ಮೈಸೂರು: 2ನೇ ತರಗತಿ ವಿದ್ಯಾರ್ಥಿನಿಯನ್ನ ಅಪಹರಿಸಲು ಯತ್ನ

2ನೇ ತರಗತಿ ವಿದ್ಯಾರ್ಥಿನಿಯನ್ನ ಅಪಹರಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ಶಾಲೆಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಇಬ್ಬರು ಅಪರಿಚಿತ ಆಕೆಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ.

ಮೈಸೂರು: 2ನೇ ತರಗತಿ ವಿದ್ಯಾರ್ಥಿನಿಯನ್ನ ಅಪಹರಿಸಲು ಯತ್ನ
ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ
Updated By: ವಿವೇಕ ಬಿರಾದಾರ

Updated on: Aug 20, 2023 | 7:44 AM

ಮೈಸೂರು: 2ನೇ ತರಗತಿ ವಿದ್ಯಾರ್ಥಿನಿಯನ್ನ (Student) ಅಪಹರಿಸಲು ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿನಿ ನಿನ್ನೆ (ಆ.19) ರಂದು ಶಾಲೆಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಇಬ್ಬರು ಅಪರಿಚಿತ ಆಕೆಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯಾರ್ಥನಿ ಜೋರಾಗಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಆಕೆಯನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ

ಮೈಸೂರು: ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವಿದ್ಯಾನಗರದ 4ನೇ ಕ್ರಾಸ್​ನಲ್ಲಿ ನಡೆದಿದೆ. ಬಾಲರಾಜ್(28) ಮೃತದುರ್ದೈವಿ. ತೇಜಸ್, ಸಂಜಯ್, ಕಿರಣ್, ಸಾಮ್ರಾಟ್ ಕೊಲೆ ಆರೋಪಿಗಳು. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ಕೊಲೆ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ