AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಒಟಿಪಿ ವಿಷಯಕ್ಕೆ ಜಗಳ, ಟೆಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಓಲಾ ಕ್ಯಾಬ್ ಡ್ರೈವರ್

ಏಳು ಜನರು ಇರುವ ಕಾರಣ ನೀವು ಎಸ್​​ಯುವಿ ಬುಕ್ ಮಾಡಬೇಕಿತ್ತು ಎಂದು ಕ್ಯಾಬ್ ಚಾಲಕ ಉಮೆಂದರ್​​ಗೆ ಹೇಳಿ ಜಗಳ ಶುರು ಮಾಡಿದ್ದಾರೆ. ನಂತರ ಉಮೆಂದರ್ ತಲೆಗೆ ಹೊಡೆದಿದ್ದು, ನೆಲಕ್ಕೆ ಬೀಳುವ ತನಕ ಹಲ್ಲೆ ನಡೆಸಿದ್ದಾರೆ.

ಚೆನ್ನೈ: ಒಟಿಪಿ ವಿಷಯಕ್ಕೆ ಜಗಳ, ಟೆಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಓಲಾ ಕ್ಯಾಬ್ ಡ್ರೈವರ್
ಆರೋಪಿ ರವಿ
TV9 Web
| Edited By: |

Updated on: Jul 05, 2022 | 2:47 PM

Share

ಚೆನ್ನೈ: ಚೆನ್ನೈನ ಓಲ್ಡ್ ಮಹಾಬಲಿಪುರಂ ರಸ್ತೆಯಲ್ಲಿ (OMR) ಕ್ಯಾಬ್ ಬುಕ್ ಮಾಡಿದ ಟೆಕಿಯೊಬ್ಬರು ಒಟಿಪಿ ನೀಡುವುದಕ್ಕೆ ತಡ ಮಾಡಿದರೆಂದು ಕೋಪಗೊಂಡ ಓಲಾ ಕ್ಯಾಬ್ ಚಾಲಕ (Ola cab driver)  ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಭಾನುವಾರ ನಡೆದಿದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ ಹತ್ಯೆಗೀಡಾದ ಟೆಕಿಯನ್ನು 34ರ ಹರೆಯದ ಎಚ್ ಉಮೆಂದರ್ ಎಂದು ಗುರುತಿಸಲಾಗಿದೆ. ಉಮೆಂದರ್ ಗುಡುವಾಂಚೇರಿ ನಿವಾಸಿ ಆಗಿದ್ದು, ಕೊಯಂಬತ್ತೂರಿನಲ್ಲಿ ಸಾಫ್ಟ್​​ವೇರ್ ಡೆವೆಲಪರ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ 3.30ಕ್ಕೆ ಸಿನಿಮಾ ನೋಡಲು ನವಲೂರ್​​ನಲ್ಲಿರುವ ಮಾಲ್​​​ಗೆ ಉಮೆಂದರ್ ಕುಟುಂಬ ಸಮೇತ ಹೊರಟಿದ್ದರು. ಉಮೆಂದರ್ ಅವರು ಪತ್ನಿ ಭವ್ಯಾ, ಇಬ್ಬರು ಮಕ್ಕಳು, ಭವ್ಯಾ ಅವರ ಸಹೋದರಿ ಮತ್ತು ಅವರ ಮಕ್ಕಳು ಜತೆಯಾಗಿ ಹೊರಟಿದ್ದರು. ಒಟಿಪಿ ಹೇಳುವ ಮುನ್ನವೇ ವಾಹನಕ್ಕೆ ಹತ್ತಿದ್ದಕ್ಕೆ ಕ್ಯಾಬ್ ಚಾಲಕ ಎನ್ ರವಿ (41) ಸಿಟ್ಟುಗೊಂಡಿದ್ದರು. ವಾಹನದೊಳಗೆ ಹತ್ತಿದ್ದವರನ್ನು ಕೆಳಗಿಳಿಯುವಂತೆ ರವಿ ಗದರಿಸಿದ್ದರು.  ಏಳು ಜನರು ಇರುವ ಕಾರಣ ನೀವು ಎಸ್​​ಯುವಿ ಬುಕ್ ಮಾಡಬೇಕಿತ್ತು ಎಂದು ಕ್ಯಾಬ್ ಚಾಲಕ ಉಮೆಂದರ್​​ಗೆ ಹೇಳಿ ಜಗಳ ಶುರು ಮಾಡಿದ್ದಾರೆ. ನಂತರ ಉಮೆಂದರ್ ತಲೆಗೆ ಹೊಡೆದಿದ್ದು, ನೆಲಕ್ಕೆ ಬೀಳುವ ತನಕ ಹಲ್ಲೆ ನಡೆಸಿದ್ದಾರೆ.

ಉಮೆಂದರ್ ಅವರ ಪತ್ನಿಯ ಪ್ರಕಾರ ರವಿಯ ಹೊಡೆತಕ್ಕೆ ತನ್ನ ಪತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಕರೆತರುವಾಗಲೇ ಅವರ ಪ್ರಾಣ ಹೋಗಿದೆ ಎಂದು ಆಸ್ಪತ್ರೆಯವರು ಹೇಳಿದ್ದಾರೆ. ಏತನ್ಮಧ್ಯೆ, ಹಲ್ಲೆ ನಡೆಸಿದ ರವಿ ಅಲ್ಲಿಂದ ಓಡಿ ಹೋಗಿದ್ದಾರೆ. ಈ ಪ್ರಕರಣ ಬಗ್ಗೆ ಕೇಳಂಬಾಕಂ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿ ರವಿಯನ್ನು ಬಂಧಿಸಿದ್ದಾರೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್