AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಆಟವಾಡುವ ವೇಳೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆಯಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮೈಸೂರು ನಗರದ ಸುನ್ನಿಚೌಕ ಬಳಿ ನಡೆದಿದೆ. 17 ವರ್ಷದ ಫರ್ವೇಜ್​ ಖಾನ್ ಮೃತ ವ್ಯಕ್ತಿ.

Mysore News: ಆಟವಾಡುವ ವೇಳೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಮೃತ ಬಾಲಕ
ರಾಮ್​, ಮೈಸೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 04, 2023 | 8:28 AM

Share

ಮೈಸೂರು: ಆಟವಾಡುವ ವೇಳೆ ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತರಿಬ್ಬರ ನಡುವೆ ಗಲಾಟೆಯಾಗಿ ಚಾಕುವಿನಿಂದ ಇರಿದು ಕೊಲೆ(Murder) ಮಾಡಿರುವ ಘಟನೆ ಮೈಸೂರು(Mysore) ನಗರದ ಸುನ್ನಿಚೌಕ ಬಳಿ ನಡೆದಿದೆ. 17 ವರ್ಷದ ಫರ್ವೇಜ್​ ಖಾನ್ ಮೃತ ವ್ಯಕ್ತಿ. ಇಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ 15 ವರ್ಷದ ಬಾಲಕನೋರ್ವ ಚಾಕುವಿನಿಂದ ಇರಿದಿದ್ದು, ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಈ ಕುರಿತು ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಮೈಸೂರು: ನಂಜನಗೂಡು ತಾಲೂಕಿನ ಸಿದ್ದೇಗೌಡನಹುಂಡಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಹದೇವಸ್ವಾಮಿ 30ಮೃತ ಯುವಕ. ಜುಲೈ 1 ರಂದು ರಾತ್ರಿ ಮನೆಯಿಂದ ಹೋದ ಮಹದೇವಸ್ವಾಮಿ ವಾಪಸ್ಸು ಬಂದಿರಲಿಲ್ಲ. ಈ ಬಗ್ಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ಚಿನ್ನಪ್ಪ ದೂರು ನೀಡಿದ್ದರು. ಇದೀಗ ಮಹದೇವಸ್ವಾಮಿಯ ಮೃತ ದೇಹ ಜಮೀನಿನಲ್ಲಿ ಪತ್ತೆಯಾಗಿದೆ. ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Assam: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಆಟೋ ಚಾಲಕನ ಬಂಧನ

ಟಾಟಾ ಏಸ್ ಡಿಕ್ಕಿ ಪಾದಚಾರಿ ಸಾವು

ಮೈಸೂರು: ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಬಳಿ ಪಾದಚಾರಿಗೆ ಟಾಟಾ ಏಸ್​ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟಸ್ವಾಮಿ ಗೌಡ (80) ಮೃತ ದುರ್ದೈವಿ. ಮೆಡಿಕಲ್ ಸ್ಟೋರ್‌ನಿಂದ ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಅಪಘಾತವಾಗಿದೆ. ನಂತರ ಚಾಲಕ ಪರಾರಿಯಾಗಿದ್ದು, ಗಾಯಾಳು ಪುಟ್ಟಸ್ವಾಮಿ ಗೌಡರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:28 am, Tue, 4 July 23

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More