AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿ; ಯುವಕ ಯುವತಿ ಸಾವು

ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

ಯುಟರ್ನ್ ತೆಗೆದುಕೊಳ್ಳುವಾಗ ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿ; ಯುವಕ ಯುವತಿ ಸಾವು
ಅಪಘಾತಕ್ಕೀಡಾದ ವಾಹನಗಳು
TV9 Web
| Edited By: |

Updated on:Sep 26, 2021 | 10:58 PM

Share

ಆನೇಕಲ್: ಬೈಕ್​ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ. ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ‌(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.

ಧಾರವಾಡದಲ್ಲೂ ಅಪಘಾತ ಕಾರು ಮತ್ತು ಓಮಿನಿ ಮಧ್ಯೆ ರಸ್ತೆ ಅಪಘಾತವಾಗಿ ಗಾಯಾಳು ರಸ್ತೆ ಮಧ್ಯೆ ನೋವಿನಿಂದ ನರಳಾಡಿದ ದುರ್ಘಟನೆ ಧಾರವಾಡ-ಸವದತ್ತಿ ರಸ್ತೆಯಲ್ಲಿ ಘಟಿಸಿದೆ. ಧಾರವಾಡ ತಾಲೂಕಿನ ಅಮ್ಮಿನಬಾವಿ ಬಳಿ ಈ ದುರ್ಘಟನೆ ಸಂಭವಿಸಿದ್ದು ಕಾರು ಧಾರವಾಡದಿಂದ ಸವದತ್ತಿಗೆ ಪ್ರಯಾಣ ಬೆಳೆಸಿತ್ತು ಎಂದು ತಿಳಿದುಬಂದಿದೆ. ಕಾರು ಮತ್ತು ಓಮಿನಿ ನಡುವೆ ಓವರ್ ಟೇಕ್ ಮಾಡುವ ವೇಳೆ ಘಟನೆ ಸಂಭವಿಸಿದೆ. ಗಾಯಾಳುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕನಕಪುರದ ಕಬ್ಬಾಳು ಬೆಟ್ಟದಲ್ಲಿ ಪ್ರೇಮಿಗಳಿಂದ ಆತ್ಮಹತ್ಯೆ ರಾಮನಗರ: ಕನಕಪುರ ತಾಲೂಕಿನ ಕಬ್ಬಾಳು ಬೆಟ್ಟದಲ್ಲಿ ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಜಿಗಿದು ಸತೀಶ್ (21) ಮತ್ತು ಚಂದನಾ (21) ಎಂಬ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಪ್ರೇಮಿಗಳಾಗಿದ್ದರು ಎಂದು ತಿಳಿದುಬಂದಿದೆ. ಇಬ್ಬರೂ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉರುಗಮ್ ನಿವಾಸಿಗಳು. ಸತೀಶ್ ತಮಿಳುನಾಡಿನ ಹೊಸೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿದ್ದ. ಸತೀಶ್ ಮತ್ತು ಚಂದನಾ 3 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

1 ವರ್ಷದ ಹಿಂದೆ ಚಂದನಾ ಅವರನ್ನು ಕನಕಪುರದ ಸಮೀಪ ಮದುವೆ ಮಾಡಿಕೊಡಲಾಗಿತ್ತು. ಆದರೆ ಸೆಪ್ಟೆಂಬರ್ 22ರಂದು ಪತಿಯ ಮನೆಯಿಂದ ಚಂದನಾ ನಾಪತ್ತೆಯಾಗಿದ್ದರು. ಈಕುರಿತು ಕನಕಪುರ ಟೌನ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:  

ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ

ಹಾವೇರಿ: ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಜೋಕುಮಾರಸ್ವಾಮಿ ಹಬ್ಬ ಆಚರಣೆ; ಸಡಗರ ಸಂಭ್ರಮ

(Anekal bike and BMTC Bus accident in Electronic city U turn)

Published On - 9:53 pm, Sun, 26 September 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು