AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಬಾರ್​ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯ;1,500 ರೂಪಾಯಿ ವಿಚಾರಕ್ಕೆ ಹಾರಿಹೋಯ್ತು ಪ್ರಾಣ

ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ (Parappana Agrahara)ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಬಾರ್​(Bar)ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನಿಗೆ ಹಣ ಕೊಡಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಆನೇಕಲ್: ಬಾರ್​ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯ;1,500 ರೂಪಾಯಿ ವಿಚಾರಕ್ಕೆ ಹಾರಿಹೋಯ್ತು ಪ್ರಾಣ
ಮೃತ ವ್ಯಕ್ತಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 06, 2023 | 2:42 PM

Share

ಬೆಂಗಳೂರು ಗ್ರಾಮಾಂತರ, ಡಿ.06: ಕೇವಲ 1,500 ರೂಪಾಯಿ ವಿಚಾರಕ್ಕೆ ಕೊಲೆ ನಡೆದಿರುವ ಘಟನೆ ಪರಪ್ಪನ ಅಗ್ರಹಾರ (Parappana Agrahara)ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ. ಬಾರ್​(Bar)ನಲ್ಲಿ ಶುರುವಾದ ಹಣದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸ್ನೇಹಿತನಿಗೆ ಹಣ ಕೊಡಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಬಾರ್​ವೊಂದರಲ್ಲಿ ಗೋಪಾಲ್​, ಶಶಿ ಹಾಗೂ ಕರಿಗೌಡ ಎಂಬುವವರು ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ ಅದೇ ಬಾರ್​ಗೆ ಪ್ರದೀಪ್ ಎಂಬುವವರ​ ಜೊತೆ ಆರೋಪಿ ಗಿರೀಶ್ ಬಂದಿದ್ದಾರೆ. ಕರಿಗೌಡಗೆ 1,500 ರೂಪಾಯಿಯನ್ನು ಆರೋಪಿ ಗಿರೀಶ್​ಗೆ ಕೊಡಬೇಕಿತ್ತು. ಅದರಂತೆ ಆತ ತನ್ನ ಹಣ ಕೇಳಿದಾಗ, ಗಿರೀಶ್ ಅವಾಜ್​ ಹಾಕಿದ್ದ. ಬಳಿಕ ಮಧ್ಯಪ್ರವೇಶಿಸಿದ ಗೋಪಾಲ್ ಎಂಬಾತ, ಗಿರೀಶ್​ಗೆ ಹೊಡೆದು ಹಣ ಕೊಡಿಸಿದ್ದ​.

ಸ್ನೇಹಿತನ ಹಣ ಕೊಡಿಸಿ ಕಿರಿಕ್ ಮಾಡಿಕೊಂಡು ಹೆಣವಾದ ಗೋಪಾಲ್

ಇದಾದ ಬಳಿಕ ಗಿರೀಶ್, ಶಶಿಗೆ ಪೋನ್ ಮಾಡಿ ಅವಾಚ್ಯ ಶಬ್ಧಗಳಲ್ಲಿ ನಿಂದಿಸಿದ್ದ. ಆಮೇಲೆ ಗೋಪಾಲ್, ಕರೆಗೌಡ ಹಾಗೂ ಶಶಿಧರ್, ಗಿರೀಶ್ ಮನೆಗೆ ಹೋಗಿದ್ದರು. ಗಿರೀಶ್​ಗೆ ಸರಿಯಾಗಿ ಮಾತನಾಡುವಂತೆ ಆತನ ಪತ್ನಿ ಬಳಿಯಲ್ಲಿ ಮೂವರು ಹೇಳಿದ್ದರು. ಈ ವೇಳೆ ಅಡುಗೆ ಮನೆಯಿಂದ ಚಾಕು ತಂದು ಬೆನ್ನ ಹಿಂದೆ ಇಟ್ಟುಕೊಂಡಿದ್ದ ಗಿರೀಶ್, ಗೋಪಾಲ್ ಎದೆಗೆ ಚಾಕುವಿನಿಂದ ಚುಚ್ಚಿ ಮನೆಯಿಂದ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ:ಚಿಕ್ಕಬಳ್ಳಾಫುರ: ತಂಗಿ ಮೇಲಿನ ಕೋಪಕ್ಕೆ ಆಕೆಯ ಆರು ವರ್ಷದ ಮಗನನ್ನು ಕೊಲೆ ಮಾಡಿ ಹೂತು ಹಾಕಿದ ಅಕ್ಕ

ಕೊಲೆ ಮಾಡಿ ಎಸ್ಕೇಪ್​ ಆದ ಆರೋಪಿಗಾಗಿ ಹುಡುಕಾಟ

ಇನ್ನು ಆತ ಚಾಕು ಇರಿಯುತ್ತಿದ್ದಂತೆ ಆತನ ಸ್ನೇಹಿತರು, ಗೋಪಾಲ್​​ನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಎರಡು ದಿನಗಳ ಬಳಿಕ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾನೆ. ಆರೋಪಿ ಗಿರೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದ್ದು, ಬಾರ್​ನಲ್ಲಿ ನೂಕಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ