AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವಾಹನದಲ್ಲಿಯೇ ಮದ್ಯ ಸಾಗಾಟ, ತನಿಖೆ ನಡೆಸಿದ್ದ ಎಸಿಪಿ ಅಮಾನತು!

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಎಲ್ಲೂ ಮದ್ಯದಂಗಡಿಗಳು ತೆರೆದಿಲ್ಲ. ಇದರಿಂದ ಮದ್ಯಪ್ರಿಯರು ಪರಿತಪಿಸುವಂತಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಸರ್ಕಾರಿ ವಾಹನದಲ್ಲಿಯೇ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳೇ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮದ್ಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಪೊಲೀಸರ ತಪಾಸಣೆ ವೇಳೆ ಸರ್ಕಾರಿ ಜಿಎಸ್‌ಟಿ ವಾಹನದಲ್ಲಿ ಮದ್ಯ ಸಾಗಿಸುತ್ತಿದ್ದರು. ಆರೋಪಿಗಳಾದ […]

ಸರ್ಕಾರಿ ವಾಹನದಲ್ಲಿಯೇ ಮದ್ಯ ಸಾಗಾಟ, ತನಿಖೆ ನಡೆಸಿದ್ದ ಎಸಿಪಿ ಅಮಾನತು!
ಸಾಧು ಶ್ರೀನಾಥ್​
|

Updated on:Apr 24, 2020 | 4:56 PM

Share

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಎಲ್ಲೂ ಮದ್ಯದಂಗಡಿಗಳು ತೆರೆದಿಲ್ಲ. ಇದರಿಂದ ಮದ್ಯಪ್ರಿಯರು ಪರಿತಪಿಸುವಂತಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಸರ್ಕಾರಿ ವಾಹನದಲ್ಲಿಯೇ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳೇ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮದ್ಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಪೊಲೀಸರ ತಪಾಸಣೆ ವೇಳೆ ಸರ್ಕಾರಿ ಜಿಎಸ್‌ಟಿ ವಾಹನದಲ್ಲಿ ಮದ್ಯ ಸಾಗಿಸುತ್ತಿದ್ದರು. ಆರೋಪಿಗಳಾದ ವಿಶೇಷ್ ಗುಪ್ತಾ, ಗೋಪಿ ಎಂಬುವರನ್ನು ಬಂಧಿಸಲಾಗಿದ್ದು, 8 ಬಾಕ್ಸ್‌ಗಳಲ್ಲಿದ್ದ ದುಬಾರಿ ಬೆಲೆಯ ಮದ್ಯವನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೇಸ್​ನ ತನಿಖೆ ನಡೆಸಿದ್ದ ಎಸಿಪಿ ಅಮಾನತಿಗೆ ಶಿಫಾರಸು: ಪ್ರಕರಣದ ತನಿಖೆ ನಡೆಸಿದ್ದ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಎಸಿಪಿ ವಾಸು ಅಮಾನತಿಗೆ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಶಿಫಾರಸು ಮಾಡಿದ್ದಾರೆ. ಏ.11ರಂದು ಮುರುಗನ್ ಕಡೆಯವರಿಗೆ ಸೇರಿದ ಮದ್ಯ ಜಪ್ತಿ ಮಾಡಲಾಗಿತ್ತು. ಆಗ ಆರೋಪಿಗಳ ವಿರುದ್ಧ ಕೇಸ್ ದಾಖಲಿಸದಂತೆ ಮುರುಗನ್ ಎಚ್ಚರಿಕೆ ನೀಡಿದ್ರು. ಆರೋಪಿಗಳ ಹೇಳಿಕೆ ಪಡೆದು ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿದ್ದಾರೆ. ಆರೋಪಿಗಳ ಬಿಡುಗಡೆಗೆ ನಾನು 50 ಲಕ್ಷ ಕೇಳಿದ್ದೇನೆಂದು ಸುಳ್ಳು ಆರೋಪ ಮಾಡಿ ಅಮಾನತಿಗೆ ಶಿಫಾರಸು ಮಾಡಿದ್ದಾರೆ ಎಂದು ಟಿವಿ9ಗೆ ಎಸಿಪಿ ವಾಸು ಪ್ರತಿಕ್ರಿಯೆ ನೀಡಿದ್ದಾರೆ.

https://www.facebook.com/Tv9Kannada/videos/313505882951490/

Published On - 4:15 pm, Fri, 24 April 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ