AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಬಾರ್​ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯ;1,500 ರೂಪಾಯಿ ವಿಚಾರಕ್ಕೆ ಹಾರಿಹೋಯ್ತು ಪ್ರಾಣ

ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ (Parappana Agrahara)ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಬಾರ್​(Bar)ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನಿಗೆ ಹಣ ಕೊಡಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಆನೇಕಲ್: ಬಾರ್​ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯ;1,500 ರೂಪಾಯಿ ವಿಚಾರಕ್ಕೆ ಹಾರಿಹೋಯ್ತು ಪ್ರಾಣ
ಮೃತ ವ್ಯಕ್ತಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 06, 2023 | 2:42 PM

Share

ಬೆಂಗಳೂರು ಗ್ರಾಮಾಂತರ, ಡಿ.06: ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ (Parappana Agrahara)ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಬಾರ್​(Bar)ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನಿಗೆ ಹಣ ಕೊಡಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಬಾರ್​ವೊಂದರಲ್ಲಿ ಗೋಪಾಲ್​, ಶಶಿ ಹಾಗೂ ಕರಿಗೌಡ ಎಂಬುವವರು ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ ಅದೇ ಬಾರ್​ಗೆ ಪ್ರದೀಪ್ ಎಂಬುವವರ​ ಜೊತೆ ಆರೋಪಿ ಗಿರೀಶ್ ಬಂದಿದ್ದಾರೆ. ಕರಿಗೌಡಗೆ 1,500 ರೂಪಾಯಿಯನ್ನು ಆರೋಪಿ ಗಿರೀಶ್​ಗೆ ಕೊಡಬೇಕಿತ್ತು. ಅದರಂತೆ ಆತ ತನ್ನ ಹಣ ಕೇಳಿದಾಗ, ಗಿರೀಶ್ ಅವಾಜ್​ ಹಾಕಿದ್ದ. ಬಳಿಕ ಮಧ್ಯಪ್ರವೇಶಿಸಿದ ಗೋಪಾಲ್ ಎಂಬಾತ, ಗಿರೀಶ್​ಗೆ ಹೊಡೆದು ಹಣ ಕೊಡಿಸಿದ್ದ​.

ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಗೋಪಾಲ್

ಇದಾದ ಬಳಿಕ ಗಿರೀಶ್, ಶಶಿಗೆ ಪೋನ್ ಮಾಡಿ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದ. ಆಮೇಲೆ ಗೋಪಾಲ್, ಕರೆಗೌಡ ಹಾಗೂ ಶಶಿಧರ್, ಗಿರೀಶ್ ಮನೆಗೆ ಹೋಗಿದ್ದರು. ಗಿರೀಶ್​ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿ ಬಳಿಯಲ್ಲಿ ಮೂವರು ಹೇಳಿದ್ದರು. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಬೆನ್ನ ಹಿಂದೆ ಇಟ್ಟುಕೊಂಡಿದ್ದ ಗಿರೀಶ್, ಗೋಪಾಲ್ ಎದೆಗೆ ಚಾಕುವಿನಿಂದ ಚುಚ್ಚಿ ಮನೆಯಿಂದ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ:ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಕೊಲೆ ಮಾಡಿ ಎಸ್ಕೇಪ್​ ಆದ ಆರೋಪಿಗಾಗಿ ಹುಡುಕಾಟ

ಇನ್ನು ಆತ ಚಾಕು ಇರಿಯುತ್ತಿದ್ದಂತೆ ಆತನ ಸ್ನೇಹಿತರು, ಗೋಪಾಲ್​​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ. ಆರೋಪಿ ಗಿರೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದ್ದು, ಬಾರ್​ನಲ್ಲಿ ನೂಕಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ