AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಸೇನಾಧಿಕಾರಿಯಿಂದ ಮಹಿಳೆಯ ಹತ್ಯೆ
ಸೇನಾಧಿಕಾರಿImage Credit source: NDTV
ನಯನಾ ರಾಜೀವ್
|

Updated on: Sep 12, 2023 | 10:45 AM

Share

ಮದುವೆಯಾಗುವಂತೆ ಒತ್ತಾಯ ಮಾಡಿದಳೆಂದು ಸೇನಾಧಿಕಾರಿಯೊಬ್ಬರು ನೇಪಾಳಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಡೆಹ್ರಾಡೂನ್​ನಲ್ಲಿ ನಡೆದಿದೆ. ಸೋಮವಾರ ಸಿರ್ವಾಲ್​ಗಢ ಪ್ರದೇಶದಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು, ಇದಾದ ಬಳಿಕ ಪೊಲೀಸರು ತನಿಖೆ ನಡೆಸಿ, ಉತ್ತರಾಖಂಡದ ಡೆಹ್ರಾಡೂನ್​ನಲ್ಲಿ ನಿಯೋಜನೆಗೊಂಡಿರುವ ಸೇನೆಯ ಲೆಫ್ಟಿನೆಂಟ್ ಕರ್ನಲ್​ನನ್ನು ಬಂಧಿಸಲಾಗಿದೆ. ಮಹಿಳೆ ನೇಪಾಳದವರಾಗಿದ್ದು, ಸಿಲಿಗುರಿಯಲ್ಲಿ ವಾಸವಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಕ್ಲೆಮೆಂಟ್ ಟೌನ್ ಕಂಟೋನ್ಮೆಂಟ್ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ರಾಮೇಂದು ಉಪಾಧ್ಯಾಯ ಮಹಿಳೆ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದರು, ಆಕೆ ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಹೀಗಾಗಿ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿದ್ದಾರೆ.ಪಂಡಿತ್ವಾರಿ ಪ್ರೇಮ್ ನಗರದಲ್ಲಿರುವ ಅವರ ಮನೆಯಿಂದ ಅವರನ್ನು ಬಂಧಿಸಲಾಗಿದೆ.

ಮೃತ ಶ್ರೇಯಾ ಶರ್ಮಾ ಸಿಲಿಗುರಿಯ ಡ್ಯಾನ್ಸ್​ ಬಾರ್​ನಲ್ಲಿ ಆರೋಪಿಯನ್ನು ಭೇಟಿಯಾಗಿದ್ದಳು, ಅವರ ಸಂಬಂಧ ಮೂರು ವರ್ಷಗಳ ಕಾಲ ಮುಂದುವರೆದಿತ್ತು. ಡೆಹ್ರಾಡೂನ್​ಗೆ ವರ್ಗಾವಣೆಯಾದಾಗ ಶ್ರೇಯಾಳನ್ನು ತನ್ನೊಂದಿಗೆ ಡೆಹ್ರಾಡೂನ್​ಗೆ ಕರೆದೊಯ್ದಿದ್ದ, ಬಾಡಿಗೆ ಮನೆಯಲ್ಲಿರಿಸಿದ್ದ ಎಂಬುದನ್ನು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಮತ್ತಷ್ಟು ಓದಿ: ಧಾರವಾಡ: ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ಉಪಾಧ್ಯಾಯ ಶನಿವಾರ ರಾತ್ರಿ ರಾಜ್​ಪುರ ರಸ್ತೆಯ ಕ್ಲಬ್​ನಲ್ಲಿ ಮಹಿಳೆಯೊಂದಿಗೆ ಮದ್ಯ ಸೇವಿಸಿದ್ದರು. ಆಕೆಯನ್ನು ಲಾಂಗ್​ ಡ್ರೈವ್​ಗೆ ಕರೆದೊಯ್ಯಲು ಮುಂದಾಗಿದ್ದ, ಆಗ ನಗರದ ಹೊರವಲಯದಲ್ಲಿರುವ ನಿರ್ಜನ ಪ್ರದೇಶವಾದ ಥಾನೋ ರಸ್ತೆಗೆ ತಲುಪಿದಾಗ ಮಧ್ಯರಾತ್ರಿ 1.30 ಆಗಿತ್ತು. ಕಾರು ನಿಲ್ಲಿಸಿ ಮಹಿಳೆಯ ತಲೆಗೆ ಸುತ್ತಿಗೆಯಿಂದ ಪದೇ ಪದೇ ಹೊಡೆದು ಹತ್ಯೆ ಮಾಡಿದ್ದಾನೆ.

ಆಕೆಯನ್ನು ಕೊಂದು ಶವವನ್ನು ರಸ್ತೆಬದಿಯಲ್ಲಿ ಎಸೆದು ಓಡಿ ಹೋಗಿದ್ದಾನೆ. ಸೇನಾಧಿಕಾರಿಗೆ ಈಗಾಗಲೇ ಮದುವೆಯಾಗಿದ್ದು, ಆಕೆಯನ್ನು ಮದುವೆಯಾಗುವಂತೆ ಮಹಿಳೆ ಒತ್ತಡ ಹೇರುತ್ತಿದ್ದಳು ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ