AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ
ಸೇನಾಧಿಕಾರಿImage Credit source: NDTV
ನಯನಾ ರಾಜೀವ್
|

Updated on: Sep 12, 2023 | 10:45 AM

Share

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಕ್ಲೆಮೆಂಟ್ ಟೌನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ರಾಮೇಂದು ಉಪಾಧ್ಯಾಯ ಮಹಿಳೆ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದರು, ಆಕೆ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿದ್ದಾರೆ.ಪಂಡಿತ್ವಾರಿ ಪ್ರೇಮ್ ನಗರದಲ್ಲಿರುವ ಅವರ ಮನೆಯಿಂದ ಅವರನ್ನು ಬಂಧಿಸಲಾಗಿದೆ.

ಮೃತ ಶ್ರೇಯಾ ಶರ್ಮಾ ಸಿಲಿಗುರಿಯ ಡ್ಯಾನ್ಸ್​ ಬಾರ್​ನಲ್ಲಿ ಆರೋಪಿಯನ್ನು ಭೇಟಿಯಾಗಿದ್ದಳು, ಅವರ ಸಂಬಂಧ ಮೂರು ವರ್ಷಗಳ ಕಾಲ ಮುಂದುವರೆದಿತ್ತು. ಡೆಹ್ರಾಡೂನ್​ಗೆ ವರ್ಗಾವಣೆಯಾದಾಗ ಶ್ರೇಯಾಳನ್ನು ತನ್ನೊಂದಿಗೆ ಡೆಹ್ರಾಡೂನ್​ಗೆ ಕರೆದೊಯ್ದಿದ್ದ, ಬಾಡಿಗೆ ಮನೆಯಲ್ಲಿರಿಸಿದ್ದ ಎಂಬುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: ಧಾರವಾಡ: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಉಪಾಧ್ಯಾಯ ಶನಿವಾರ ರಾತ್ರಿ ರಾಜ್​ಪುರ ರಸ್ತೆಯ ಕ್ಲಬ್​ನಲ್ಲಿ ಮಹಿಳೆಯೊಂದಿಗೆ ಮದ್ಯ ಸೇವಿಸಿದ್ದರು. ಆಕೆಯನ್ನು ಲಾಂಗ್​ ಡ್ರೈವ್​ಗೆ ಕರೆದೊಯ್ಯಲು ಮುಂದಾಗಿದ್ದ, ಆಗ ನಗರದ ಹೊರವಲಯದಲ್ಲಿರುವ ನಿರ್ಜನ ಪ್ರದೇಶವಾದ ಥಾನೋ ರಸ್ತೆಗೆ ತಲುಪಿದಾಗ ಮಧ್ಯರಾತ್ರಿ 1.30 ಆಗಿತ್ತು. ಕಾರು ನಿಲ್ಲಿಸಿ ಮಹಿಳೆಯ ತಲೆಗೆ ಸುತ್ತಿಗೆಯಿಂದ ಪದೇ ಪದೇ ಹೊಡೆದು ಹತ್ಯೆ ಮಾಡಿದ್ದಾನೆ.

ಆಕೆಯನ್ನು ಕೊಂದು ಶವವನ್ನು ರಸ್ತೆಬದಿಯಲ್ಲಿ ಎಸೆದು ಓಡಿ ಹೋಗಿದ್ದಾನೆ. ಸೇನಾಧಿಕಾರಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಯನ್ನು ಮದುವೆಯಾಗುವಂತೆ ಮಹಿಳೆ ಒತ್ತಡ ಹೇರುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ