AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಒಟಿಪಿ ವಿಷಯಕ್ಕೆ ಜಗಳ, ಟೆಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಓಲಾ ಕ್ಯಾಬ್ ಡ್ರೈವರ್

ಏಳು ಜನರು ಇರುವ ಕಾರಣ ನೀವು ಎಸ್​​ಯುವಿ ಬುಕ್ ಮಾಡಬೇಕಿತ್ತು ಎಂದು ಕ್ಯಾಬ್ ಚಾಲಕ ಉಮೆಂದರ್​​ಗೆ ಹೇಳಿ ಜಗಳ ಶುರು ಮಾಡಿದ್ದಾರೆ. ನಂತರ ಉಮೆಂದರ್ ತಲೆಗೆ ಹೊಡೆದಿದ್ದು, ನೆಲಕ್ಕೆ ಬೀಳುವ ತನಕ ಹಲ್ಲೆ ನಡೆಸಿದ್ದಾರೆ.

ಚೆನ್ನೈ: ಒಟಿಪಿ ವಿಷಯಕ್ಕೆ ಜಗಳ, ಟೆಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಓಲಾ ಕ್ಯಾಬ್ ಡ್ರೈವರ್
ಆರೋಪಿ ರವಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 05, 2022 | 2:47 PM

Share

ಚೆನ್ನೈ: ಚೆನ್ನೈನ ಓಲ್ಡ್ ಮಹಾಬಲಿಪುರಂ ರಸ್ತೆಯಲ್ಲಿ (OMR) ಕ್ಯಾಬ್ ಬುಕ್ ಮಾಡಿದ ಟೆಕಿಯೊಬ್ಬರು ಒಟಿಪಿ ನೀಡುವುದಕ್ಕೆ ತಡ ಮಾಡಿದರೆಂದು ಕೋಪಗೊಂಡ ಓಲಾ ಕ್ಯಾಬ್ ಚಾಲಕ (Ola cab driver)  ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಭಾನುವಾರ ನಡೆದಿದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಪ್ರಕಾರ ಹತ್ಯೆಗೀಡಾದ ಟೆಕಿಯನ್ನು 34ರ ಹರೆಯದ ಎಚ್ ಉಮೆಂದರ್ ಎಂದು ಗುರುತಿಸಲಾಗಿದೆ. ಉಮೆಂದರ್ ಗುಡುವಾಂಚೇರಿ ನಿವಾಸಿ ಆಗಿದ್ದು, ಕೊಯಂಬತ್ತೂರಿನಲ್ಲಿ ಸಾಫ್ಟ್​​ವೇರ್ ಡೆವೆಲಪರ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ 3.30ಕ್ಕೆ ಸಿನಿಮಾ ನೋಡಲು ನವಲೂರ್​​ನಲ್ಲಿರುವ ಮಾಲ್​​​ಗೆ ಉಮೆಂದರ್ ಕುಟುಂಬ ಸಮೇತ ಹೊರಟಿದ್ದರು. ಉಮೆಂದರ್ ಅವರು ಪತ್ನಿ ಭವ್ಯಾ, ಇಬ್ಬರು ಮಕ್ಕಳು, ಭವ್ಯಾ ಅವರ ಸಹೋದರಿ ಮತ್ತು ಅವರ ಮಕ್ಕಳು ಜತೆಯಾಗಿ ಹೊರಟಿದ್ದರು. ಒಟಿಪಿ ಹೇಳುವ ಮುನ್ನವೇ ವಾಹನಕ್ಕೆ ಹತ್ತಿದ್ದಕ್ಕೆ ಕ್ಯಾಬ್ ಚಾಲಕ ಎನ್ ರವಿ (41) ಸಿಟ್ಟುಗೊಂಡಿದ್ದರು. ವಾಹನದೊಳಗೆ ಹತ್ತಿದ್ದವರನ್ನು ಕೆಳಗಿಳಿಯುವಂತೆ ರವಿ ಗದರಿಸಿದ್ದರು.  ಏಳು ಜನರು ಇರುವ ಕಾರಣ ನೀವು ಎಸ್​​ಯುವಿ ಬುಕ್ ಮಾಡಬೇಕಿತ್ತು ಎಂದು ಕ್ಯಾಬ್ ಚಾಲಕ ಉಮೆಂದರ್​​ಗೆ ಹೇಳಿ ಜಗಳ ಶುರು ಮಾಡಿದ್ದಾರೆ. ನಂತರ ಉಮೆಂದರ್ ತಲೆಗೆ ಹೊಡೆದಿದ್ದು, ನೆಲಕ್ಕೆ ಬೀಳುವ ತನಕ ಹಲ್ಲೆ ನಡೆಸಿದ್ದಾರೆ.

ಉಮೆಂದರ್ ಅವರ ಪತ್ನಿಯ ಪ್ರಕಾರ ರವಿಯ ಹೊಡೆತಕ್ಕೆ ತನ್ನ ಪತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದು, ಕರೆತರುವಾಗಲೇ ಅವರ ಪ್ರಾಣ ಹೋಗಿದೆ ಎಂದು ಆಸ್ಪತ್ರೆಯವರು ಹೇಳಿದ್ದಾರೆ. ಏತನ್ಮಧ್ಯೆ, ಹಲ್ಲೆ ನಡೆಸಿದ ರವಿ ಅಲ್ಲಿಂದ ಓಡಿ ಹೋಗಿದ್ದಾರೆ. ಈ ಪ್ರಕರಣ ಬಗ್ಗೆ ಕೇಳಂಬಾಕಂ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿ ರವಿಯನ್ನು ಬಂಧಿಸಿದ್ದಾರೆ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ