ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ಗದಗನಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ಬೆಳಕಿಗೆ ಬಂದಿದ್ದು, ನಗರದ ಹುಡ್ಕೋ ಕಾಲೋನಿಯಲ್ಲಿ ಅವಿನಾಶ್​ ಎಂಬುವರಿಗೆ ಚಾಕು ಇರಿಯಲಾಗಿದೆ.

ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ
ಸಾಂಧರ್ಬಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Dec 07, 2022 | 9:10 PM

ಗದಗ: ನಗರದಲ್ಲಿ 2 ದಿನಗಳ ಹಿಂದೆ ಮೂವರಿಗೆ ಚಾಕು ಇರಿತ ಪ್ರಕರಣಗಳು ವರದಿಯಾಗಿದ್ದವು. ಈಗ ಗದಗನಲ್ಲಿ (Gadag) ಮತ್ತೊಂದು ಚಾಕು ಇರಿತ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಹುಡ್ಕೋ ಕಾಲೋನಿಯಲ್ಲಿ ಅವಿನಾಶ್​ ಎಂಬುವರಿಗೆ ಚಾಕು ಇರಿಯಲಾಗಿದೆ (knife stab). ಸದ್ಯ ಗಾಯಾಳು ಅವಿನಾಶ್​ನನ್ನು ಜಿಲ್ಲಾಸ್ಪತ್ರೆ ಜಿಮ್ಸ್​ಗೆ ದಾಖಲಿಸಲಾಗಿದೆ. ಗದಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡೆತ್​ನೋಟ್​ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ

ಬೆಂಗಳೂರು: ನೆಲಮಂಗಲ ತಾಲೂಕಿನ ದೇವರಹೊಸಹಳ್ಳಿಯಲ್ಲಿ ಡೆತ್​ನೋಟ್​ ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ನಿವಾಸಿ ಜಯಪ್ರಕಾಶ(39) ಮೃತ ವ್ಯಕ್ತಿ. ಸಾಲಬಾಧೆ, ಜಮೀನು ಪಹಣಿ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಮೃತದೇಹ ಹೊರತೆಗೆದಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೈಟೆನ್ಷನ್ ವೈರ್ ತಗುಲಿ ಬಾಲಕ ಸಾವು

ಬೆಂಗಳೂರು: ಹೈಟೆನ್ಷನ್ ವೈರ್ ತಗುಲಿ ಗಾಯಗೊಂಡಿದ್ದ ಬಾಲಕ ಚಂದ್ರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. 2 ದಿನಗಳ ಹಿಂದೆ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ಪಾರಿವಾಳ ಉಳಿಸೋಕೆ ಹೋಗಿ ವಿದ್ಯುತ್ ಸ್ಪರ್ಶವಾಗಿ ಬಾಲಕ ಸುಪ್ರೀತ್ ಮತ್ತು ಚಂದ್ರು ಗಾಯಗೊಂಡಿದ್ದರು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದ ಇಬ್ಬರು ಬಾಲಕರು ಮರಣ ಹೊಂದಿದ್ದಾರೆ.

ಮತ್ತಷ್ಟು ಅಪರಾಧ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 pm, Wed, 7 December 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ