AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ; ಗ್ಯಾಸ್​ ಡೆಲಿವರಿ ಹುಡುಗನ ಮನೆಯಲ್ಲಿ ಶವ ಪತ್ತೆ

ಬಾಲಕಿಗಾಗಿ ಹುಡುಕಾಟ ನಡೆಸುತ್ತಿರುವ ವೇಳೆ ಗ್ಯಾಸ್​ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜು ಎಂಬಾತನ ಮನೆಯ ಮುಂದೆ ಬಾಲಕಿಯ ಚಪ್ಪಲಿ ಕಂಡು ಬಂದಿದೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಬಾಲಕಿಯ ಕುಟುಂಬಸ್ಥರು ಮನೆಯ ಕಿಟಕಿಯಿಂದ ಇಣುಕಿ ನೋಡಿದಾಗ ಮನೆಯೊಳಗೆ ಬಾಲಕಿಯ ಶವ ಪತ್ತೆಯಾಗಿದೆ.

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ; ಗ್ಯಾಸ್​ ಡೆಲಿವರಿ ಹುಡುಗನ ಮನೆಯಲ್ಲಿ ಶವ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jul 16, 2024 | 11:43 AM

Share

ಆಂಧ್ರಪ್ರದೇಶ: ಗುಂಟೂರು ಜಿಲ್ಲೆಯ ಚೇಬ್ರೋಲುವಿನ ಕೊತ್ತರೆಡ್ಡಿಪಾಲೆನಿಯ ಶೈಲಜಾ (13) ಎಂಬ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕೊಟ್ಟಾ ರೆಡ್ಡಿಪಾಲೆಂನ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿ ಅನಾರೋಗ್ಯದ ಕಾರಣ ಮಧ್ಯಾಹ್ನದ ವೇಳೆಗೆ ಶಾಲೆ ಬಿಟ್ಟಿರುವುದಾಗಿ ಶಾಲಾ ಅಧ್ಯಾಪಕರು ತಿಳಿಸಿದ್ದಾರೆ. ಆದರೆ ಸಂಜೆಯಾದರೂ ಮಗಳು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು ಹಾಗೂ ಪೋಷಕರು ಗ್ರಾಮದ ಹಲವೆಡೆ ಹುಡುಕಾಟ ನಡೆಸಿದ್ದಾರೆ.

ಊರಿನ ಪ್ರತೀ ಮನೆಯಲ್ಲಿ ಬಾಲಕಿಗಾಗಿ ಹುಡುಕಾಟ ನಡೆಸುತ್ತಿರುವ ವೇಳೆ ಗ್ಯಾಸ್​ ಡೆಲಿವರಿ ಹುಡುಗ ನಾಗರಾಜು ಎಂಬಾತನ ಮನೆಯ ಮುಂದೆ ಬಾಲಕಿಯ ಚಪ್ಪಲಿ ಇರುವುದು ಗಮನಕ್ಕೆ ಬಂದಿದೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಬಾಲಕಿಯ ಕುಟುಂಬಸ್ಥರು ಮನೆಯ ಕಿಟಕಿಯಿಂದ ಬಾಲಕಿಯ ಶವ ಪತ್ತೆಯಾಗಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯ ಬೀಗ ಒಡೆದು ಬಾಲಕಿಯನ್ನು ಹೊರಗೆ ತಂದಿದ್ದಾರೆ. ಬಳಿಕ ಬಾಲಕಿಯನ್ನು ಗುಂಟೂರು ಜಿಜಿಎಚ್‌ಗೆ ಸ್ಥಳಾಂತರಿಸಿದ್ದಾರೆ. ಮೃತ ಬಾಲಕಿಯ ಸಂಬಂಧಿಕರು, ಗ್ರಾಮಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದು,ಬಾಲಕಿಯನ್ನು ಕೊಲೆ ಮಾಡಿದ ಆರೋಪಿ ನಾಗರಾಜುಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಶಾಲೆಯಿಂದ ಏಕಾಂಗಿಯಾಗಿ ಹೊರಗೆ ಕಳುಹಿಸಿದ ಶಿಕ್ಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೂಳಿ ಕಾಳಗ; ಅಂಗಡಿಗೆ ನುಗ್ಗಿ ಇಬ್ಬರು ಯುವತಿಯರನ್ನು ತುಳಿದು ಹಾಕಿದ ಗೂಳಿಗಳು

ಆರೋಪಿ ನಾಗರಾಜು ಈಗಾಗಲೇ ಮದುವೆಯಾಗಿದ್ದು, ಆದರೆ ಪತ್ನಿ ಜತೆಗಿನ ಭಿನ್ನಾಭಿಪ್ರಾಯದಿಂದ ಕಳೆದ ಮೂರು ವರ್ಷಗಳಿಂದ ನಾಗರಾಜು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ನಾಗರಾಜು ವಿರುದ್ಧ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಚೇಬ್ರೋಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ