AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಕಳೆದ 2 ತಿಂಗಳಲ್ಲಿ ಕಿಲ್ಲರ್ ಲಾರಿಗೆ 4ನೇ ಬಲಿ! ಕೊಪ್ಪಳ ಅಬಕಾರಿ ಇಲಾಖೆ ಡಿಸಿ ಸೆಲೀನಾ ಎಸಿಬಿ ಬಲೆಗೆ

ಬಿಬಿಎಂಪಿ ಕಸದ ಲಾರಿ ಹರಿದು ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಥಣಿಸಂದ್ರ ರೈಲ್ವೇ ಮೇಲ್ಸೇತುವೆ ಬಳಿ‌ ನಡೆದಿದೆ. ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 2ತಿಂಗಳಲ್ಲಿ ಕಸದ ಲಾರಿ ನಾಲ್ಕು ಮಂದಿಯನ್ನು ಬಲಿ ಪಡೆದುಕೊಂಡಿದೆ.

ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ಕಳೆದ 2 ತಿಂಗಳಲ್ಲಿ ಕಿಲ್ಲರ್ ಲಾರಿಗೆ 4ನೇ ಬಲಿ! ಕೊಪ್ಪಳ ಅಬಕಾರಿ ಇಲಾಖೆ ಡಿಸಿ ಸೆಲೀನಾ ಎಸಿಬಿ ಬಲೆಗೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:May 14, 2022 | 7:17 PM

ಬೆಂಗಳೂರು: ನಗರದಲ್ಲಿ ಕಸದ ಲಾರಿಯ ಅಪಘಾತ(Accident)ಕ್ಕೆ ನಾಗಕರಿಕರು ಬಲಿಯಾಗುತ್ತಿದ್ದು, ಇದೀಗ ಮತ್ತೊಬ್ಬ ವ್ಯಕ್ತಿಯನ್ನು ಬಿಬಿಎಂಪಿ(BBMP) ಕಸದ ಲಾರಿ ಬಲಿ ಪಡೆದುಕೊಂಡಿದೆ. ಯಮಸ್ವರೂಪಿಯಂತೆ ಬಂದ ಬಿಬಿಎಂಪಿ ಕಸದ ಲಾರಿ(Truck), ಥಣಿಸಂದ್ರ ರೈಲ್ವೇ ಮೇಲ್ಸೇತುವೆ ಬಳಿ‌ ಫುಡ್ ಡೆಲಿವರಿ ಬಾಯ್​ ಮೇಲೆ ಹರಿದುಹೋಗಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರನ್ನು ಯಾದಗಿರಿಯ ಸುರಪುರ ಮೂಲದ ದೇವಣ್ಣ (25) ಎಂದು ಗುರುತಿಸಲಾಗಿದೆ.

ದೇವಣ್ಣ ಅವರು ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಸಾಗುತ್ತಿದ್ದಾಗ ಹಿಂದಿನಿಂದ ಯಮಸ್ವರೂಪಿಯಂತೆ ಬಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದೇವಣ್ಣ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಜಾಲ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಕಸದ ಲಾರಿ ಚಾಲಕ ದಿನೇಶ್ ನಾಯ್ಕ್ (40) ಎಂಬವರನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 2 ತಿಂಗಳಿನಲ್ಲಿ ಕಸದ ಲಾರಿಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಮಾ.21ರಂದು ಹೆಬ್ಬಾಳದ ಬಳಿಯ ಬಳಿಯ ಅಂಡರ್ ಪಾಸ್​ನಲ್ಲಿ ನೀರು ನಿಂತಿದೆ ಎಂದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಅಕ್ಷಯ ಕಸದ ಲಾರಿ ಅಡಿಗೆ ಬಿದ್ದು ಸಾವನ್ನಪ್ಪಿದ್ದಳು. ಈ ಸಂಬಂಧ ಆರ್​ಟಿ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಮಾ.31ರಂದು ಬಾಗಲೂರು ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ರಾಮಯ್ಯ (70) ಎಂಬ ವ್ಯಕ್ತಿ, .18ರಂದು ಪದ್ಮಿನಿ ಎಂಬ ಎಸ್​ಬಿಐ ಉದ್ಯೋಗಿ ಬಲಿಯಾಗಿದ್ದರು.

ಅಬಕಾರಿ ಇಲಾಖೆ ಡಿಸಿ ಸೆಲೀನಾ ಎಸಿಬಿ ಬಲೆಗೆ

ಕೊಪ್ಪಳ: ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ಅಬಕಾರಿ ಡಿಸಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳ(ACB)ದ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಹೊಸ ಬಾರ್​​​​ಗೆ ಲೈಸೆನ್ಸ್ ನೀಡಲು 3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅದಿಕಾರಿಗಳು ದಾಳಿ ನಡೆಸಿ ಕೊಪ್ಪಳ ಅಬಕಾರಿ ಇಲಾಖೆ ಡಿಸಿ ಸೆಲೀನಾ ಅವರನ್ನು ಬಂಧಿಸಿದ್ದಾರೆ. ಹೊಸ ಬಾರ್​​​​ಗೆ ಲೈಸೆನ್ಸ್ ನೀಡಲು ಶೈಲಜಾ ಪ್ರಭಾಕರಗೌಡ ಎಂಬುವರಿಗೆ ಸೆಲೀನಾ ಅವರು 3 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಕುಷ್ಟಗಿ ಪಟ್ಟಣದಲ್ಲಿ ಶೈಲಜಾ ಅವರಿಂದ 3 ಲಕ್ಷ ಹಣದ ಪೈಕಿ 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಸೆಲೀನಾ, ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

Published On - 7:17 pm, Sat, 14 May 22

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​