AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಮಾಧವ ಗುರ್ಜೇನಹಳ್ಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ: ಅರಶಿನ ಶಾಸ್ತ್ರದ ವೇಳೆ ಅಧಿಕಾರಿಗಳಿಂದ ದಾಳಿ

ಕೋಲಾರ ತಾಲೂಕಿನ ಮಾಧವ ಗುರ್ಜೇನಹಳ್ಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ ಮಾಡಲಾಗಿತ್ತು. ಇದರ ಬಗ್ಗೆ ಮಾಹಿತಿ ತಿಳಿದ ಕೋಲಾರ ಜಿಲ್ಲಾಡಳಿತ ಮದುವೆ ಮನೆಗೆ ದಾಳಿ ನಡೆಸಿ ಮದುವೆ ನಿಲ್ಲಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ಬಾಲಕಿಯ ಎಸ್​ಎಸ್​ಎಲ್​ಸಿ ಮಾರ್ಕ್ಸ್ ಕಾರ್ಡ್ ಹಾಗೂ ಮದುವೆ ಆಮಂತ್ರನ ಪತ್ರಿಕೆ ಪರಿಶೀಲನೆ ನಡೆಸಿದಾಗ ವಧು ಅಪ್ರಾಪ್ತೆ ಎಂದು ತಿಳಿದು ಬಂದಿದೆ.

ಕೋಲಾರ: ಮಾಧವ ಗುರ್ಜೇನಹಳ್ಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ: ಅರಶಿನ ಶಾಸ್ತ್ರದ ವೇಳೆ ಅಧಿಕಾರಿಗಳಿಂದ ದಾಳಿ
ಕೋಲಾರದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು (ಸಾಂದರ್ಭಿಕ ಚಿತ್ರ)
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jan 20, 2024 | 9:42 PM

Share

ಕೋಲಾರ, ಜ.20: ತಾಲೂಕಿನಲ್ಲಿ ಬಾಲ್ಯ ವಿವಾಹಕ್ಕೆ (Child Marriage) ಸಿದ್ಧತೆ ನಡೆಸಲಾಗುತ್ತಿದ್ದ ಮಾಹಿತಿ ತಿಳಿದ ಕೋಲಾರ (Kolar) ಜಿಲ್ಲಾಡಳಿತ ಬಾಲ್ಯ ವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾಗಿದೆ. ಮಾಧವ ಗುರ್ಜೇನಹಳ್ಳಿಯಲ್ಲಿನ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

ಮಾಧವ ಗುರ್ಜೇನಹಳ್ಳಿಯ ಮನೆಯೊಂದರಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆಗಳನ್ನು ನಡೆಸಲಾಗುತ್ತಿತ್ತು. ಗೋಪಾಲ್‌ ಎಂಬುವವರ ಜೊತೆ ನಾಳೆ 17 ವರ್ಷದ ಬಾಲಕಿಯ ವಿವಾಹ ನಿಗದಿಯಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿದ್ದರು. ಇಂದು ಅರಿಶಿನ ಶಾಸ್ತ್ರ ನಡೆಯುತ್ತಿತ್ತು. ಈ ವೇಳೆ ಸಿಡಿಪಿಒ ಪವಿತ್ರಾ ಹಾಗೂ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಬಾಲಕಿಯ ಎಸ್​ಎಸ್​ಎಲ್​ಸಿ ಮಾರ್ಕ್ಸ್ ಕಾರ್ಡ್ ಹಾಗೂ ಮದುವೆ ಆಮಂತ್ರನ ಪತ್ರಿಕೆ ಪರಿಶೀಲನೆ ನಡೆಸಿದಾಗ ವಧು ಅಪ್ರಾಪ್ತೆ ಎಂದು ತಿಳಿದು ಬಂದಿದೆ. ಹೀಗಾಗಿ ಬಾಲ್ಯ ವಿವಾಹವನ್ನು ತಡೆದಿದ್ದಾರೆ.

ರಾಜ್ಯದಲ್ಲಿ ಬಾಲ್ಯ ವಿವಾಹದ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ, ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಕೇಸ್​ಗಳು ಕೇಳಿ ಬರುತ್ತಿತ್ತು. ಅದಾಗ್ಯೂ, ಇತ್ತೀಚೆಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಬಾಲ್ಯ ವಿವಾಹ ನಡೆದಿತ್ತು. ಆರ್.ಆರ್.ನಗರದ ದೇಗುಲದಲ್ಲಿ 16 ವರ್ಷದ ಬಾಲಕಿಗೆ 27 ವರ್ಷದ ಯುವಕನ ಜೊತೆ ಆಕೆಯ ತಾಯಿಯೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಲ್ಯ ವಿವಾಹ ಇನ್ನೂ ಜೀವಂತ; 16 ವರ್ಷದ ಬಾಲಕಿಗೆ ಒತ್ತಾಯವಾಗಿ ಮದುವೆ ಮಾಡಿಸಿರುವ ತಾಯಿ

ತಾಯಿಯೇ ಬಲವಂತವಾಗಿ ವಿವಾಹ ಮಾಡಿಸಿದ್ದು, ಬಳಿಕ ಬಲವಂತವಾಗಿ ದೈಹಿಕ‌ ಸಂಪರ್ಕವಾಗಿದೆ ಎಂದು ಅಪ್ರಾಪ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ದೂರು ನೀಡಿದ್ದಳು. ಪ್ರಕರಣ ಸಂಬಂಧ ಆರ್.ಆರ್. ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಕಳೆದ ವರ್ಷದ ಅಂತ್ಯದ ವೇಳೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದ ವರದಿಯಲ್ಲಿ ಮಹಿಳಾ-ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತವರು ಜಿಲ್ಲೆಯಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ ನಡೆದಿರುವ ವಿಚಾರ ಬಹಿರಂಗವಾಗಿತ್ತು. ಬೆಳಗಾವಿಯಲ್ಲಿ ಸದ್ದಿಲ್ಲದೇ ಬಾಲ್ಯ ವಿವಾಹಗಳು ನಡೆಯುತ್ತಿದ್ದು, 2022ರಲ್ಲಿ 81,817 ಜನ ಮಹಿಳೆಯರು ಗರ್ಭಿಣಿಯಾಗಿದ್ದು, ಈ ಪೈಕಿ 208 ಮಂದಿ 18 ವರ್ಷದೊಳಗಿನ ಬಾಲಕಿಯರಾಗಿದ್ದರು.

2023ರ ಏಪ್ರಿಲ್ ನಿಂದ ಅಕ್ಟೋಬರ್ ವರೆಗೆ 51,468ಜನ ಮಹಿಳೆಯರು ಗರ್ಭಿಣಿಯಾಗಿದ್ರೇ ಇದರಲ್ಲಿ 153 ಬಾಲಕಿಯರು ಗರ್ಭ ಧರಿಸಿದ್ದು ಕಂಡು ಬಂದಿತ್ತು. ಈ ವಿಚಾರ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಪೋರ್ಟಲ್ ನಲ್ಲಿ ಗರ್ಭಿಣಿಯರ ನೋಂದಣಿ ಪ್ರಕ್ರಿಯೆ ವೇಳೆ ಅತೀ ಹೆಚ್ಚು ಬಾಲ್ಯ ವಿವಾಹ ನಡೆದು ಬಾಲೆಯರು ಗರ್ಭ ಧರಿಸಿರುವ ವಿಚಾರ ಬೆಳಕಿಗೆ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ