AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ; ಗ್ಯಾಸ್​ ಡೆಲಿವರಿ ಹುಡುಗನ ಮನೆಯಲ್ಲಿ ಶವ ಪತ್ತೆ

ಬಾಲಕಿಗಾಗಿ ಹುಡುಕಾಟ ನಡೆಸುತ್ತಿರುವ ವೇಳೆ ಗ್ಯಾಸ್​ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜು ಎಂಬಾತನ ಮನೆಯ ಮುಂದೆ ಬಾಲಕಿಯ ಚಪ್ಪಲಿ ಕಂಡು ಬಂದಿದೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಬಾಲಕಿಯ ಕುಟುಂಬಸ್ಥರು ಮನೆಯ ಕಿಟಕಿಯಿಂದ ಇಣುಕಿ ನೋಡಿದಾಗ ಮನೆಯೊಳಗೆ ಬಾಲಕಿಯ ಶವ ಪತ್ತೆಯಾಗಿದೆ.

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ; ಗ್ಯಾಸ್​ ಡೆಲಿವರಿ ಹುಡುಗನ ಮನೆಯಲ್ಲಿ ಶವ ಪತ್ತೆ
ಅಕ್ಷತಾ ವರ್ಕಾಡಿ
|

Updated on: Jul 16, 2024 | 11:43 AM

Share

ಆಂಧ್ರಪ್ರದೇಶ: ಗುಂಟೂರು ಜಿಲ್ಲೆಯ ಚೇಬ್ರೋಲುವಿನ ಕೊತ್ತರೆಡ್ಡಿಪಾಲೆನಿಯ ಶೈಲಜಾ (13) ಎಂಬ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕೊಟ್ಟಾ ರೆಡ್ಡಿಪಾಲೆಂನ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿ ಬೆಳಗ್ಗೆ ಶಾಲೆಗೆ ಹೋಗಿ ಅನಾರೋಗ್ಯದ ಕಾರಣ ಮಧ್ಯಾಹ್ನದ ವೇಳೆಗೆ ಶಾಲೆ ಬಿಟ್ಟಿರುವುದಾಗಿ ಶಾಲಾ ಅಧ್ಯಾಪಕರು ತಿಳಿಸಿದ್ದಾರೆ. ಆದರೆ ಸಂಜೆಯಾದರೂ ಮಗಳು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು ಹಾಗೂ ಪೋಷಕರು ಗ್ರಾಮದ ಹಲವೆಡೆ ಹುಡುಕಾಟ ನಡೆಸಿದ್ದಾರೆ.

ಊರಿನ ಪ್ರತೀ ಮನೆಯಲ್ಲಿ ಬಾಲಕಿಗಾಗಿ ಹುಡುಕಾಟ ನಡೆಸುತ್ತಿರುವ ವೇಳೆ ಗ್ಯಾಸ್​ ಡೆಲಿವರಿ ಹುಡುಗ ನಾಗರಾಜು ಎಂಬಾತನ ಮನೆಯ ಮುಂದೆ ಬಾಲಕಿಯ ಚಪ್ಪಲಿ ಇರುವುದು ಗಮನಕ್ಕೆ ಬಂದಿದೆ. ಆದರೆ ಮನೆಗೆ ಬೀಗ ಹಾಕಿದ್ದರಿಂದ ಬಾಲಕಿಯ ಕುಟುಂಬಸ್ಥರು ಮನೆಯ ಕಿಟಕಿಯಿಂದ ಬಾಲಕಿಯ ಶವ ಪತ್ತೆಯಾಗಿದೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮನೆಯ ಬೀಗ ಒಡೆದು ಬಾಲಕಿಯನ್ನು ಹೊರಗೆ ತಂದಿದ್ದಾರೆ. ಬಳಿಕ ಬಾಲಕಿಯನ್ನು ಗುಂಟೂರು ಜಿಜಿಎಚ್‌ಗೆ ಸ್ಥಳಾಂತರಿಸಿದ್ದಾರೆ. ಮೃತ ಬಾಲಕಿಯ ಸಂಬಂಧಿಕರು, ಗ್ರಾಮಸ್ಥರು ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ್ದು,ಬಾಲಕಿಯನ್ನು ಕೊಲೆ ಮಾಡಿದ ಆರೋಪಿ ನಾಗರಾಜುಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಶಾಲೆಯಿಂದ ಏಕಾಂಗಿಯಾಗಿ ಹೊರಗೆ ಕಳುಹಿಸಿದ ಶಿಕ್ಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗೂಳಿ ಕಾಳಗ; ಅಂಗಡಿಗೆ ನುಗ್ಗಿ ಇಬ್ಬರು ಯುವತಿಯರನ್ನು ತುಳಿದು ಹಾಕಿದ ಗೂಳಿಗಳು

ಆರೋಪಿ ನಾಗರಾಜು ಈಗಾಗಲೇ ಮದುವೆಯಾಗಿದ್ದು, ಆದರೆ ಪತ್ನಿ ಜತೆಗಿನ ಭಿನ್ನಾಭಿಪ್ರಾಯದಿಂದ ಕಳೆದ ಮೂರು ವರ್ಷಗಳಿಂದ ನಾಗರಾಜು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ನಾಗರಾಜು ವಿರುದ್ಧ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಚೇಬ್ರೋಳು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?