AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ನಿಂದ ಹೊರಹೋದ ವಿದ್ಯಾರ್ಥಿ; ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ

ಆತ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ. ಕಾಲೇಜಿನ ಹಾಸ್ಟೆಲ್​ನಲ್ಲಿಯೇ ವಾಸವಿದ್ದು, ನಿತ್ಯ ಕಾಲೇಜ್ ಬಸ್​ನಲ್ಲಿ ಹೋಗಿ ಬರುತ್ತಿದ್ದ. ಆದ್ರೆ, ಕಳೆದ ನಾಲ್ಕೈದು ದಿನಗಳ ಹಿಂದೆ ಕಾಲೇಜಿಗೆ ಹೋಗುವುದಾಗಿ ಹಾಸ್ಟೆಲ್​ನಿಂದ ಹೊರಹೋದ ವಿದ್ಯಾರ್ಥಿ ಕಾಣೆಯಾಗಿದ್ದು, ಇದೀಗ ಆನೇಕಲ್ ಸಮೀಪದ ತೆಲಗರಹಳ್ಳಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಹಾಸ್ಟೆಲ್​ನಿಂದ ಹೊರಹೋದ ವಿದ್ಯಾರ್ಥಿ; ನಿರ್ಜನ ಪ್ರದೇಶದಲ್ಲಿ ಶವವಾಗಿ ಪತ್ತೆ
ಮೃತ ವಿದ್ಯಾರ್ಥಿ
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 25, 2024 | 8:02 PM

Share

ಬೆಂಗಳೂರು, ಫೆ.25: ಉತ್ತರಾಖಂಡ ಮೂಲದ ಬಿ.ಟೆಕ್ ಓದುತ್ತಿದ್ದ ವಿದ್ಯಾರ್ಥಿ(Student)ಯೊಬ್ಬ ಕಾಲೇಜಿಗೆ ಹೋಗುವುದಾಗಿ ಹಾಸ್ಟೆಲ್ ನಿಂದ ಹೊರಹೋದವ ನಾಲ್ಕೈದು ದಿನಗಳ ಬಳಿಕ ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ತೆಲಗರಹಳ್ಳಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹರ್ಷಿತ್ ಕೊಟ್ನಾಲಾ ಮೃತ ರ್ದುದೈವಿ. ಪ್ರತಿಷ್ಠಿತ ಅಲಯನ್ಸ್ ಯೂನಿವರ್ಸಿಟಿಯಲ್ಲಿ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್ ಕೊಟ್ನಾಲಾ, ಗುಮ್ಮಾಳಾಪುರದ ಕಾಲೇಜಿನ ಹಾಸ್ಟೆಲ್​ನಲ್ಲಿಯೇ ವಾಸವಿದ್ದ. ಪ್ರತಿದಿನ ಎಂದಿನಂತೆ ಬೆಳಿಗ್ಗೆ ಕಾಲೇಜಿನ ಬಸ್ ನಲ್ಲಿಯೇ ಸ್ನೇಹಿತರೊಡನೆ ಕಾಲೇಜಿಗೆ ಹೋಗಿ ಬರುತ್ತಿದ್ದ. ಆದ್ರೆ, ಕಳೆದ 21 ನೇ ತಾರೀಖಿನಂದು ಕಾಲೇಜಿನ ಬಸ್​ನಲ್ಲಿ ತೆರಳದೆ, ಹಾಸ್ಟೆಲ್​ನಿಂದ ತಡವಾಗಿ ಕಾಲೇಜಿಗೆ ಹೋಗೋದಾಗಿ ಹೊರಬಂದಿದ್ದ.

ಅಲ್ಲಿಂದ ಹೊರ ಹೋದ ವಿದ್ಯಾರ್ಥಿ ಹರ್ಷಿತ್, ಕಾಲೇಜಿಗೆ ಹೋಗದೆ ಕಾಣೆಯಾಗಿದ್ದ. ಎಷ್ಟೇ ಹುಡುಕಾಟ ನಡೆಸಿದರೂ ಕಾಣದಿದ್ದಾಗ ತಮಿಳುನಾಡಿನ ತಳಿ‌ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಟ್‌ ನೀಡಿದ್ದರು. ಈ ಮಧ್ಯೆ ತೆಲಗರಹಳ್ಳಿಯ ನೀಲಗಿರಿ ತೋಪಿನ ಸ್ಥಳೀಯರಿಗೆ ಸುಟ್ಟು ಕರಕಲಾದ ಶವವೊಂದು ಕಂಡಿತ್ತು. ಕೂಡಲೇ ಆನೇಕಲ್ ಪೊಲೀಸರಿಗೆ ವಿಷಯವನ್ನು ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂದು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಸ್ಥಳದಲ್ಲಿ ದೊರೆತ ಬ್ಯಾಗ್​ನಲ್ಲಿನ ದಾಖಲೆಗಳ ಆಧಾರದ ಮೇಲೆ ಹರ್ಷಿತ್ ಎಂದು ಗುರುತಿಸಿದ್ದಾರೆ.

ಇದನ್ನೂ ಓದಿ:ಅಪಘಾತವೋ, ಕೊಲೆಯೋ!? ನಾಪತ್ತೆಯಾಗಿದ್ದ ವ್ಯಕ್ತಿ 11 ದಿನ ಬಳಿಕ ರಸ್ತೆ ಬದಿ ನೀರಿನ ಹೊಂಡದಲ್ಲಿ ಕಾರು ಸಮೇತ ಶವವಾಗಿ ಪತ್ತೆ

ಇನ್ನು ವಿದ್ಯಾರ್ಥಿ ಹರ್ಷಿತ್ 21ನೇ ತಾರೀಖಿನಂದು ಕಾಲೇಜ್ ಬಸ್‌ನಲ್ಲಿ ತೆರಳದೆ, ಹಾಸ್ಟೆಲ್‌ನಿಂದ ತಡವಾಗಿ ಹೊರಟ್ಟಿದ್ದ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಲೇಜಿಗೆ ಹೋಗದೆ ಸ್ನೇಹಿತರ ಜತೆ ಹೋಗಿರುವ ಶಂಕೆ ವ್ಯಕ್ತವಾಗಿದೆ. ತೆಲಗರಹಳ್ಳಿಯ ನಿರ್ಜನ ಪ್ರದೇಶದಲ್ಲಿ ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮದ್ಯದ ಬಾಟೆಲ್‌, ತಿಂಡಿ-ತಿನಿಸು ಬಿದ್ದಿದ್ದು, ಈ ನಡುವೆ ಹರ್ಷಿತ್‌ ಹಾಗೂ ಜೊತೆಯಲ್ಲಿದ್ದವರ ನಡುವೆ ಏನು ನಡೆದಿದೆಯೋ ತಿಳಿದಿಲ್ಲ. ದುಷ್ಟರು ಹರ್ಷಿತ್‌ನನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಪುರುಷೋತ್ತಮ್, ಶ್ವಾನದಳ, ಎಫ್. ಎಸ್. ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಹಲವು ಸಾಕ್ಷ್ಯ ಕಲೆ ಹಾಕಿದ್ದಾರೆ.  ವಿದ್ಯಾರ್ಥಿ ಹರ್ಷಿತ್​ನ ಹತ್ಯೆಯು, ಪ್ರೀತಿ ಪ್ರೇಮದ ವಿಚಾರಕ್ಕೆ ನಡೆದಿದ್ಯಾ ಅಥವಾ ಸ್ನೇಹಿತರ ಜೊತೆ ಕುಡಿದ ಮತ್ತಿನಲ್ಲಿ ಕಿರಿಕ್ ಆಗಿ ಕೊಲೆ ನಡೆದಿದೆಯಾ, ಹಂತಕರು ಯಾರೂ ಎಂಬುದರ ಕುರಿತು ಪೊಲೀಸರು ತನಿಖೆಯಿಂದ ತಿಳಿದು ಬರಬೇಕಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ