AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಗುವಾಹಟಿಯ ವಿದ್ಯಾರ್ಥಿನಿ ಹೊಸ ವರ್ಷದ ಪಾರ್ಟಿ ಬಳಿಕ ಹೋಟೆಲ್​ ರೂಂನಲ್ಲಿ ಶವವಾಗಿ ಪತ್ತೆ

ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ)ವಿದ್ಯಾರ್ಥಿಯೊಬ್ಬಳು ನಗರದ ಪಲ್ಟಾನ್ ಬಜಾರ್ ಪ್ರದೇಶದ ಹೋಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ತೆಲಂಗಾಣ ಮೂಲದ ವಿದ್ಯಾರ್ಥಿನಿಯು ಹೊಸ ವರ್ಷವನ್ನು ಆಚರಿಸಲು ಡಿಸೆಂಬರ್ 31 ರಂದು ಸಂಜೆ ತನ್ನ ಮೂವರು ಬ್ಯಾಚ್‌ಮೇಟ್‌ಗಳೊಂದಿಗೆ ಇನ್‌ಸ್ಟಿಟ್ಯೂಟ್‌ನಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ನಗರದ ಪಲ್ಟನ್ ಬಜಾರ್ ಪ್ರದೇಶಕ್ಕೆ ಪಾರ್ಟಿಗೆ ಹೋಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಐಐಟಿ ಗುವಾಹಟಿಯ ವಿದ್ಯಾರ್ಥಿನಿ ಹೊಸ ವರ್ಷದ ಪಾರ್ಟಿ ಬಳಿಕ ಹೋಟೆಲ್​ ರೂಂನಲ್ಲಿ ಶವವಾಗಿ ಪತ್ತೆ
ಸಾವುImage Credit source: India Today
ನಯನಾ ರಾಜೀವ್
|

Updated on:Jan 03, 2024 | 2:27 PM

Share

ಗುವಾಹಟಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ)ವಿದ್ಯಾರ್ಥಿಯೊಬ್ಬಳು ನಗರದ ಪಲ್ಟಾನ್ ಬಜಾರ್ ಪ್ರದೇಶದ ಹೋಟೆಲ್ ಕೊಠಡಿಯಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ತೆಲಂಗಾಣ ಮೂಲದ ವಿದ್ಯಾರ್ಥಿನಿಯು ಹೊಸ ವರ್ಷವನ್ನು ಆಚರಿಸಲು ಡಿಸೆಂಬರ್ 31 ರಂದು ಸಂಜೆ ತನ್ನ ಮೂವರು ಬ್ಯಾಚ್‌ಮೇಟ್‌ಗಳೊಂದಿಗೆ ಇನ್‌ಸ್ಟಿಟ್ಯೂಟ್‌ನಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ನಗರದ ಪಲ್ಟನ್ ಬಜಾರ್ ಪ್ರದೇಶಕ್ಕೆ ಪಾರ್ಟಿಗೆ ಹೋಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಮರುದಿನ ಬೆಳಗ್ಗೆ ವಿದ್ಯಾರ್ಥಿನಿ ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿದ್ಯಾರ್ಥಿನಿ ಐಶ್ವರ್ಯಾ ಸಾವಿನ ಹಿಂದಿನ ಕಾರಣಗಳು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್​ಲೈನ್​ ಮೂಲಕ ರೂಂ ಬುಕ್ ಮಾಡಿ, ಹೋಟೆಲ್​ನಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಿದ್ದರು. ಮಧ್ಯರಾತ್ರಿಯ ನಂತರ ಅವರು ಚೆಕ್-ಇನ್‌ಗಾಗಿ ಹೋಟೆಲ್‌ಗೆ ಬಂದಿದ್ದರು. ಹೋಟೆಲ್ ಸಿಬ್ಬಂದಿ ಪ್ರಕಾರ, ಅವರು ಮದ್ಯಪಾನ ಮಾಡಿದ್ದರು. ಆ ವಿಚಾರದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮರುದಿನ ಬೆಳಗ್ಗೆ, ಅದೇ ಕೋಣೆಯಲ್ಲಿ ತಂಗಿದ್ದ ತನ್ನ ಸ್ನೇಹಿತ ವಾಶ್‌ರೂಮ್‌ನಲ್ಲಿ ಹುಡುಗಿ ಪ್ರಜ್ಞಾಹೀನಳಾಗಿದ್ದನ್ನು ಕಂಡಿದ್ದಾರೆ. ಆಕೆಯನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಆಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ನಾವು ನಮ್ಮ ತನಿಖೆಯನ್ನು ಪ್ರಾರಂಭಿಸಿದ್ದೇವೆ ಮತ್ತು ಆಕೆಯ ಎಲ್ಲಾ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದೇವೆ. ಇತರ ಜನರನ್ನು ಸಹ ಪ್ರಶ್ನಿಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದರು.

ಮತ್ತಷ್ಟು ಓದಿ: ವೇಯ್ಟ್​ಲಿಫ್ಟಿಂಗ್​ ರಾಡ್​ಗೆ ನೇಣು ಬಿಗಿದುಕೊಂಡು ಐಐಟಿ ದೆಹಲಿ ವಿದ್ಯಾರ್ಥಿ ಆತ್ಮಹತ್ಯೆ

ಮೃತ ವಿದ್ಯಾರ್ಥಿನಿಯನ್ನು ಐಶ್ವರ್ಯಾ ಪುಲ್ಲೂರಿ ಎಂದು ಗುರುತಿಸಲಾಗಿದ್ದು, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದಲ್ಲಿ ಬಿಟೆಕ್ ನಾಲ್ಕನೇ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ಆಕೆಯ ಹೊರತಾಗಿ, ಮತ್ತೊಬ್ಬ ವಿದ್ಯಾರ್ಥಿನಿ ಮತ್ತು ಇಬ್ಬರು ಪುರುಷ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಚೆಕ್-ಇನ್ ಮಾಡಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:26 pm, Wed, 3 January 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​