ಆನೇಕಲ್: ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆಗೈದಿರುವ ಶಂಕೆ

ಆನೇಕಲ್(Anekal)​ ತಾಲೂಕಿನ ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯ ಮನೆಯೊಂದರ ಕೊಠಡಿಯಲ್ಲಿ ನಿನ್ನೆ(ಮಾ.11) ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರ ಜೊತೆಗೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆನೇಕಲ್: ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ, ಕೊಲೆಗೈದಿರುವ ಶಂಕೆ
ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯಲ್ಲಿ ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 12, 2024 | 5:52 PM

ಬೆಂಗಳೂರು, ಮಾ.12: ಜಿಲ್ಲೆಯ ಆನೇಕಲ್(Anekal)​ ತಾಲೂಕಿನ ಚಂದಾಪುರ ಹೆಡ್​ಮಾಸ್ಟರ್ ಬಡಾವಣೆಯ ಮನೆಯೊಂದರ 4ನೇ ಮಹಡಿಯ ಕೊಠಡಿಯಲ್ಲಿ ನಿನ್ನೆ(ಮಾ.11)  ನಗ್ನ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಮೃತ ಯುವತಿ ಒರಿಸ್ಸಾ ಮೂಲದ ಸಪನ್ ಕುಮಾರ್ ಜೊತೆಗಿದ್ದರು. ಯುವತಿ ಕೊಲೆಗೈದ ಬಳಿಕ ಸಪನ್ ನಾಪತ್ತೆಯಾಗಿರುವ ಸಾಧ್ಯತೆ ಇದ್ದು, ಸದ್ಯ ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಸಪನ್ ಕುಮಾರ್ ನಾಪತ್ತೆಯಾಗಿದ್ದಾನೆ.

ಕಳೆದ ಐದಾರು ದಿನಗಳ ಹಿಂದೆಯೇ ಕೊಲೆಗೈದಿರುವುದಾಗಿ ಅಂದಾಜಿಸಲಾಗಿದ್ದು, ಶವ ಪತ್ತೆಯಾದ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಈ ಹಿನ್ನಲೆ ಕೊಲೆಗೂ ಮೊದಲು ಡ್ರಿಂಕ್ಸ್ ಮಾಡಿರುವ ಸಾಧ್ಯತೆ ಇದೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಜೊತೆಗೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಶಿವರಾತ್ರಿಯಂದು ಡ್ಯಾನ್ಸ್ ಮಾಡುವಾಗ ಮೈ ಟಚ್ ಆಗಿದ್ದಕ್ಕೆ ಕೊಲೆ; ಮೂವರು ಆರೋಪಿಗಳು ಅರೆಸ್ಟ್

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕ್ಯಾಂಟರ್; ಪವಾಡ ಸದೃಶ ರೀತಿಯಲ್ಲಿ ಚಾಲಕ, ಕ್ಲಿನರ್ ಪಾರು

ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಉರುಳಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್​ ಚಾಲಕ ಮೂಬೀನ್ ಹಾಗೂ ಕ್ಲೀನರ್ ಆರೀಫ್ ಪಾರಾಗಿದ್ದು, ತ್ರಿಪುರದಿಂದ ದೆಹಲಿಗೆ ಬಟ್ಟೆ ಸಾಗಿಸುತ್ತಿದ್ದಾಗ ನಿದ್ರೆ ಮಂಪರಿನಲ್ಲಿ ಈ ದುರ್ಘಟನೆ ನಡೆದಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಟ್ಟೆ ಅಂಗಡಿ ಶೌಚಾಲಯದ ಕಿಟಕಿ ಮುರಿದು ಕಳ್ಳತನ; 6 ಲಕ್ಷ ರೂ. ದರೋಡೆ

ಕೋಲಾರ: ಶೌಚಾಲಯದ ಕಿಟಕಿ ಮುರಿದು ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ ಘಟನೆ ಕೋಲಾರ ನಗರದ ಎಂ.ಜಿ. ರಸ್ತೆಯಲ್ಲಿರುವ ಪ್ರತಿಷ್ಠಿತ ಬಿ.ಅರ್.ಎಂ ಬಟ್ಟೆ ಮಳಿಗೆಯಲ್ಲಿ ನಡೆದಿದೆ. ಸುಮಾರು 6 ಲಕ್ಷ ರೂಪಾಯಿ ಹಣ ಹಾಗೂ ಬೆಲೆ ಬಾಳುವ ಸೀರೆಗಳ ಕಳ್ಳತನವಾಗಿದ್ದು, ಜೊತೆಗೆ ಕ್ಯಾಶ್ ಬೋರ್ಡ್​ನಲ್ಲಿದ್ದ 6 ಲಕ್ಷ ಹಣ ಕದ್ದು‌ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ವು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Tue, 12 March 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ