AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜಾಪುರ: ಪೋಷಕರಿಗೆ ಹೇಳದೆ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ಠಾಣೆ ಮೆಟ್ಟಿಲೇರಿದ ತಾಯಿ

Child marriage: ರಾಜ್ಯದಲ್ಲಿ ಬಾಲ್ಯ ವಿವಾಹ ದ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೆಲ ಹಳ್ಳಿಗಳಲ್ಲಿ ಅಲ್ಲೊಂದು, ಇಲ್ಲೊಂದು ಪ್ರಕರಣಗಳು ಕೇಳಿ ಬರುತ್ತಿತ್ತು. ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲೇ ಮಹಿಳೆಯೊಬ್ಬಳು ತನ್ನ ಮಗಳಿಗೆ ಬಲವಂತವಾಗಿ ಬಾಲ್ಯ ವಿವಾಹ ಮಾಡಿದ ಘಟನೆ ನಡೆದಿತ್ತು. ಇದೀಗ, ಆನೇಕಲ್​ ತಾಲೂಕಿನ ಸರ್ಜಾಪುರದಲ್ಲಿ ಆಕೆಯ ಪೋಷಕರಿಗೇ ತಿಳಿಸದೆ ದೊಡ್ಡಪ್ಪ 14 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ಮದುವೆ ಮಾಡಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಸರ್ಜಾಪುರ: ಪೋಷಕರಿಗೆ ಹೇಳದೆ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ಠಾಣೆ ಮೆಟ್ಟಿಲೇರಿದ ತಾಯಿ
ಸರ್ಜಾಪುರ: ಪೋಷಕರಿಗೆ ಹೇಳದೆ ಮಗಳಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ; ಠಾಣೆ ಮೆಟ್ಟಿಲೇರಿದ ತಾಯಿ
ರಾಮು, ಆನೇಕಲ್​
| Edited By: |

Updated on: Feb 17, 2024 | 12:43 PM

Share

ಆನೇಕಲ್, ಫೆ.17: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೂಗಳತೆ ದೂರದಲ್ಲಿ ಬಾಲ್ಯ ವಿವಾಹ (Child Marriage) ಪ್ರಕರಣ ಬೆಳಕಿಗೆ ಬಂದಿದೆ. 24 ವರ್ಷದ ಯುವಕನೊಂದಿಗೆ 14 ವರ್ಷದ ಬಾಲಕಿಯನ್ನು ಆಕೆಯ ಪೋಷಕರಿಗೆ ಹೇಳದೆ ದೊಡ್ಡಪ್ಪ ಮದುವೆ ಮಾಡಿಸಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರದಲ್ಲಿ (Sarjapur) ನಡೆದಿದೆ.

ಎಂಟನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯನ್ನು ದೊಡ್ಡಪ್ಪ ದೊಡ್ಡಮ್ಮ ಪುಸಲಾಯಿಸಿಕೊಂಡು 24 ವರ್ಷದ ಯುವಕನೊಂದಿಗೆ ಮದುವೆ ಮಾಡಿಸಿದ್ದಾರೆ. ಪ್ರಕರಣ ಸಂಬಂಧ ಬಾಲಕಿಯ ತಾಯಿ ಬಾಲಕಿಯ ದೊಡ್ಡಪ್ಪ, ದೊಡ್ಡಮ್ಮ ಹಾಗೂ ಇತರರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನನ್ನ ಮಗಳನ್ನು ಪುಸಲಾಯಿಸಿ ಫೆಬ್ರವರಿ 15 ರಂದು ಮದುವೆ ಮಾಡಿಸಲಾಗಿದೆ. ಮಗಳು ಇನ್ನೂ ಅಪ್ರಾಪ್ತಳಾಗಿದ್ದಾಳೆ. ಕೈವಾರದಲಿನ ಯಲಮ್ಮ ದೇವಾಲಯದಲ್ಲಿ ತಂದೆ ತಾಯಿಗೆ ಗೊತ್ತಿಲ್ಲದೆ ಹಲಸಿನಕಾಯಿಪುರ ಗ್ರಾಮದ ವಿನೋದ್ ಕುಮಾರ್ ಜೊತೆ ಮದುವೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಮಾಧವ ಗುರ್ಜೇನಹಳ್ಳಿಯಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ: ಅರಶಿನ ಶಾಸ್ತ್ರದ ವೇಳೆ ಅಧಿಕಾರಿಗಳಿಂದ ದಾಳಿ

ಮದುವೆಗೆ ವಿನೋದ್ ಕುಮಾರ್ ತಂದೆ ಮುನಿಯಪ್ಪ, ತಾಯಿ ರತ್ನಮ್ಮ, ವಿನೋದ್ ಕುಮಾರ್, ಅಣ್ಣ ವಿಜಯ್ ಕುಮಾರ್ ಮತ್ತು ವೆಂಕಟಮ್ಮರವರು ಸೇರಿಕೊಂಡು ಈ ಮದುವೆ ಮಾಡಿದ್ದಾರೆ. ನನ್ನ ಮಗಳು ಅಪ್ರಾಪ್ತ ವಯಸ್ಕಳೆಂದು ಗೊತ್ತಿದ್ದರೂ ಸಹ ಬಲತ್ಕಾರದ ಮದುವೆ ಮಾಡಿದ್ದಾರೆ. ಕಾನೂನು ಬಾಹಿರವಾಗಿ ಮದುವೆ ಮಾಡಿಸಿದ ಹಿನ್ನೆಲೆ ತಪ್ಪತಸ್ಥರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಜನವರಿ ತಿಂಗಳಲ್ಲಿ, ಬೆಂಗಳೂರು ನಗರದ ಆರ್.ಆರ್.ನಗರದ ದೇಗುಲದಲ್ಲಿ 16 ವರ್ಷದ ಬಾಲಕಿಗೆ 27 ವರ್ಷದ ಯುವಕನ ಜೊತೆ ಆಕೆಯ ತಾಯಿಯೇ ಒತ್ತಾಯ ಪೂರ್ವಕವಾಗಿ ಮದುವೆ ಮಾಡಿಸಿದ್ದ ಪ್ರಕರಣ ನಡೆದಿತ್ತು. ಮಗಳಿಗೆ ಮದುವೆ ಇಷ್ಟವಿಲ್ಲದಿದ್ದರೂ ತಾಯಿಯೇ ಬಲವಂತವಾಗಿ ವಿವಾಹ ಮಾಡಿಸಿದ್ದು, ಬಳಿಕ ಬಲವಂತವಾಗಿ ದೈಹಿಕ‌ ಸಂಪರ್ಕವಾಗಿದೆ ಎಂದು ಅಪ್ರಾಪ್ತ ಬಾಲಕಿ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿದ್ದಳು. ಪ್ರಕರಣವೂ ದಾಖಲಾಗಿತ್ತು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ