AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು ಹೊರವಲಯದ ಆನೇಕಲ್(Anekal)​​ ತಾಲೂಕಿನ ಜಿಗಣಿ ಟೌನ್​ನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನೇಕಲ್: ಕೌಟುಂಬಿಕ ಕಲಹ; ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ
ಆರೋಪಿ ಪತಿ, ಮೃತ ಪತ್ನಿ
ರಾಮು, ಆನೇಕಲ್​
| Edited By: |

Updated on:Mar 28, 2024 | 2:45 PM

Share

ಬೆಂಗಳೂರು ಗ್ರಾಮಾಂತರ, ಮಾ.28: ಕ್ಷುಲ್ಲಕ ಕಾರಣಗಳಿಗೆ ಕೊಲೆ, ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಅದರಂತೆ ಇದೀಗ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್(Anekal)​​ ತಾಲೂಕಿನ ಜಿಗಣಿ ಟೌನ್​ನಲ್ಲಿ ನಡೆದಿದೆ. ಪತಿ ಮುಬಾರಕ್​​(28) ಎಂಬಾತ ಪತ್ನಿ ಅರ್ಬಿಯಾ ತಾಜ್​(24) ಅವರನ್ನು ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಪತ್ನಿ ಕೊಲೆಗೈದ ಪತಿ ಮುಬಾರಕ್ ಆತ್ಮಹತ್ಯೆಗೆ ಯತ್ನ

ಕೊಲೆಯಾದ ಮಹಿಳೆ, ಗಂಡನ ಕಿರುಕುಳಕ್ಕೆ ಬೇಸೆತ್ತು ತಿಂಗಳ ಹಿಂದೆ ತವರಿಗೆ ಹೋಗಿದ್ದರು. ಈ ಹಿನ್ನಲೆ ವಾರದ ಹಿಂದೆಯಷ್ಟೇ ಪತ್ನಿ ಮನೆಗೆ ಬಂದಿದ್ದ ಆರೋಪಿ ಪತಿ ಮುಬಾರಕ್​, ಅರ್ಬಿಯಾ ತಾಜ್​ಳನ್ನು ಮನೆಗೆ ಬರಲು ಕರೆದಿದ್ದಾನೆ. ಆದರೆ, ಗಂಡನ ಮನೆಗೆ ಹೋಗಲು ಪತ್ನಿ ಹಿಂದೇಟು ಹಾಕಿದ್ದಾಳೆ. ಬಳಿಕ ಮುಬಾರಕ್​ ಹಾಗೆಯೇ ಹೋಗಿದ್ದ. ಇಂದು ವಾಪಸ್ ತನ್ನ ಮನೆಗೆ ಬರುವಂತೆ ಪತಿ ಬಂದು ಒತ್ತಾಯಿಸಿದ್ದಾನೆ. ಮತ್ತೆ ಬರಲು ನಕಾರ ಮಾಡಿದ ಹಿನ್ನೆಲೆ ಪತ್ನಿಯನ್ನ ಮಾರಕಾಸ್ತ್ರದಿಂದ ಕೊಲೆಗೈದಿದ್ದಾನೆ.

ಇದನ್ನೂ ಓದಿ:ಐವರು ಹೆಣ್ಣುಮಕ್ಕಳಿಗೆ ವಿಷವುಣಿಸಿ ತಾಯಿಯೂ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ

ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇನ್ನು ಪತ್ನಿ ಅರ್ಬಿಯಾ ತಾಜ್​ಳನ್ನ ಮಚ್ಚಿನಿಂದ ಹಲ್ಲೆ ಮಾಡಿದೊಡನೆ ಕೂಗಾಡಿದ್ದಾಳೆ. ಇದನ್ನು ಕೇಳಿದ ತಕ್ಷಣ ಮೃತ ಮಹಿಳೆ ತಾಯಿ ನೆರವಿಗೆ ಧಾವಿಸಿದ್ದಾಳೆ. ಈ ವೇಳೆ ಪತಿ ಮುಬಾರಕ್​ ಬಾಗಿಲು ಲಾಕ್ ಮಾಡಿ ಆತ್ಮಹತ್ಯೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಜಿಗಣಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಂಟೇನರ್, ಈರುಳ್ಳಿ ತುಂಬಿದ ಕ್ಯಾಂಟರ್ ನಡುವೆ ಡಿಕ್ಕಿ

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಂಟೇನರ್ ಮತ್ತು ಈರುಳ್ಳಿ ತುಂಬಿದ ಕ್ಯಾಂಟರ್ ನಡುವೆ ಡಿಕ್ಕಿಯಾಗಿದ್ದು, ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು,  ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:39 pm, Thu, 28 March 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ