AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಕವರಿ ಹಣ ದುರುಪಯೋಗ ಆರೋಪ: ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು

ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಗೆ ಮತ್ತೆರಡು ದೂರು ಸಲ್ಲಿಕೆ ಮಾಡಲಾಗಿದೆ. ಪ್ರಕರಣ ಸಂಬಂಧ ಶಂಕರ ನಾಯಕ್ 8.85 ಲಕ್ಷ ರೂ. ವಶಕ್ಕೆ ಪಡೆದಿದ್ದರು. ಹಣ ಹಿಂದಿರುಗಿಸಲು ಸೂಚಿಸುವಂತೆ ಬೆಂಗಳೂರಿನ 31ನೇ ಎಸಿಎಂಎಂ ಕೋರ್ಟ್​ಗೆ ವಸಂತಾ ಅರ್ಜಿ ಸಲ್ಲಿಸಿದ್ದರು.

ರಿಕವರಿ ಹಣ ದುರುಪಯೋಗ ಆರೋಪ: ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು
ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 11, 2023 | 3:42 PM

Share

ಬೆಂಗಳೂರು, ಡಿಸೆಂಬರ್​​​​ 11: ಸಿಸಿಬಿ (CCB) ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿಗೆ ಮತ್ತೆರಡು ದೂರು ಸಲ್ಲಿಕೆ ಮಾಡಲಾಗಿದೆ. ಪ್ರಕರಣ ಸಂಬಂಧ ಶಂಕರ ನಾಯಕ್ 8.85 ಲಕ್ಷ ರೂ. ವಶಕ್ಕೆ ಪಡೆದಿದ್ದರು. ಹಣ ಹಿಂದಿರುಗಿಸಲು ಸೂಚಿಸುವಂತೆ ಬೆಂಗಳೂರಿನ 31ನೇ ಎಸಿಎಂಎಂ ಕೋರ್ಟ್​ಗೆ ವಸಂತಾ ಅರ್ಜಿ ಸಲ್ಲಿಸಿದ್ದರು. ಹಣ ಹಿಂದಿರುಗಿಸುವಂತೆ ತನಿಖಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. ಆದರೆ ಹಣ ಬಿಡುಗಡೆ ಮಾಡದೆ ಶಂಕರ ನಾಯಕ್ ಸತಾಯಿಸಿದ್ದಾರೆ. ಬಿಳಿಹಾಳೆ ಮೇಲೆ ಸಹಿ ಹಾಕುವಂತೆ ಹೇಳಿದ್ದರಂತೆ. ಸಹಿ ಹಾಕಲು ಒಪ್ಪದಿದ್ದಾಗ ಕೇಸ್ ಹಾಕುವುದಾಗಿ ಬೆದರಿಕೆ ಆರೋಪ ಮಾಡಲಾಗಿದೆ.

ಶಂಕರ ನಾಯಕ್ ವಿರುದ್ಧ ಪಶ್ಚಿಮ ವಿಭಾಗದ ಡಿಸಿಪಿಗೆ ಪುತ್ರ ಸುಮಿತ್​ರನ್ನು ಅಕ್ರಮ ಬಂಧನದಲ್ಲಿರಿಸಿದ ಆರೋಪದಡಿ ದೂರು ನೀಡಲಾಗಿದೆ. ಸಿಪಿಯು, ಲ್ಯಾಪ್​ಟಾಪ್, ಪೆನ್​ಡ್ರೈವ್ ಹಿಂದಿರುಗಿಸಿಲ್ಲವೆಂದು ಹಿರಿಯ ಪೊಲೀಸ್ ಅಧಿಕಾರಿಗೆ ಸಂಧ್ಯಾ ರಮೇಶ್ ಎಂಬುವರಿಂದ ದೂರು ನೀಡಲಾಗಿದೆ.

ಕಾಂಗ್ರೆಸ್ ಜಿಲ್ಲಾಧ್ಯಕ್ಷನ ವಿರುದ್ಧ 50 ಲಕ್ಷ ರೂ. ಹಣ ವಂಚನೆ ಆರೋಪ

ರಾಮನಗರ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್ ವಿರುದ್ಧ ಹಣ ವಂಚನೆ ಆರೋಪ ಕೇಳಿಬಂದಿದೆ. ಚನ್ನಪ್ಟಣದ ವಿದ್ಯುತ್ ಗುತ್ತಿಗೆದಾರ ಸುರೇಶ್ ಬಾಬು ಎಂಬುವವರಿಗೆ 50 ಲಕ್ಷ ರೂ. ವಂಚನೆ ಆರೋಪ ಮಾಡಿದ್ದಾರೆ. 2017ರಲ್ಲಿ ನಿರಂತರ ಜ್ಯೋತಿ ವಿದ್ಯುತ್ ಕಾಮಗಾರಿಯನ್ನ ಉಪಗುತ್ತಿಗೆ ನೀಡಿದ್ದರು. ಗಂಗಾಧರ್ ರಿಂದ ಸುರೇಶ್ ಬಾಬು ಉಪಗುತ್ತಿಗೆ ಪಡೆದಿದ್ದರು.

ಇದನ್ನೂ ಓದಿ: ಇನ್​ಸ್ಪೆಕ್ಟರ್ ಶಂಕರ್ ನಾಯಕ್ ವಿರುದ್ಧದ ಪ್ರಕರಣ ಸಿಸಿಬಿಗೆ ವರ್ಗಾವಣೆ, ದಾಖಲಾಯ್ತು ಮತ್ತೊಂದು ಪ್ರಕರಣ

2020ರಲ್ಲಿ ಕಾಮಗಾರಿ ಮುಗಿಸಿ ಬಿಲ್ ಕೊಟ್ಟಿದ್ದ ಸುರೇಶ್ ಬಾಬು‌, ಕಾಮಗಾರಿ ಮುಗಿದು ಮೂರು ವರ್ಷ ಕಳೆದಿದ್ದರು ಹಣ ನೀಡಿಲ್ಲ. ಹಣ ಕೇಳಿದ್ದಕ್ಕೆ ಬೆಂಬಲಿಗರಿಂದ ಬೆದರಿಕೆ ಹಾಕಿಸಿರುವ ಆರೋಪ ಮಾಡಲಾಗಿದೆ. ಸುಮಾರು 50 ಲಕ್ಷ ರೂ. ಹಣ ನೀಡದೇ ವಂಚನೆ ಮಾಡಿದ್ದಾರೆ. ನ್ಯಾಯ ದೊರಕಿಸಿ ಕೊಡುವಂತೆ ಗುತ್ತಿಗೆದಾರ ಸುರೇಶ್ ಬಾಬು ಅಳಲು ತೊಡಿಕೊಂಡಿದ್ದಾರೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಟೈರ್ ಬ್ಲಾಸ್ಟ್: ಡಿವೈಡರ್​ಗೆ ಗುದ್ದಿ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದ ಕಾರು

ರಾಮನಗರ: ಟೈರ್ ಬ್ಲಾಸ್ಟ್ ಡಿವೈಡರ್​​ಗೆ ಕಾರು ಗುದ್ದಿ ಪರಿಣಾಮ ಗಾಳಿಯಲ್ಲಿ ಮೂರು ಬಾರಿ ಪಲ್ಟಿ ಹೊಡೆದಿರುವಂತಹ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಬಳಿ ನಡೆದಿದೆ. ಸೀಟ್​ ಬೆಲ್ಟ್ ಹಾಕಿದ್ದಕ್ಕೆ ಯುವಕ ಬಚಾವ್ ಆಗಿದ್ದಾನೆ. ಕಾರಿನ ಏರ್ ಬ್ಯಾಗ್ ಎಲ್ಲವೂ ಓಪನ್ ಆಗಿದೆ. ಕಾರಿನ ಅವಸ್ಥೆ ನೋಡಿ ಚಾಲಕ ಬದುಕಿದ್ದೇ ಪವಾಡ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್