AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​
ಅಶ್ವತ್ಥ್​ ಹೆಗ್ಡೆ
Shivaprasad B
| Edited By: |

Updated on: Nov 02, 2023 | 4:01 PM

Share

ಬೆಂಗಳೂರು, ನವೆಂಬರ್ 2: ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ (EnviGreen Biotech) ಮಾಲೀಕ ಅಶ್ವತ್ಥ್​ ಹೆಗ್ಡೆ ಎಂಬವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಶ್ವತ್ಥ್​ ಹೆಗ್ಡೆ (Ashwath Hegde) ವಿರುದ್ಧ ದೂರು ನೀಡಿದ್ದ ಉದ್ಯಮಿ ನೀಲಿಮಾ ಎಂಬವರು ದೂರು ನೀಡಿದ್ದರು.

ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ್​ ಹೆಗ್ಡೆ, ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ ಕೊಡುವುದಾಗಿ ಹೇಳಿದ್ದರು ಎಂಬುದಾಗಿ ನೀಲಿಮಾ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಅಶ್ವತ್ಥ್ ಹೆಗ್ಡೆಗೆ 74 ಲಕ್ಷ ರೂಪಾಯಿ ಹಣವನ್ನು ದೂರುದಾರೆ ನೀಲಿಮಾ ನೀಡಿದ್ದರು. ಆದರೆ, 5 ಲಕ್ಷ ರೂಪಾಯಿ ಮೌಲ್ಯದ ಯಂತ್ರ ಕೊಟ್ಟು ಅಶ್ವತ್ಥ್ ಹೆಗ್ಡೆ ಮೋಸ ಮಾಡಿದ್ದಾರೆ. ತಯಾರಿಕಾ‌ ಜ್ಞಾನವೇ ಇಲ್ಲದ ಕಾರ್ಮಿಕರನ್ನು ನೀಡಿದ್ದಾರೆ. ಆರ್ಗ್ಯಾನಿಕ್ ಬ್ಯಾಗ್ ತಯಾರಿಕೆಗೆ ಕಚ್ಚಾ ವಸ್ತು ಸಹ ನೀಡಲಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಲೆಗೈದ ಅಳಿಯ

ಈ ವಿಚಾರವಾಗಿ ಪ್ರಶ್ನೆ ಮಾಡಿದಾಗ ಹೊಸ ಯಂತ್ರ ಕೊಡಿಸುವುದಾಗಿ ಹೇಳಿದ್ದರು. ನಂತರ ಯಂತ್ರ ಕೊಡದೇ, ಹಣವನ್ನೂ ವಾಪಸ್ ಕೊಡದೆ ವಂಚನೆ ಎಸಗಿದ್ದಾರೆ ಎಂದು ನಿಲೀಮಾ ದೂರು ನೀಡಿದ್ದರು.

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ