ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಕೋರಮಂಗಲದಲ್ಲಿರುವ ಪಬ್​ಗೆ ಹೋಗಿದ್ದ ಟೆಕ್ಕಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಎಚ್ಚರವಾದ ನಂತರ ನನಗೇನಾಗಿದೆ ತನಿಖೆ ನಡೆಸಿ ಎಂದು ಠಾಣೆಗೆ ದೂರು ನೀಡಿರುವ ಯುವತಿ, ತನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾಳೆ.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ
ಪ್ರಾತಿನಿಧಿಕ ಚಿತ್ರImage Credit source: Shutterstock
Follow us
| Updated By: Rakesh Nayak Manchi

Updated on: Dec 14, 2023 | 10:30 PM

ಬೆಂಗಳೂರು, ಡಿ.14: ಪಬ್​ಗೆ ಹೋಗಿದ್ದ ಖಾಸಗಿ ಕಂಪನಿ ಟೆಕ್ಕಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದ್ದು, ತನಿಖೆ ನಡೆಸಿ ಎಂದು ನಗರದ (Bengaluru) ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನನಗೇನಾಗಿದೆ ತನಿಖೆ ನಡೆಸಿ, ನನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ಇದೆ ಎಂದು ಆರೋಪಿಸಿದ್ದಾಳೆ.

ಡಿಸೆಂಬರ್ 12ರ ರಾತ್ರಿ ಯುವತಿ ಕೋರಮಂಗಲದ ಪಬ್​ಗೆ ತೆರಳಿದ್ದಳು. ಬಳಿಕ ಮನೆಗೆ ತೆರಳಿರಲಿಲ್ಲ, ತಾನು ಎಲ್ಲಿದ್ದೇನೆ ಅನ್ನೋದು ಕೂಡ ಯುವತಿ ಗೊತ್ತಿರಲಿಲ್ಲ. ಪ್ರಜ್ಞೆ ಬಂದಾಗ ಯುವತಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದಳು. ಇಲ್ಲೇ ಮನೆಯೊಂದರ ಬಾಗಿಲು ಬಡಿದಿದ್ದ ಯುವತಿ, ನಂತರ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಇದನ್ನೂ ಓದಿ: ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಸ್ಥಳಕ್ಕೆ ಆಗಮಿಸಿದ ಆಡುಗೋಡಿ ಠಾಣಾ ಪೊಲೀಸರು ಯುವತಿಯನ್ನು ರಕ್ಷಿಸಿದ್ದರು. ಇಲ್ಲಿಂದ ಕೋರಮಂಗಲ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಪ್ರಜ್ಞಾಹೀನಳಾಗಿದ್ದ ವೇಳೆ ನನ್ನ ಮೇಲೆ ಅತ್ಯಾಚಾರ ನಡೆದಿರುವ ಶಂಕೆಯಿದೆ. ನಾನೆಲ್ಲಿದ್ದೆ ಅನ್ನೋದರ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ದೂರು ಯುವತಿ ದೂರು ನೀಡಿದ್ದಾಳೆ. ಯುವತಿ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ