AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು: ಯುಗಾದಿಯಂದೇ ಹೆಣವಾದ ಕುಖ್ಯಾತ ರೌಡಿಶೀಟರ್​​

ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿಯಲ್ಲಿ ಕುಖ್ಯಾತ ರೌಡಿ ಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ಮಾಡುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು: ಯುಗಾದಿಯಂದೇ ಹೆಣವಾದ ಕುಖ್ಯಾತ ರೌಡಿಶೀಟರ್​​
ಕುಖ್ಯಾತ ರೌಡಿಶೀಟರ್ ನೇಪಾಳಿ ಮಂಜ
ರಾಮು, ಆನೇಕಲ್​
| Edited By: |

Updated on:Mar 31, 2025 | 8:07 AM

Share

ಆನೇಕಲ್, ಮಾರ್ಚ್​ 31: ಫ್ಯಾಮಿಲಿ, ಮಕ್ಕಳಿದ್ದಾರೆ ಒಳ್ಳೆಯವರಾಗಿ ಬದುಕಿ ಅಂತ ಪೊಲೀಸರು ಕರೆದು ಬುದ್ಧಿ ಹೇಳಿದ್ದರು. ಸ್ನೇಹಿತರು, ಆಪ್ತರು ಕರೆದರೂ ಅಂತಾ ಹೋದರೆ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತೀರಾ ಅನ್ನೋ ಎಚ್ಚರಿಕೆ ಕೊಟ್ಟಿದ್ದರು. ಇಷ್ಟಾದರೂ ಬುದ್ಧಿ ಕಲಿಯದ ರೌಡಿಶೀಟರ್​ (Rowdy sheeter) ಇದೀಗ ಹಾದಿಬೀದಿಯಲ್ಲಿ ಹೆಣವಾಗಿ (death) ಹೋಗಿದ್ದಾನೆ. ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿ ಕುಖ್ಯಾತ ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜನ ಬರ್ಬರ ಕೊಲೆ ನಡೆದಿರುವಂತಹ ಘಟನೆ ನಡೆದಿದೆ.

ಎಣ್ಣೆ ಪಾರ್ಟಿ ಮಾಡ್ತಿದ್ದಾಗಲೇ ಕೊಚ್ಚಿ ಕೊಂದ ಹಂತಕರು!

ರೌಡಿಶೀಟರ್ ಮಂಜ ಅಲಿಯಾಸ್ ನೇಪಾಳಿ ಮಂಜ, ಎರಡು ಕೊಲೆ, ಕೊಲೆ ಯತ್ನ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿದ್ದ. ಹೆಬ್ಬಗೋಡಿ ಸೇರಿದಂತೆ ಹಲವೆಡೆ ಹವಾ ಮೇಂಟೇಂನ್ ಮಾಡ್ಕೊಂಡು ಓಡಾಡ್ತಿದ್ದ. ಈತನ ವಿರುದ್ಧ ಪೊಲೀಸರು ಗೂಂಡಾ ಕೇಸ್ ಓಪನ್ ಮಾಡಲಾಗಿತ್ತು. ಮಣ್ತಿನ್ನೊ ಕೆಲಸ ಮಾಡುತ್ತಿದ್ದ ನೇಪಾಳಿ ಮಂಜ ಇತ್ತೀಚೆಗಷ್ಟೇ ಕುಟುಂಬ ಸಮೇತ ಕುಣಿಗಲ್​​ಗೆ ಶಿಫ್ಟ್ ಆಗಿದ್ದ. ನಿನ್ನೆ ಯುಗಾದಿ ಹಬ್ಬ ಇದ್ದಿದ್ರಿಂದ ಸ್ನೇಹಿತರು ಕರೆದರೂ ಅಂತಾ ಕುಣಿಗಲ್​ನಿಂದ ಬೆಂಗಳೂರಿಗೆ ರೌಡಿಶೀಟರ್ ಮಂಜ ಬಂದಿದ್ದಾನೆ. ಇಬ್ಬರು ಸ್ನೇಹಿತರ ಜೊತೆ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಿರ್ಜನ ಪ್ರದೇಶದಲ್ಲಿ ರಾತ್ರಿ ಎಣ್ಣೆ ಪಾರ್ಟಿ ಮಾಡ್ತಿದ್ರಂತೆ. ಈ ವೇಳೆ 2 ಬೈಕ್​ನಲ್ಲಿ ಎಂಟ್ರಿಕೊಟ್ಟಿದ್ದ ಐವರ ಗ್ಯಾಂಗ್ ಲಾಂಗು, ಮಚ್ಚು, ಚಾಕುವಿನಿಂದ ದಾಳಿ ಮಾಡಿ ಮಂಜನನ್ನೂ ಕೊಚ್ಚಿ ಕೊಂದಿದ್ದಾರೆ.

ಇದನ್ನೂ ಓದಿ: 2ನೇ ಮದ್ವೆಯಾದ ಪತಿ: ಮೊದಲ ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಗಂಡ ರಾಕ್ಷಸ ಅವತಾರ

ಇದನ್ನೂ ಓದಿ
Image
ಹೆಂಡ್ತಿ ಜೀವನಾಂಶ ಕೇಳಿದ್ದಕ್ಕೆ ಯುಗಾದಿಯಂದೇ ಗಂಡ ರಾಕ್ಷಸ ಅವತಾರ!
Image
ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ
Image
ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ದುರ್ಮರಣ
Image
ಸೈಬರ್ ವಂಚಕರ ಬಲೆಗೆ ಬಿದ್ದ ವೃದ್ಧ ದಂಪತಿ ದುರಂತ ಸಾವು!

ಕೊಲೆ, ಕೊಲೆಯತ್ನ, ರಾಬರಿ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ನೇಪಾಳಿ ಮಂಜ ಭಾಗಿ ಆಗಿದ್ದ. ಕಳೆದ 2 ತಿಂಗಳ ಹಿಂದಷ್ಟೇ ಪೊಲೀಸರು ಕರೆದು ವಾರ್ನಿಂಗ್ ಕೂಡ ಕೊಟ್ಟಿದ್ದರು. ಆದರೂ ಪಾಠ ಕಲಿಯದ ಮಂಜ ತನ್ನ ಹಳೇ ಚಾಳಿ ಮುಂದುವರಿಸಿದ್ದ. ಇನ್ನು ಸ್ನೇಹಿತರ ಜೊತೆಗೆ ಎಣ್ಣೆ ಪಾರ್ಟಿ ಮಾಡೋದಕ್ಕೆ ಮಂಜ ಬಂದಿದ್ದಾನೆ ಅನ್ನೋದನ್ನ ಹಂತಕರು ಗ್ಯಾಂಗ್ ಮಾಹಿತಿ ಕಲೆ ಹಾಕಿದ್ದಾರೆ. ಈ ವೇಳೆ ಮಾರಕಾಸ್ತ್ರದಿಂದ ದಾಳಿ ಮಾಡಿ ನೇಪಾಳಿ ಮಂಜನನನ್ನ ಭೀಕರವಾಗಿ ಹತ್ಯೆಗೈದಿದ್ದಾರೆ. ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ಮೂಡಿದೆ. ಹೆಬ್ಬುಗೋಡಿ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಹೇಳಿದ್ದಿಷ್ಟು 

ಈ ಬಗ್ಗೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಸಿ.ಕೆ.ಬಾಬಾ ಪ್ರತಿಕ್ರಿಯಿಸಿದ್ದು, ರಾತ್ರಿ 10.45ರ ಸುಮಾರಿಗೆ ನೇಪಾಳಿ ಮಂಜನ ಕೊಲೆ ನಡೆದಿದೆ. ವೀರಸಂದ್ರ ನಿವಾಸಿಯಾಗಿದ್ದ ಮೃತ ನೇಪಾಳಿ ಮಂಜು, ಸ್ನೇಹಿತರ ಜೊತೆ ಎಣ್ಣೆ ಪಾರ್ಟಿ ಮಾಡುತ್ತಿದ್ದಾಗ ದಾಳಿ ನಡೆದಿದೆ. ಎರಡು ಬೈಕ್​ಗಳಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆ ಇದೆ ಎಂದಿದ್ದಾರೆ.

ಇದನ್ನೂ ಓದಿ: ಮಡಿಕೇರಿ: ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ

ಇತ್ತೀಚೆಗೆ ಮಂಜ ಕುಟುಂಬ ಸಮೇತ ಕುಣಿಗಲ್​​​ಗೆ ಶಿಫ್ಟ್ ಆಗಿದ್ದ. ಯುಗಾದಿ ಹಬ್ಬ ಹಿನ್ನೆಲೆ ಮಂಜನನ್ನ ಕರೆಸಿಕೊಂಡಿದ್ದ ಸ್ನೇಹಿತರು, ಎಣ್ಣೆಪಾರ್ಟಿ ಮಾಡುತ್ತಿದ್ದಾಗಲೇ ಅಟ್ಯಾಕ್ ಆಗಿದೆ. ಪರಿಚಿತರಿಂದಲೇ ನೇಪಾಳಿ ಮಂಜ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಜನನ್ನು ಗೂಂಡಾಕಾಯ್ದೆ ಜೊತೆಗೆ ಗಡಿಪಾರು ಕೂಡ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ಮನೆಹಾಳ್ ಕೆಲಸ ಮಾಡಿ ಊರಲ್ಲಿ ಸೆಟಲ್ ಆಗಿದ್ದ ನೇಪಾಳಿ ಮಂಜ ಯುಗಾದಿ ದಿನವೇ ತನ್ನ ಅಡ್ಡಾದಲ್ಲಿ ಬೀದಿ ಹೆಣವಾಗಿದ್ದಾನೆ. ಮಂಜನನ್ನ ಕರೆಸಿಕೊಂಡು ಆಪ್ತ ಸ್ನೇಹಿತರೇ ಆಪ್ ಇಟ್ಟರಾ? ಇಲ್ಲ, ಕೊಲೆಗೆ ಬೇರೆ ಏನಾದರೂ ಕಾರಣ ಇದೆಯಾ ಅನ್ನೋದು ಪೊಲೀಸ್ ತನಿಖೆ ನಂತರ ಬಯಲಾಗಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:59 am, Mon, 31 March 25

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?