AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ; ಗ್ಯಾಸ್​ ಡೆಲಿವರಿ ಹುಡುಗನ ಮನೆಯಲ್ಲಿ ಶವ ಪತ್ತೆ

ಬಾಲಕಿಗಾಗಿ ಹುಡುಕಾಟ ನಡೆಸುತ್ತಿರುವ ವೇಳೆ ಗ್ಯಾಸ್​ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜು ಎಂಬಾತನ ಮನೆಯ ಮುಂದೆ ಬಾಲಕಿಯ ಚಪ್ಪಲಿ ಕಂಡು ಬಂದಿದೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಬಾಲಕಿಯ ಕುಟುಂಬಸ್ಥರು ಮನೆಯ ಕಿಟಕಿಯಿಂದ ಇಣುಕಿ ನೋಡಿದಾಗ ಮನೆಯೊಳಗೆ ಬಾಲಕಿಯ ಶವ ಪತ್ತೆಯಾಗಿದೆ.

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ; ಗ್ಯಾಸ್​ ಡೆಲಿವರಿ ಹುಡುಗನ ಮನೆಯಲ್ಲಿ ಶವ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jul 16, 2024 | 11:43 AM

Share

ಆಂಧ್ರಪ್ರದೇಶ: ಗುಂಟೂರು ಜಿಲ್ಲೆಯ ಚೇಬ್ರೋಲುವಿನ ಕೊತ್ತರೆಡ್ಡಿಪಾಲೆನಿಯ ಶೈಲಜಾ (13) ಎಂಬ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕೊಟ್ಟಾ ರೆಡ್ಡಿಪಾಲೆಂನ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿ ಅನಾರೋಗ್ಯದ ಕಾರಣ ಮಧ್ಯಾಹ್ನದ ವೇಳೆಗೆ ಶಾಲೆ ಬಿಟ್ಟಿರುವುದಾಗಿ ಶಾಲಾ ಅಧ್ಯಾಪಕರು ತಿಳಿಸಿದ್ದಾರೆ. ಆದರೆ ಸಂಜೆಯಾದರೂ ಮಗಳು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು ಹಾಗೂ ಪೋಷಕರು ಗ್ರಾಮದ ಹಲವೆಡೆ ಹುಡುಕಾಟ ನಡೆಸಿದ್ದಾರೆ.

ಊರಿನ ಪ್ರತೀ ಮನೆಯಲ್ಲಿ ಬಾಲಕಿಗಾಗಿ ಹುಡುಕಾಟ ನಡೆಸುತ್ತಿರುವ ವೇಳೆ ಗ್ಯಾಸ್​ ಡೆಲಿವರಿ ಹುಡುಗ ನಾಗರಾಜು ಎಂಬಾತನ ಮನೆಯ ಮುಂದೆ ಬಾಲಕಿಯ ಚಪ್ಪಲಿ ಇರುವುದು ಗಮನಕ್ಕೆ ಬಂದಿದೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಬಾಲಕಿಯ ಕುಟುಂಬಸ್ಥರು ಮನೆಯ ಕಿಟಕಿಯಿಂದ ಬಾಲಕಿಯ ಶವ ಪತ್ತೆಯಾಗಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯ ಬೀಗ ಒಡೆದು ಬಾಲಕಿಯನ್ನು ಹೊರಗೆ ತಂದಿದ್ದಾರೆ. ಬಳಿಕ ಬಾಲಕಿಯನ್ನು ಗುಂಟೂರು ಜಿಜಿಎಚ್‌ಗೆ ಸ್ಥಳಾಂತರಿಸಿದ್ದಾರೆ. ಮೃತ ಬಾಲಕಿಯ ಸಂಬಂಧಿಕರು, ಗ್ರಾಮಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದು,ಬಾಲಕಿಯನ್ನು ಕೊಲೆ ಮಾಡಿದ ಆರೋಪಿ ನಾಗರಾಜುಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಶಾಲೆಯಿಂದ ಏಕಾಂಗಿಯಾಗಿ ಹೊರಗೆ ಕಳುಹಿಸಿದ ಶಿಕ್ಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೂಳಿ ಕಾಳಗ; ಅಂಗಡಿಗೆ ನುಗ್ಗಿ ಇಬ್ಬರು ಯುವತಿಯರನ್ನು ತುಳಿದು ಹಾಕಿದ ಗೂಳಿಗಳು

ಆರೋಪಿ ನಾಗರಾಜು ಈಗಾಗಲೇ ಮದುವೆಯಾಗಿದ್ದು, ಆದರೆ ಪತ್ನಿ ಜತೆಗಿನ ಭಿನ್ನಾಭಿಪ್ರಾಯದಿಂದ ಕಳೆದ ಮೂರು ವರ್ಷಗಳಿಂದ ನಾಗರಾಜು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ನಾಗರಾಜು ವಿರುದ್ಧ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಚೇಬ್ರೋಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ