಿ ಟ್ರಕ್​ ಕಂದಕಕ್ಕೆ ಉರುಳಿ ಓರ್ವ ಸಾವು, 13 ಮಂದಿಗೆ ಗಾಯ, ತಕ್ಷಣವೇ ನೆರವಿಗೆ ಧಾವಿಸಿದ ಸಿಎಂ

ಕಳಪೆ ರಸ್ತೆಗಳು, ಅಪಾಯಕಾರಿ ಚಾಲನೆ ಮತ್ತು ಹೆದ್ದಾರಿ ನಿಯಂತ್ರಣದ ಕೊರತೆಯಿಂದಾಗಿ ಅಫ್ಘಾನಿಸ್ತಾನದಲ್ಲಿ ಇಂತಹ ಭೀಕರ ಟ್ರಾಫಿಕ್ ಅಪಘಾತಗಳು ಸಾಮಾನ್ಯವಾಗಿವೆ ಎನ್ನಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:54 pm, Sun, 17 March 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More