AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಜಾಗದ ವಿಚಾರವಾಗಿ ಗಲಾಟೆ: ಎದುರು ಮನೆಯವರಿಂದ ವ್ಯಕ್ತಿಯ ಕೊಲೆ

ನಿವೇಶನ ಜಾಗದ ವಿಚಾರಕ್ಕೆ ಪೊಲೀಸ್ ಠಾಣೆ ಹಿಂಭಾಗದ ಏರಿಯಾದಲ್ಲಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆನೇಕಲ್: ಜಾಗದ ವಿಚಾರವಾಗಿ ಗಲಾಟೆ: ಎದುರು ಮನೆಯವರಿಂದ ವ್ಯಕ್ತಿಯ ಕೊಲೆ
ಮೃತ ರಮೇಶ್​, ಆರೋಪಿಗಳು
ರಾಮು, ಆನೇಕಲ್​
| Edited By: |

Updated on: Oct 30, 2023 | 12:40 PM

Share

ಆನೇಕಲ್, ಅಕ್ಟೋಬರ್​​​​​ 30: ನಿವೇಶನ ಜಾಗದ ವಿಚಾರಕ್ಕೆ ಪೊಲೀಸ್ ಠಾಣೆ ಹಿಂಭಾಗದ ಏರಿಯಾದಲ್ಲಿ ವ್ಯಕ್ತಿಯ ಬರ್ಬರ ಕೊಲೆ (Murder) ಮಾಡಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿಯಲ್ಲಿ ನಡೆದಿದೆ. ಹೆಬ್ಬಗೋಡಿಯ ರಮೇಶ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಮೇಶ್ ಮನೆಯ ಎದುರು ಮನೆಯವರು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಹೆಬ್ಬಗೋಡಿಯಲ್ಲಿ ಮನೆ ಕಟ್ಟುವ ವಿಚಾರಕ್ಕೆ ಮೃತ ರಮೇಶ್​ ಹಾಗೂ ಕೊಲೆ ಆರೋಪಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ಸರ್ಕಾರದಿಂದ ನೀಡಲಾಗಿದ್ದ ಜಾಗದಲ್ಲಿ ರಮೇಶ್ ನಿನ್ನೆ ಮನೆಗೆ ಅಡಿಪಾಯ ಹಾಕಿದ್ದರು. ಇದೇ ಜಾಗವನ್ನು ಜಗದೀಶ್​​ ನನಗೆ ಸೇರಬೇಕು ಎಂದು ಆಗಾಗ ಗಲಾಟೆ ಮಾಡಿದ್ದ.

ಇದನ್ನೂ ಓದಿ: ತುಮಕೂರು: ಮಾಂಸಕ್ಕಾಗಿ ಬಾವಲಿಗಳ ಬೇಟೆ: ನಾಲ್ವರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

ಹೆಬ್ಬಗೋಡಿ ನಗರಸಭೆಯಿಂದ ಈ ಜಾಗ ರಮೇಶ್​ಗೆ ಸೇರಿದ್ದು ಎಂದು ದಾಖಲೆ ನೀಡಲಾಗಿತ್ತು. ಇದೇ ವಿಚಾರಕ್ಕೆ ರಾತ್ರಿ 10.30 ರ ಸಮಯದಲ್ಲಿ ಮಾರಕಾಸ್ತ್ರಗಳ ಜೊತೆ ಬಂದು ನಿನ್ನೆ ರಾತ್ರಿ ರಮೇಶ್​ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ದುಷ್ಕರ್ಮಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ

ದುಷ್ಕರ್ಮಿಗಳು ವ್ಯಕ್ತಿಯನ್ನಕೊಚ್ಚಿ ಕೊಲೆ ಮಾಡುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ರಮೇಶ್ ರಾತ್ರಿ ಅಡಿಪಾಯದ ಕೆಲಸ ಮಾಡಿಸುತ್ತಿದ್ದರು. ಏಕಾಏಕಿ ಮಾರಕಾಸ್ತ್ರಗಳನ್ನ ಹಿಡಿದು ಬಂದ ದುಷ್ಕರ್ಮಿಗಳು, ನಿರ್ಮಾಣ ಹಂತದ ನಿವೇಶನದ ಜಾಗದಲ್ಲಿಯೇ ರಮೇಶ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ.

ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಹಾವು ಕಡಿತ ಸಾವು    

ಹಾಸನ: ಹಾವು ಕಡಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ‌ ದೇವರಗುಡ್ಡೇನಹಳ್ಳಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ಅಭಿಲಾಷ್ (27) ಮೃತ ಯುವಕ. ಶನಿವಾರ ರಾತ್ರಿ ತೋಟಕ್ಕೆ ನೀರು ಹಾಯಿಸಲು ಹೋಗಿದ್ದಾಗ ಹಾವು ಕಡಿದಿದೆ. ಬಳಿಕ ತಕ್ಷಣ ಹೊಳೆನರಸೀಪುರ ಆಸ್ಪತ್ರೆಗೆ ಕರೆತರಲಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಇದನ್ನೂ ಓದಿ: ಗಲಾಟೆ ವೇಳೆ ಸೀರೆ ಹಿಡಿದು ವ್ಯಕ್ತಿ ಎಳೆದಾಡಿದ ಆರೋಪ: ಮನನೊಂದು ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಹೈನುಗಾರಿಕೆ ಹಾಗೂ ಕೃಷಿ ಮೂಲಕ ಜೀವನ ನಡೆಸುತ್ತಿದ್ದರು. ರಾತ್ರಿ ವೇಳೆ ಮಾತ್ರವೇ ಥ್ರೀ ಫೇಸ್ ಕರೆಂಟ್ ಹಿನ್ನೆಲೆಯಲ್ಲಿ ಬೆಳೆಗೆ ನೀರು ಹರಿಸಲು ಹೋಗಿದ್ದರು. ಸರ್ಕಾರದಿಂದ ಕೃಷಿಗೆ ರಾತ್ರಿ ಕರೆಂಟ್ ನೀತಿಯಿಂದ ಯುವ ರೈತ ಬಲಿಯಾಗಿದ್ದಾನೆ. ಹಳ್ಳಿ ಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ