ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ ಆರೋಪ ಮಾಡಿದ್ದಾರೆ. ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ. 

ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ‌ ದೌರ್ಜನ್ಯ ಆರೋಪ: ದೂರು ದಾಖಲು
ಪ್ರಾತಿನಿಧಿಕ ಚಿತ್ರ
Edited By:

Updated on: Jan 07, 2024 | 9:32 PM

ಮಂಗಳೂರು, ಜನವರಿ 07: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ‌ ದೌರ್ಜನ್ಯ (assault) ಆರೋಪ ಮಾಡಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ‌ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.

ಮದುವೆ ಮಾಡಿಸೋದಾಗಿ ವಂಚನೆ, ಲೈಂಗಿಕ ಕಿರುಕುಳ ಆರೋಪ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಅಮೀನಗಢ ಪಟ್ಟಣ ಪಂಚಾಯಿತಿ ಸದಸ್ಯ ಸಂಜು ಐಹೊಳಿ ವಿರುದ್ಧ ಮದುವೆ ಮಾಡಿಸುವುದಾಗಿ ವಂಚನೆ ಹಾಗೂ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿತ್ತು. ಅಮೀನಗಢ ಪಟ್ಟಣದ ಯುವತಿ ಭಾಗ್ಯಲಕ್ಷ್ಮಿ ಯಂಕಂಚಿ ಎಂಬ ಯುವತಿ, ತನ್ನ ಪ್ರಿಯಕರನೊಂದಿಗೆ ಮದುವೆ ಮಾಡಿಸುವುದಾಗಿ ಬರೊಬ್ಬರಿ 9 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದರು.

ಇದನ್ನೂ ಓದಿ: ಹೆಲ್ಮೆಟ್‌ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಕೊಂದಿದ್ದ ಪತಿ ಬಂಧನ; ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ

ಯುವತಿಯ ಆರೋಪಕ್ಕೆ ವೃತ್ತಿಯಲ್ಲಿ ವಕೀಲ, ಪಟ್ಟಣ ಪಂಚಾಯತಿ ಸದಸ್ಯ ಹಾಗೂ ಜಯಕರ್ನಾಟಕ ಸಂಘಟನೆ ಹುನಗುಂದ ತಾಲ್ಲೂಕಾಧ್ಯಕ್ಷ ಆಗಿರುವ ಸಂಜು ಐಹೊಳಿ ಅಲ್ಲಗಳೆದಿದ್ದಾರೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಅವಹೇಳನ ಆರೋಪ: A.S.ಪಾಟೀಲ್ ನಡಹಳ್ಳಿ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ

ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಂತಿಯ ಸ್ವಾಮೀಜಿ ವಿರುದ್ಧ ರಾಜ್ಯ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎಸ್ ಪಾಟೀಲ್ ನಡಹಳ್ಳಿ ಅವಹೇಳನಾಕಾರಿ ಹೇಳಿಕೆ ಆರೋಪ ಹಿನ್ನೆಲೆ ನಗರದ ಎ.ಎಸ್​ ಪಾಟೀಲ್​ ನಡಹಳ್ಳಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನೆ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಲವ್ ಮ್ಯಾರೇಜ್ ದುರಂತ ಅಂತ್ಯ; ವಿಷ ಸೇವಿಸಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕಾನ್ಸಟೇಬಲ್ ಸೇರಿ ನಾಲ್ವರ ವಿರುದ್ದ ಎಫ್ ಐಆರ್

ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀ ವಿರುದ್ಧ ನಡಹಳ್ಳಿ ಅವಹೇಳನಕಾರಿ‌ಯಾಗಿ ಮಾತನಾಡಿದ್ದಾರೆಂದು ಆರೋಪಿಸಿದ್ದು, ತಕ್ಷಣವೇ ಕೂಡಲಸಂಗಮ ಶ್ರೀಗಳಿಗೆ ಕ್ಷಮೆ ಕೇಳುವಂತೆ ಪಂಚಮಸಾಲಿ ಮುಖಂಡರು ಒತ್ತಾಯಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us