AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ

ಫೋನ್ ಹ್ಯಾಕ್, ಬ್ಯಾಂಕ್ ಖಾತೆ ಹ್ಯಾಕ್, ಸೋಷಿಯಲ್​ ಮೀಡಿಯಾ ಖಾತೆಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಈಗ ಕರುಗಳನ್ನು ಹ್ಯಾಕ್​ ಮಾಡಿ ಕದಿಯುತ್ತಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ರಾಜ್ಯಸ್ಥಾನದಿಂದ ಬೆಂಗಳೂರಿಗೆ ವಿಮಾನದಲ್ಲಿ ಬಂದು ಕಾರುಗಳನ್ನು ಕದಿಯುತ್ತಿದ್ದ ಆರೋಪಗಳಿ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಾಜಸ್ಥಾನದಿಂದ ವಿಮಾನದಲ್ಲಿ ಬೆಂಗಳೂರಿಗೆ ಬಂದು ಕಾರು ಕದಿಯುವ ಖದೀಮರ ಬಂಧನ
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: |

Updated on: Nov 03, 2024 | 11:27 AM

Share

ಬೆಂಗಳೂರು, (ನವೆಂಬರ್ 03): ಕಾರು ಹ್ಯಾಕ್ ಮಾಡಿ ಕದ್ದೊಯ್ಯುತ್ತಿದ್ದ ಖದೀಮರನ್ನ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಫ್ಲೈಟ್​ನಲ್ಲಿ ಬಂದು ಕಾರುಗಳನ್ನ ಕದಿಯುತ್ತಿದ್ದ ಹೈಟೆಕ್ ಕಳ್ಳರನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದೆ. ಬೆಂಗಳೂರಿನ ಸುತ್ತಮುತ್ತ ಹೈಎಂಡ್ ಕಾರುಗಳನ್ನೇ ಟಾರ್ಗೆಟ್ ಮಾಡಿದ್ದ ಈ ಹ್ಯಾಕಿಂಗ್ ಟೀಂ, ಕಾರಿನ ಡೋರ್ ಗಳನ್ನ ಈಜಿಯಾಗಿ ಸಾಫ್ಟ್ ವೇರ್ ಹ್ಯಾಕ್ ಮಾಡುವದರ ಮೂಲಕ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಳ್ಳುತ್ತಾರೆ. ಇದೀಗ ಆರೋಪಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಕಾರಿನ ಡೋರ್ ಗಳನ್ನ ಈಜಿಯಾಗಿ ಸಾಫ್ಟ್ ವೇರ್ ಹ್ಯಾಕ್ ಮಾಡುವುದರ ಮೂಲಕ ಕಾರನ್ನ ಕಂಟ್ರೋಲ್ ಗೆ ತೆಗೆದುಕೊಳ್ಳುತ್ತಾರೆ. ರಾಜಸ್ಥಾನದಿಂದ ಫ್ಲೈಟ್ ನಲ್ಲೇ ಬಂದು ಆಪರೇಟ್ ಮಾಡುತ್ತಿದ್ದ ಖದೀಮರು, ಬ್ಯಾಡರಹಳ್ಳಿ, ಅನ್ನಪೂರ್ಣೇಶ್ವರಿನಗರ ಸೇರಿದಂತೆ ಹಲವು ಕಡೆ ಕಾರುಗಳನ್ನು ಕಳವು ಮಾಡಿದ್ದರು.

ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ಸ್ಕಾರ್ಪಿಯೋ ಕಾರನ್ನು ಕದ್ದಿದ್ದರು. ಇನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇನ್ನೋವಾ ಕ್ರಿಸ್ಟಾ ಕಾರನ್ನ ಕದ್ದೊಯ್ದಿದ್ದರು. ರಾಜ್ಯವಲ್ಲದೇ ಇತರ ರಾಜ್ಯಗಳಿಗೂ ಈ ಕಾರು ಹ್ಯಾಕಿಂಗ್ ಟೀಂ ಬೇಕಾಗಿದೆ. ಸದ್ಯಕ್ಕೆ ರಾಜಸ್ಥಾನ ಮೂಲದ ಮೂವರು ಆರೋಪಿಗಳನ್ನ ಅನ್ನಪೂರ್ಣೇಶ್ವರಿ ನಗರ ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ