AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಕವರಿ ಹಣ ದುರುಪಯೋಗ ಆರೋಪ: ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು

ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಗೆ ಮತ್ತೆರಡು ದೂರು ಸಲ್ಲಿಕೆ ಮಾಡಲಾಗಿದೆ. ಪ್ರಕರಣ ಸಂಬಂಧ ಶಂಕರ ನಾಯಕ್ 8.85 ಲಕ್ಷ ರೂ. ವಶಕ್ಕೆ ಪಡೆದಿದ್ದರು. ಹಣ ಹಿಂದಿರುಗಿಸಲು ಸೂಚಿಸುವಂತೆ ಬೆಂಗಳೂರಿನ 31ನೇ ಎಸಿಎಂಎಂ ಕೋರ್ಟ್​ಗೆ ವಸಂತಾ ಅರ್ಜಿ ಸಲ್ಲಿಸಿದ್ದರು.

ರಿಕವರಿ ಹಣ ದುರುಪಯೋಗ ಆರೋಪ: ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು
ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 11, 2023 | 3:42 PM

Share

ಬೆಂಗಳೂರು, ಡಿಸೆಂಬರ್​​​​ 11: ಸಿಸಿಬಿ (CCB) ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಗೆ ಮತ್ತೆರಡು ದೂರು ಸಲ್ಲಿಕೆ ಮಾಡಲಾಗಿದೆ. ಪ್ರಕರಣ ಸಂಬಂಧ ಶಂಕರ ನಾಯಕ್ 8.85 ಲಕ್ಷ ರೂ. ವಶಕ್ಕೆ ಪಡೆದಿದ್ದರು. ಹಣ ಹಿಂದಿರುಗಿಸಲು ಸೂಚಿಸುವಂತೆ ಬೆಂಗಳೂರಿನ 31ನೇ ಎಸಿಎಂಎಂ ಕೋರ್ಟ್​ಗೆ ವಸಂತಾ ಅರ್ಜಿ ಸಲ್ಲಿಸಿದ್ದರು. ಹಣ ಹಿಂದಿರುಗಿಸುವಂತೆ ತನಿಖಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. ಆದರೆ ಹಣ ಬಿಡುಗಡೆ ಮಾಡದೆ ಶಂಕರ ನಾಯಕ್ ಸತಾಯಿಸಿದ್ದಾರೆ. ಬಿಳಿಹಾಳೆ ಮೇಲೆ ಸಹಿ ಹಾಕುವಂತೆ ಹೇಳಿದ್ದರಂತೆ. ಸಹಿ ಹಾಕಲು ಒಪ್ಪದಿದ್ದಾಗ ಕೇಸ್ ಹಾಕುವುದಾಗಿ ಬೆದರಿಕೆ ಆರೋಪ ಮಾಡಲಾಗಿದೆ.

ಶಂಕರ ನಾಯಕ್ ವಿರುದ್ಧ ಪಶ್ಚಿಮ ವಿಭಾಗದ ಡಿಸಿಪಿಗೆ ಪುತ್ರ ಸುಮಿತ್​ರನ್ನು ಅಕ್ರಮ ಬಂಧನದಲ್ಲಿರಿಸಿದ ಆರೋಪದಡಿ ದೂರು ನೀಡಲಾಗಿದೆ. ಸಿಪಿಯು, ಲ್ಯಾಪ್​ಟಾಪ್, ಪೆನ್​ಡ್ರೈವ್ ಹಿಂದಿರುಗಿಸಿಲ್ಲವೆಂದು ಹಿರಿಯ ಪೊಲೀಸ್ ಅಧಿಕಾರಿಗೆ ಸಂಧ್ಯಾ ರಮೇಶ್ ಎಂಬುವರಿಂದ ದೂರು ನೀಡಲಾಗಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷನ ವಿರುದ್ಧ 50 ಲಕ್ಷ ರೂ. ಹಣ ವಂಚನೆ ಆರೋಪ

ರಾಮನಗರ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ವಿರುದ್ಧ ಹಣ ವಂಚನೆ ಆರೋಪ ಕೇಳಿಬಂದಿದೆ. ಚನ್ನಪ್ಟಣದ ವಿದ್ಯುತ್ ಗುತ್ತಿಗೆದಾರ ಸುರೇಶ್ ಬಾಬು ಎಂಬುವವರಿಗೆ 50 ಲಕ್ಷ ರೂ. ವಂಚನೆ ಆರೋಪ ಮಾಡಿದ್ದಾರೆ. 2017ರಲ್ಲಿ ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯನ್ನ ಉಪಗುತ್ತಿಗೆ ನೀಡಿದ್ದರು. ಗಂಗಾಧರ್ ರಿಂದ ಸುರೇಶ್ ಬಾಬು ಉಪಗುತ್ತಿಗೆ ಪಡೆದಿದ್ದರು.

ಇದನ್ನೂ ಓದಿ: ಇನ್​ಸ್ಪೆಕ್ಟರ್ ಶಂಕರ್ ನಾಯಕ್ ವಿರುದ್ಧದ ಪ್ರಕರಣ ಸಿಸಿಬಿಗೆ ವರ್ಗಾವಣೆ, ದಾಖಲಾಯ್ತು ಮತ್ತೊಂದು ಪ್ರಕರಣ

2020ರಲ್ಲಿ ಕಾಮಗಾರಿ ಮುಗಿಸಿ ಬಿಲ್ ಕೊಟ್ಟಿದ್ದ ಸುರೇಶ್ ಬಾಬು‌, ಕಾಮಗಾರಿ ಮುಗಿದು ಮೂರು ವರ್ಷ ಕಳೆದಿದ್ದರು ಹಣ ನೀಡಿಲ್ಲ. ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿರುವ ಆರೋಪ ಮಾಡಲಾಗಿದೆ. ಸುಮಾರು 50 ಲಕ್ಷ ರೂ. ಹಣ ನೀಡದೇ ವಂಚನೆ ಮಾಡಿದ್ದಾರೆ. ನ್ಯಾಯ ದೊರಕಿಸಿ ಕೊಡುವಂತೆ ಗುತ್ತಿಗೆದಾರ ಸುರೇಶ್ ಬಾಬು ಅಳಲು ತೊಡಿಕೊಂಡಿದ್ದಾರೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಟೈರ್ ಬ್ಲಾಸ್ಟ್: ಡಿವೈಡರ್​ಗೆ ಗುದ್ದಿ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದ ಕಾರು

ರಾಮನಗರ: ಟೈರ್ ಬ್ಲಾಸ್ಟ್ ಡಿವೈಡರ್​​ಗೆ ಕಾರು ಗುದ್ದಿ ಪರಿಣಾಮ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದಿರುವಂತಹ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಬಳಿ ನಡೆದಿದೆ. ಸೀಟ್​ ಬೆಲ್ಟ್ ಹಾಕಿದ್ದಕ್ಕೆ ಯುವಕ ಬಚಾವ್ ಆಗಿದ್ದಾನೆ. ಕಾರಿನ ಏರ್ ಬ್ಯಾಗ್ ಎಲ್ಲವೂ ಓಪನ್ ಆಗಿದೆ. ಕಾರಿನ ಅವಸ್ಥೆ ನೋಡಿ ಚಾಲಕ ಬದುಕಿದ್ದೇ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!