Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಮನೆಯ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಸೆಕ್ಯುರಿಟಿ ಗಾರ್ಡ್​ಗಳ ಬಂಧನ

ಮಹಿಳೆಯ ಮನೆ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಐವರು ಸೆಕ್ಯುರಿಟಿ ಗಾರ್ಡ್​​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅಹಮದಾಬಾದ್​ನ ಶಿಲಾಜ್​ನಲ್ಲಿ ನಡೆದಿದೆ. ಆರೋಪಿಗಳು ಮಹಿಳೆಯ ಕಾರು ಮತ್ತು ಆಕೆಯ ಎಟಿಎಂ ಕಾರ್ಡ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ ಆದರೆ ಅವರು ಪಂಜಾಬ್‌ಗೆ ತೆರಳುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯ ಮನೆಯ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಸೆಕ್ಯುರಿಟಿ ಗಾರ್ಡ್​ಗಳ ಬಂಧನ
ಅಪರಾಧImage Credit source: ABP Live
Follow us
ನಯನಾ ರಾಜೀವ್
|

Updated on: Nov 05, 2023 | 12:09 PM

ಮಹಿಳೆಯ ಮನೆ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಐವರು ಸೆಕ್ಯುರಿಟಿ ಗಾರ್ಡ್​​ಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಅಹಮದಾಬಾದ್​ನ ಶಿಲಾಜ್​ನಲ್ಲಿ ನಡೆದಿದೆ. ಆರೋಪಿಗಳು ಮಹಿಳೆಯ ಕಾರು ಮತ್ತು ಆಕೆಯ ಎಟಿಎಂ ಕಾರ್ಡ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ ಆದರೆ ಅವರು ಪಂಜಾಬ್‌ಗೆ ತೆರಳುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಪ್ರಮುಖ ಆರೋಪಿ ಮಂಜೀತ್ ಸಿಂಗ್ ಡಿಸೆಂಬರ್​ನಲ್ಲಿ ಮದುವೆಯಾಗುವವನಿದ್ದ ಮತ್ತು ಅದಕ್ಕಾಗಿ ದರೋಡೆಗೆ ಪ್ಲ್ಯಾನ್​ ಮಾಡಿದ್ದ. ಮಹಿಳೆ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದ ಕಾರಣ, ಆರೋಪಿಗಳು ಆಕೆಯನ್ನೇ ಟಾರ್ಗೆಟ್ ಮಾಡಿದ್ದರು.

ನಂತರ ದರೋಡೆ ಮಾಡಲು ಆನ್‌ಲೈನ್‌ನಲ್ಲಿ ನಕಲಿ ಗನ್ ಆರ್ಡರ್ ಮಾಡಿದ್ದಾರೆ. ದರೋಡೆಯ ದಿನ, ಅವರು ಮಧ್ಯರಾತ್ರಿ ಮಹಿಳೆಯ ಮನೆಗೆ ಕರೆಂಟ್ ಆಫ್ ಮಾಡಿದ್ದಾರೆ, ನಂತರ ಮಹಿಳೆ ಹೊರಗೆ ಹೆಜ್ಜೆ ಹಾಕಿದ್ದಾರೆ.

ಮತ್ತಷ್ಟು ಓದಿ: ಉತ್ತರ ಪ್ರದೇಶ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ

ನಂತರ ಸೆಕ್ಯುರಿಟಿ ಗಾರ್ಡ್​ಗಳು ಆಕೆಯ ಮನೆಗೆ ನುಗ್ಗಿ ಬಾಯಿ ಮುಚ್ಚಿದ್ದರು. ಬಳಿಕ ಅದೇ ಮನೆಯಲ್ಲಿದ್ದ 19 ವರ್ಷದ ಕೆಲಸದಾಕೆ ಮೇಲೆ ಅತ್ಯಾಚಾರ ನಡೆಸಿ ಕಾರು, ಎಟಿಎಂ ಕಾರ್ಡ್​ ಕದ್ದು ಪರಾರಿಯಾಗಿದ್ದಾರೆ. ನಂತರ ಐವರು ಕಾರ್ಡ್ ಬಳಸಿ 40,000 ರೂ.ನಗದನ್ನು ಡ್ರಾ ಮಾಡಿ ಕಾರನ್ನು ಬಿಟ್ಟು ಹೋಗಿದ್ದಾರೆ.

ಅಷ್ಟೊತ್ತಿಗಾಗಲೇ ಮಹಿಳೆ ಪೊಲೀಸರಿಗೆ ಕರೆ ಮಾಡಿ ಆರೋಪಿಗಳು ತನ್ನ ಕಾರಿನೊಂದಿಗೆ ಓಡಿ ಹೋಗಿದ್ದಾರೆ ಎಂದು ತಿಳಿಸಿದ್ದಾಳೆ. ನಂತರ ಪೊಲೀಸರು ರಸ್ತೆ ತಡೆ ನಡೆಸಿ ಆರೋಪಿಗಳು ಬಸ್‌ನಲ್ಲಿ ಪಂಜಾಬ್‌ಗೆ ಪರಾರಿಯಾಗುತ್ತಿದ್ದಾಗ ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ