AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕುಚಿಕು ಸ್ನೇಹಿತನನ್ನೇ ಕೊಂದು ರುಂಡದೊಂದಿಗೆ ಊರಿಗೆ ಬಂದ, ಗೆಳೆಯನ ಹತ್ಯೆಗೆ ಕಾರಣವೇನು?

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಬಡಬ್ಯಾಕೂಡ್‌ ಗ್ರಾಮದಲ್ಲಿ ಭೀಕರ ಕೊಲೆ ನಡೆದಿದೆ. ಹೌದು, ಸ್ನೇಹಿತನನ್ನೇ ಕೊಲೆ ಮಾಡಿ, ರುಂಡದೊಂದಿಗೆ ಊರಿಗೆ ಬಂದ ಘಟನೆ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಬೆಳಗಾವಿ: ಕುಚಿಕು ಸ್ನೇಹಿತನನ್ನೇ ಕೊಂದು ರುಂಡದೊಂದಿಗೆ ಊರಿಗೆ ಬಂದ, ಗೆಳೆಯನ ಹತ್ಯೆಗೆ ಕಾರಣವೇನು?
ಮೃತ ಯುವಕನ ಪೋಷಕರ ಗೋಳಾಟ
ಮಹಾಂತೇಶ ಕುರಬೇಟ, ಟಿವಿ9 ಚಿಕ್ಕೋಡಿ
| Edited By: |

Updated on:Aug 18, 2023 | 3:21 PM

Share

ಬೆಳಗಾವಿ ಆ.18: ಸ್ನೇಹಿತನನ್ನೇ ಕೊಂದು ರುಂಡದೊಂದಿಗೆ ಊರಿಗೆ ಬಂದ ಘಟನೆ ಬೆಳಗಾವಿ(Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ (Harugeri) ಪಟ್ಟಣದ ಹೊರವಲಯದ ಬಡಬ್ಯಾಕೂಡ್‌ ಗ್ರಾಮದಲ್ಲಿ ನಡೆದಿದೆ. ಅಕ್ಬರ್‌ ಜಮಾದಾರ್ (21) ಕೊಲೆಯಾದ ವ್ಯಕ್ತಿ. ಆರೋಪಿ ಮಹಾಂತೇಶ ಪೂಜಾರ್(23) ಬಸ್ತವಾಡ ಬಳಿಯ ಅರಣ್ಯದಲ್ಲಿ ಸ್ನೇಹಿತನನ್ನು ಹತ್ಯೆ ಮಾಡಿ, ಬಳಿಕ ರುಂಡದ ಜೊತೆ ಗ್ರಾಮಕ್ಕೆ ಬಂದಿದ್ದ. ಇದನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರ ಮೇರೆಗೆ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹಾಂತೇಶ್​ನನ್ನು ವಶಕ್ಕೆ ಪಡೆಯಲಾಗಿದೆ.

ಕಳ್ಳತನ ಮಾಡುತ್ತಿದ್ದ ಇಬ್ಬರೂ ಸ್ನೇಹಿತರು

ಹೌದು, ಕೊಲೆಯಾದ ಅಕ್ಬರ್ ಮತ್ತು ಹಂತಕ ಮಹಾಂತೇಶ ಇಬ್ಬರೂ ಸ್ನೇಹಿತರಾಗಿದ್ದು, ಜೊತೆಗೆ ಇಬ್ಬರೂ ಸೇರಿ ಎಮ್ಮೆ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ಇವರ ವಿರುದ್ಧ ಹಾರೂಗೇರಿ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಇಂತಹ ಕುಚಿಕು ಗೆಳೆಯನನ್ನೇ ಇದೀಗ ಕೊಲೆ ಮಾಡಿದ್ದಾನೆ. ಮಾಹಿತಿ ಪ್ರಕಾರ ಇಬ್ಬರ ನಡುವೆ ಹಣದ ವಿಷಯವಾಗಿ ಗಲಾಟೆಯಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆ ಬಳಿಕ ಗೊತ್ತಾಗಲಿದೆ.

ಇದನ್ನೂ ಓದಿ:ಬೆಂಗಳೂರು: ರೌಡಿಶೀಟರ್ ಸಿದ್ದಾಪುರ ಮಹೇಶ್​ ಹತ್ಯೆ ಪ್ರಕರಣ: ಕೊನೆಗೂ ನ್ಯಾಯಾಧೀಶರ ಮುಂದೆ ಶರಣಾದ ವಿಲ್ಸನ್ ಗಾರ್ಡನ್ ನಾಗ

ಆಸ್ಪತ್ರೆ ಬಳಿ ಮುಗಿಲುಮುಟ್ಟಿದ ಮೃತನ ಪೋಷಕರ ಆಕ್ರಂದನ

ಇಬ್ಬರು ಅಷ್ಟೊಂದು ಸಲುಗೆಯಿಂದ ಇದ್ದು, ಜೀವಕ್ಕೆ ಜೀವ ಎನ್ನುತ್ತಿದ್ದ ಗೆಳೆಯನನ್ನೇ ಕೊಲೆ ಮಾಡಿದ್ದು, ಮೃತನ ಪೋಷಕರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಇನ್ನು ಹಾರೂಗೇರಿ ಸರ್ಕಾರಿ ಆಸ್ಪತ್ರೆಗೆ ಅಕ್ಬರ್ ಮೃತದೇಹ ಸ್ಥಳಾಂತರ ಮಾಡಲಾಗಿದ್ದು, ಆಸ್ಪತ್ರೆ ಬಳಿ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ.

ಕರ್ತವ್ಯಲೋಪ; ಬಾಗೇನಹಳ್ಳಿ ಗ್ರಾ‌.ಪಂಚಾಯತಿ PDO​​ ಅಮಾನತು

ತುಮಕೂರು: ಕರ್ತವ್ಯಲೋಪ ಹಿನ್ನಲೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಾಗೇನಹಳ್ಳಿ ಗ್ರಾ‌.ಪಂಚಾಯತಿ ಪಿಡಿಒ ಕುಮಾರ್​ ಎಂಬುವವರನ್ನು ಅಮಾನತು ಮಾಡಲಾಗಿದೆ. ಇತ ವಿವಿಧ ಕಾಮಗಾರಿಗಳಿಗೆ ಮೀಸಲಿಟ್ಟ ಹಣವನ್ನು ಅನ್ಯ ಕೆಲಸಗಳಿಗೆ ಸೇರಿದಂತೆ ಹಣ ಕಬಳಿಸಿದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಪಿಡಿಒ ಅಮಾನತುಗೊಳಿಸಿ ತುಮಕೂರು ಜಿಲ್ಲಾ ಪಂಚಾಯತಿ ಸಿಇಒ ಪ್ರಭು ಆದೇಶಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Fri, 18 August 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ