AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಆಟವಾಡುವ ವೇಳೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆಯಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮೈಸೂರು ನಗರದ ಸುನ್ನಿಚೌಕ ಬಳಿ ನಡೆದಿದೆ. 17 ವರ್ಷದ ಫರ್ವೇಜ್​ ಖಾನ್ ಮೃತ ವ್ಯಕ್ತಿ.

Mysore News: ಆಟವಾಡುವ ವೇಳೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಮೃತ ಬಾಲಕ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 04, 2023 | 8:28 AM

Share

ಮೈಸೂರು: ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆಯಾಗಿ ಚಾಕುವಿನಿಂದ ಇರಿದು ಕೊಲೆ(Murder) ಮಾಡಿರುವ ಘಟನೆ ಮೈಸೂರು(Mysore) ನಗರದ ಸುನ್ನಿಚೌಕ ಬಳಿ ನಡೆದಿದೆ. 17 ವರ್ಷದ ಫರ್ವೇಜ್​ ಖಾನ್ ಮೃತ ವ್ಯಕ್ತಿ. ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ 15 ವರ್ಷದ ಬಾಲಕನೋರ್ವ ಚಾಕುವಿನಿಂದ ಇರಿದಿದ್ದು, ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಈ ಕುರಿತು ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಮೈಸೂರು: ನಂಜನಗೂಡು ತಾಲೂಕಿನ ಸಿದ್ದೇಗೌಡನಹುಂಡಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಹದೇವಸ್ವಾಮಿ 30ಮೃತ ಯುವಕ. ಜುಲೈ 1 ರಂದು ರಾತ್ರಿ ಮನೆಯಿಂದ ಹೋದ ಮಹದೇವಸ್ವಾಮಿ ವಾಪಸ್ಸು ಬಂದಿರಲಿಲ್ಲ. ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ಚಿನ್ನಪ್ಪ ದೂರು ನೀಡಿದ್ದರು. ಇದೀಗ ಮಹದೇವಸ್ವಾಮಿಯ ಮೃತ ದೇಹ ಜಮೀನಿನಲ್ಲಿ ಪತ್ತೆಯಾಗಿದೆ. ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Assam: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಆಟೋ ಚಾಲಕನ ಬಂಧನ

ಟಾಟಾ ಏಸ್ ಡಿಕ್ಕಿ ಪಾದಚಾರಿ ಸಾವು

ಮೈಸೂರು: ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಬಳಿ ಪಾದಚಾರಿಗೆ ಟಾಟಾ ಏಸ್​ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟಸ್ವಾಮಿ ಗೌಡ (80) ಮೃತ ದುರ್ದೈವಿ. ಮೆಡಿಕಲ್ ಸ್ಟೋರ್‌ನಿಂದ ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಅಪಘಾತವಾಗಿದೆ. ನಂತರ ಚಾಲಕ ಪರಾರಿಯಾಗಿದ್ದು, ಗಾಯಾಳು ಪುಟ್ಟಸ್ವಾಮಿ ಗೌಡರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:28 am, Tue, 4 July 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್