AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ

ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಕುಳಿತು ಬಗೆಹರಿಸಿಕೊಳ್ಳುವ ವಿಚಾರಕ್ಕೂ ಕೊಲೆಗಳು ನಡೆಯುತ್ತಿವೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಕಾರವಾರ(Karwar)ದ ಸಾಯಿಕಟ್ಟಾದಲ್ಲಿ ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಗಣೇಶ ಪೂಜೆಗೆ ಇಟ್ಟ ಹಣದ ವಿಚಾರದಲ್ಲಿ ಸಹೋದರರ ನಡುವೆ ಗಲಾಟೆ; ಕೊಲೆಯಲ್ಲಿ ಅಂತ್ಯ
ಕೊಲೆಯಾದ ವ್ಯಕ್ತಿ, ಮುಗಿಲು ಮುಟ್ಟಿದ ಮನೆಯವರ ಆಕ್ರಂದನ
ಸೂರಜ್​, ಮಹಾವೀರ್​ ಉತ್ತುರೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 07, 2024 | 6:40 PM

Share

ಉತ್ತರ ಕನ್ನಡ, ಸೆ.07: ಮನೆಯಲ್ಲಿ ಗಣೇಶ ಪೂಜೆ ಹಾಗೂ ದೇವರಿಗೆ ಇಟ್ಟ ಹಣದ ವಿಚಾರದಲ್ಲಿ ಅಣ್ಣ-ತಮ್ಮನ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಕಾರವಾರ(Karwar)ದ ಸಾಯಿಕಟ್ಟಾದಲ್ಲಿ ನಡೆದಿದೆ. ಹಣಕಾಸಿನ ವಿಚಾರಕ್ಕೆ ಚಾಕುವಿನಿಂದ ಇರಿದು ಸಹೋದರನನ್ನೇ ಆರೋಪಿ ಮನೀಶ್ ಕಿರಣ್ ಹತ್ಯೆಗೈದಿದ್ದಾನೆ. ಸಂದೇಶ್ ಪ್ರಭಾಕರ್ ಬೋರ್ಕರ್, ಮೃತ ರ್ದುದೈವಿ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಕಾರವಾರ ಪೊಲೀಸರು ಆರೋಪಿ ಮನೀಶ್ ಕಿರಣ್​ನನ್ನು ಈಗಾಗಲೇ ಬಂಧಿಸಿದ್ದಾರೆ.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

ಬೆಂಗಳೂರು: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೆ ಅನುಷಾ ಎಂಬುವವರು ಕೊನೆಯುಸಿರೆಳೆದಿದ್ದಾರೆ. 2 ದಿನದ ಹಿಂದೆ ಅನುಷಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಬೆಂಗಳೂರಿನ ಹುಳಿಮಾವು ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. 5 ವರ್ಷದ ಹಿಂದೆ ಶ್ರೀಹರಿ ಜೊತೆ ಅನುಷಾ ಮದುವೆ ಆಗಿತ್ತು. ಶ್ರೀಹರಿ, ಅನುಷಾ ದಂಪತಿಗೆ ಎರಡು ವರ್ಷದ ಮಗು ಕೂಡ ಇದೆ. ಆದರೆ, ಪತಿ ಅನೈತಿಕ ಸಂಬಂಧ ವಿಚಾರವಾಗಿ ದಂಪತಿ ನಡುವೆ ಗಲಾಟೆಯಾಗಿದ್ದು, ಇದರಿಂದ ಮನನೊಂದು ಪೆಟ್ರೋಲ್​ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಗಾಯಗೊಂಡಿದ್ದ ಅನುಷಾಳನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುರಿಗಾಯಿ ರಕ್ಷಣೆ ಮಾಡಿದ ಮೀನುಗಾರರು

ಕಾರು, ಆಟೋ ನಡುವೆ ಮುಖಾಮುಖಿ ಡಿಕ್ಕಿ, ಆಟೋ ಸವಾರ ದುರ್ಮರಣ

ಬೆಂಗಳೂರು: ನಗರದ ಮುದ್ದಿನಪಾಳ್ಯದಲ್ಲಿ ಕಾರು ಡಿಕ್ಕಿಯಾಗಿ ಆಟೋ ಚಾಲಕ ಕಿರಣ್(32) ಸಾವನ್ನಪ್ಪಿದ್ದ ಘಟನೆ ನಿನ್ನೆ(ಸೆ.06) ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಇದೀಗ ಕಾರು ಚಾಲಕ ಗುರುರಾಘವೇಂದ್ರ ವಿರುದ್ಧ ಕೇಸ್ ದಾಖಲಾಗಿದ್ದು, ಜ್ಞಾನಭಾರತಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Sat, 7 September 24

Follow Us
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್