AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ದೊಣ್ಣೆಯಿಂದ ಹಲ್ಲೆ; ಪುತ್ರಿ ಸಾವು, ಪುತ್ರನಿಗೆ ಗಂಭೀರ ಗಾಯ, ತಾಯಿ ನೇಣಿಗೆ ಶರಣಾದ

ತನ್ನ ಮಾತು ಕೇಳುತ್ತಿಲ್ಲವೆಂದು ಕೇರಳಿದ ತಾಯಿ ಮಕ್ಕಳಿಗೆ ದೊಣ್ಣೆಯಿಂದ ಹೊಡೆದು ತಾನು ನೇಣಿಗೆ ಶರಣಾದ ಘಟನೆ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮಕ್ಕಳಿಗೆ ದೊಣ್ಣೆಯಿಂದ ಹಲ್ಲೆ; ಪುತ್ರಿ ಸಾವು, ಪುತ್ರನಿಗೆ ಗಂಭೀರ ಗಾಯ, ತಾಯಿ ನೇಣಿಗೆ ಶರಣಾದ
ಅಪರಾಧ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ವಿವೇಕ ಬಿರಾದಾರ

Updated on:Oct 15, 2023 | 9:18 AM

ವಿಜಯನಗರ ಅ.15: ತನ್ನ ಮಾತು ಕೇಳುತ್ತಿಲ್ಲವೆಂದು ಕೇರಳಿದ ತಾಯಿ ಮಕ್ಕಳಿಗೆ ದೊಣ್ಣೆಯಿಂದ ಹೊಡೆದು ತಾನು ನೇಣಿಗೆ ಶರಣಾದ ಘಟನೆ ಹರಪನಹಳ್ಳಿ (Harappanhalli) ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ತಾಯಿಯ ಹಲ್ಲೆಯಿಂದ ಪುತ್ರಿ ಶಮಾ ಭಾನು (18) ಮೃತಪಟ್ಟಿದ್ದು, ಪುತ್ರ ಅಮಾನುಲ್ಲಾ (16) ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆಗೈದ ಬೇಗಂಬಿ ಶಫಿಸಾಬ್ (50) ನೇಣಿಗೆ ಶರಣಾಗಿದ್ದಾಳೆ. ತನ್ನ ಮಾತು ಕೇಳುತ್ತಿಲ್ಲ ಎಂದು ತಾಯಿ ಬೇಗಂಬಿ ಶಫಿಸಾಬ್ ಇಬ್ಬರು ಮಕ್ಕಳನ್ನು ಕೊಲೆ ಮಾಡಲು ನಿರ್ಧರಿಸಿದ್ದಳು.

ಅದರಂತೆ ತಡರಾತ್ರಿ ಮಲಗಿದ್ದ ಶಮಾ ಭಾನು ಮತ್ತು ಅಮಾನುಲ್ಲಾಗೆ ದೊಣ್ಣೆಯಿಂದ ಹೊಡೆದಿದ್ದಾಳೆ. ಇಬ್ಬರು ಮಕ್ಕಳು ಮೃತಪಟ್ಟರೆಂದು ಬೇಗಂಬಿ ಶಫಿಸಾಬ್ ನೇಣಿಗೆ ಶರಣಾಗಿದ್ದಾಳೆ. ಬೆಳಿಗ್ಗೆ ಅಕ್ಕಪಕ್ಕದವರು ನೋಡಿದಾಗ ಉಸಿರಾಡುತ್ತಿದ್ದ ಮಗನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ಮಚ್ಚಿನಿಂದ ಕೊಚ್ಚಿ ರೌಡಿಶೀಟರ್​ನ ಕೊಲೆ

ರಾಮನಗರ: ಮಚ್ಚಿನಿಂದ ಕೊಚ್ಚಿ ರೌಡಿಶೀಟರ್​ನ ಕೊಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲೋಕೇಶ್(34)​ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಲೋಕೇಶ್​​ನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್​ಪಿ ಕಾರ್ತಿಕ್ ರೆಡ್ಡಿ, ಎಎಸ್‌ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಾಮನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Sun, 15 October 23

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!