AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​
ಅಶ್ವತ್ಥ್​ ಹೆಗ್ಡೆ
Shivaprasad B
| Edited By: |

Updated on: Nov 02, 2023 | 4:01 PM

Share

ಬೆಂಗಳೂರು, ನವೆಂಬರ್ 2: ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ (EnviGreen Biotech) ಮಾಲೀಕ ಅಶ್ವತ್ಥ್​ ಹೆಗ್ಡೆ ಎಂಬವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಶ್ವತ್ಥ್​ ಹೆಗ್ಡೆ (Ashwath Hegde) ವಿರುದ್ಧ ದೂರು ನೀಡಿದ್ದ ಉದ್ಯಮಿ ನೀಲಿಮಾ ಎಂಬವರು ದೂರು ನೀಡಿದ್ದರು.

ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ್​ ಹೆಗ್ಡೆ, ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ ಕೊಡುವುದಾಗಿ ಹೇಳಿದ್ದರು ಎಂಬುದಾಗಿ ನೀಲಿಮಾ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಅಶ್ವತ್ಥ್ ಹೆಗ್ಡೆಗೆ 74 ಲಕ್ಷ ರೂಪಾಯಿ ಹಣವನ್ನು ದೂರುದಾರೆ ನೀಲಿಮಾ ನೀಡಿದ್ದರು. ಆದರೆ, 5 ಲಕ್ಷ ರೂಪಾಯಿ ಮೌಲ್ಯದ ಯಂತ್ರ ಕೊಟ್ಟು ಅಶ್ವತ್ಥ್ ಹೆಗ್ಡೆ ಮೋಸ ಮಾಡಿದ್ದಾರೆ. ತಯಾರಿಕಾ‌ ಜ್ಞಾನವೇ ಇಲ್ಲದ ಕಾರ್ಮಿಕರನ್ನು ನೀಡಿದ್ದಾರೆ. ಆರ್ಗ್ಯಾನಿಕ್ ಬ್ಯಾಗ್ ತಯಾರಿಕೆಗೆ ಕಚ್ಚಾ ವಸ್ತು ಸಹ ನೀಡಲಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಲೆಗೈದ ಅಳಿಯ

ಈ ವಿಚಾರವಾಗಿ ಪ್ರಶ್ನೆ ಮಾಡಿದಾಗ ಹೊಸ ಯಂತ್ರ ಕೊಡಿಸುವುದಾಗಿ ಹೇಳಿದ್ದರು. ನಂತರ ಯಂತ್ರ ಕೊಡದೇ, ಹಣವನ್ನೂ ವಾಪಸ್ ಕೊಡದೆ ವಂಚನೆ ಎಸಗಿದ್ದಾರೆ ಎಂದು ನಿಲೀಮಾ ದೂರು ನೀಡಿದ್ದರು.

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ